AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಹನಿಟ್ರ್ಯಾಪ್​​​​ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವತಿಯೊಬ್ಬಳು ತನ್ನ ಮೇಲೆ ಗ್ಯಾಂಗ್‌ರೇಪ್ ನಡೆದಿದೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ನಿಖಿಲ್ ಮತ್ತು ಡಿಕ್ಸನ್ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಾರ್ಟಿಯೊಂದಕ್ಕೆ ಕರೆದೊಯ್ದು ಬಲವಂತವಾಗಿ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಯುವತಿ ಆರೋಪಿಸಿದ್ದು, ಈ ಪ್ರಕರಣವು ನಗರದಲ್ಲಿ ಸಂಚಲನ ಮೂಡಿಸಿದೆ.

Bengaluru: ಹನಿಟ್ರ್ಯಾಪ್​​​​ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು
ಆರೋಪಿತ ಯುವಕರುImage Credit source: Tv9 Kannada
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Feb 23, 2026 | 2:33 PM

Share

ಬೆಂಗಳೂರು, ಫೆಬ್ರವರಿ 23: ಹನಿಟ್ರ್ಯಾಪ್​​​​ ಕೇಸ್ ಆರೋಪಿತ ಯುವತಿ ತನ್ನ ಮೇಲೆ ಗ್ಯಾಂಗ್​ರೇಪ್ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪಾರ್ಟಿಯೊಂದಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಸಂತ್ರಸ್ತೆ ದೂರಿದ್ದು, ಈ ಸಂಬಂಧ ನಿಖಿಲ್​ ಮತ್ತು ಡಿಕ್ಸನ್​ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಫೆ.22ರಂದು ಎಫ್​​ಐಆರ್​​ ದಾಖಲಾಗಿದೆ. ಇದಕ್ಕೂ ಮುನ್ನ ಒಂದು ದಿನ ಮೊದಲಷ್ಟೇ ಅಂದರೆ ಫೆ.21ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ಹನಿಟ್ರ್ಯಾಪ್ ಕೇಸ್ ದಾಖಲಾಗಿತ್ತು.

ಯುವತಿ ಆರೋಪವೇನು?

2026ರ ಜನವರಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಡಿಕ್ಸನ್​ ಸಾಂಡ್ರಾ ಎಂಬಾತನ ಪರಿಚಯವಾಗಿದ್ದು, ಸ್ನೇಹ ಪ್ರೀತಿಗೆ ತಿರುಗಿತ್ತು. ಬಳಿಕ ಇಬ್ಬರೂ ಹಲವು ಬಾರಿ ಭೇಟಿ ಆಗಿದ್ದೆವು. ಹೀಗಿರುವಾಗ ಫೆಬ್ರವರಿ 14ರಂದು ಕರೆ ಮಾಡಿದ್ದ ಡಿಕ್ಸನ್, ಜಕ್ಕೂರಿನಲ್ಲಿರುವ ವಿಲ್ಲಾವೊಂದಕ್ಕೆ ಪಾರ್ಟಿಗೆ ಬರುವಂತೆ ಕರೆದಿದ್ದ. ಹೀಗಾಗಿ ಗೆಳತಿಯ ಜೊತೆ ತಾನು ಮಧ್ಯರಾತ್ರಿ ಸುಮಾರು 1.15ಕ್ಕೆ ವಿಲ್ಲಾಗೆ ತೆರಳಿದ್ದು, ಈ ವೇಳೆ ಡಿಕ್ಸನ್​​ ಆತನ ಗೆಳೆಯ ಎಂದು ನಿಖಿಲ್​​ ಎಂಬಾತನನ್ನು ಪರಿಚಯಿಸಿದ್ದ. ಪಾರ್ಟಿ ನಡುವೆ ಡಿಕ್ಸನ್​​ ಮತ್ತು ನಿಖಿಲ್​​ ಸೇರಿ ಬಲವಂತವಾಗಿ ಮಾತ್ರೆಯನ್ನು ತಿನ್ನಿಸಿದ್ದಾರೆ. ಈ ವೇಳೆ ಕಣ್ಣುಗಳು ಮಂಜಾಗತೊಡಗಿದ್ದು, ಡಿಕ್ಸನ್​​ ರೂಮಿಗೆ ಕರೆದೊಯ್ದು ತನ್ನ ಮಲಗಿಸಿದ್ದ. ಆದಾದ ನಂತರ ನನಗೆ ಪ್ರಜ್ಞೆತಪ್ಪಿದೆ. ನನಗೆ ಎಚ್ಚರ ಆದಾಗ ನನ್ನ ದೇಹದ ಮೇಲೆ ಅರ್ಧಂಬರ್ಧ ಬಟ್ಟೆ ಇರುವುದರ ಜೊತೆಗೆ ಪಕ್ಕದಲ್ಲಿ ನಿಖಿಲ್​​ ಇರುವುದನ್ನು ಕಂಡು ಶಾಕ್​​ ಆಗಿದ್ದೇನೆ ಎಂದು ಯುವತಿ ಆರೋಪಿಸಿದ್ದಾಳೆ.

ಇದನ್ನೂ ಓದಿ: ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್; ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

ಮೊದಲೇ ಗಾಬರಿಗೊಂಡಿದ್ದ ತಾನು ಡಿಕ್ಸನ್​​ ಬಗ್ಗೆ ಕೇಳಿದಾಗ ಹೊರಗಿನಿಂದ ಬಂದ ಆತ ತನ್ನ ಬಟ್ಟೆಯನ್ನು ಕಿತ್ತೆಸೆದಿದ್ದು, ಇಬ್ಬರೂ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಈ ವೇಳೆ ತಾನು ಜೋರಾಗಿ ಕಿರುಚಾಡಿದ ಪರಿಣಾಮ ನನ್ನನ್ನು ರೂಮ್​​ನಲ್ಲಿ ಲಾಕ್​​ ಮಾಡಲಾಗಿತ್ತು. ಬಳಿಕ ಮರುದಿನ ಮಧ್ಯಾಹ್ನದ ವೇಳೆಗೆ ಆರೋಪಿಗಳು ರೂಮ್​​ ಬಾಗಿಲು ತೆರೆದಿದ್ದು, ರಾತ್ರಿ ನಡೆದ ವಿಚಾರವನ್ನು ಯಾರಿಗಾದರೂ ಅಥವಾ ಪೊಲೀಸರಿಗೆ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ನಿಖಿಲ್​​ ಬೆದರಿಕೆ ಹಾಕಿರೋದಾಗಿ ಯುವತಿ ಆರೋಪಿಸಿದ್ದಾಳೆ.

ಇನ್ನು ಫೆ.21ರಂದು ಇದೇ ಯುವತಿಯ ವಿರುದ್ಧ ನಿಖಿಲ್​​ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ನಿಖಿಲ್​​ ಮತ್ತು ಡಿಕ್ಸನ್​​ ತನಗೆ ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ ನಡೆಸಿರೋದಾಗಿ ಯುವತಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾಳೆ. ಅದರ ಬೆನ್ನಲ್ಲೇ ಖಾಸಗಿ ವಾಹನಿಯ ಕ್ರೈಂ ಬ್ಯೂರೋ ಹೆಡ್​​ ಎಂದು ಪರಿಚಯಿಸಿಕೊಂಡ ವ್ಯಕ್ತಿಯೋರ್ವರ ಕರೆ ಬಂದಿದ್ದು, ನಾವು ಹೇಳಿದ ಜಾಗಕ್ಕೆ ನೀವು ಬರಬೇಕು. ಹೇಳಿದಷ್ಟು ಹಣ ಕೊಡಬೇಕು. ಇಲ್ಲದಿದ್ದರೆ ಈ ವಿಚಾರವನ್ನು ನ್ಯೂಸ್​​ ಚಾನೆಲ್​​ನಲ್ಲಿ ಹಾಕಿ ಮಾನ ತೆಗೆಯೋ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ