AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಪತಿ ಸೇರಿದಂತೆ ಮನೆ ಸದಸ್ಯರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಐಶ್ವರ್ಯ ಸಾವಿನ ಬಳಿಕ ಗೋವಾದ ಕ್ಯಾಸಿನೋದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ಒಂದು ರೋಚಕ.

ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Nov 03, 2023 | 1:29 PM

Share

ಬೆಂಗಳೂರು, ನ.3: ಪತಿ ಸೇರಿದಂತೆ ಮನೆ ಸದಸ್ಯರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಐಶ್ವರ್ಯ ಆತ್ಮಹತ್ಯೆ (Suicide) ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಐಶ್ವರ್ಯ ಸಾವಿನ ಬಳಿಕ ಗೋವಾದ ಕ್ಯಾಸಿನೋದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ಒಂದು ರೋಚಕ.

ಮೃತೆ ಐಶ್ವರ್ಯಾಳ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್ ಹಾಗೂ ಆತನ ಹೆಂಡತಿ ತಸ್ಮಯ್ ಗೋವಾಗೆ ಹೋಗಿದ್ದರು. ಅಲ್ಲಿ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು. ಎಲ್ಲರ ಮೊಬೈಲ್ ಫೋನ್​ಗಳನ್ನು ಸ್ವಿಚ್ ಆಪ್ ಮಾಡಿಕೊಂಡು ಎಂಜಾಯ್ ಮಾಡುತ್ತಿದ್ದರು.

ಸುಮಾರು‌ ಮೂರು ದಿನಗಳ ಸಿಡಿಆರ್ ಪರಿಶೀಲನೆ ಬಳಿಕ ಆರೋಪಿಗಳ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಮೂರು ದಿನಗಳ ಕಾಲ ಎಲ್ಲರೂ ಗೋವಾದ ಎರಡು ರೆಸಾರ್ಟ್​ನಲ್ಲಿ ನೆಲೆಸಿದ್ದರು. ಕೊನೆಗೆ ಎರಡು ತಂಡಗಳು ಗೋವಾಗೆ ಹೋಗಿದ್ದು ರೆಸಾರ್ಟ್​​ಗಳ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

ಈ ವೇಳೆ ಐವರು ಆರೋಪಿಗಳು ವಾಸ್ತವ್ಯ ಇರುವುದು ತಿಳಿದುಬಂದಿದೆ. ನಂತರ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಾ ಇರುವುದು ಗೊತ್ತಾಗಿದೆ. ಐವರು ಗೋವಾದಿಂದ ಮುಂಬೈಗೆ ಶಿಫ್ಟ್ ಆಗುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಗೋವಿಂದರಾಜ ನಗರ ಠಾಣಾ ಪೊಲೀಸರು, ಮುಂಬೈನಲ್ಲಿ‌ ಮಾರ್ಗ ಮಧ್ಯೆ ಬಂಧಿಸಿದ್ದಾರೆ.

ಪ್ರಕಣರದಲ್ಲಿ ಇನ್ನೂ ಐವರು ಆರೋಪಿಗಳು ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಯುಎಸ್​ನಲ್ಲಿ ಇರುವ ಶಾಲಿನಿ ಓಂಪ್ರಕಾಶ್ ಬಂಧನಕ್ಕೂ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ರೆಡ್ ಕಾರ್ನರ್ ನೊಟೀಸ್ ಹೊರಡಿಸಲು ಮುಂದಾಗಿದ್ದಾರೆ. ಡಿಜಿ ಐಜಿಪಿ ಅನುಮತಿ ಪಡೆದು ರೆಡ್ ಕಾರ್ನರ್ ನೋಟೀಸ್ ಹೊರಟಿಸಲು ಸಿದ್ಧತೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ