ಹೊಂಗಸಂದ್ರ ಹಾಟ್​ಸ್ಪಾಟ್​: ಆಶಾ ಕಾರ್ಯಕರ್ತೆಯರ ಜೊತೆ ಸ್ಥಳೀಯರ ಕಿರಿಕ್

ಬೆಂಗಳೂರು: ಹೊಂಗಸಂದ್ರ ವಾರ್ಡ್​ನಲ್ಲಿ 15 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಂಗಸಂದ್ರ ವಾರ್ಡ್ ಹಾಗೂ ಸುತ್ತಮುತ್ತ ಏರಿಯಾಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಆದರೆ ಮನೆಯೊಳಗೆ ಹೋಗುವಂತೆ ಹೇಳಿದ್ದಕ್ಕೆ ಸ್ಥಳೀಯರು ಆಶಾ ಕಾರ್ಯಕರ್ತೆಯರ ಜತೆ ಗಲಾಟೆ ಮಾಡಿರುವ ಘಟನೆ ನಡೆದಿದೆ. ನಗರದ ಹೊಂಗಸಂದ್ರ ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಒಳಗಡೆ ಹೋಗಲು ಹೇಳಿದ್ದಕ್ಕೆ ಸ್ಥಳೀಯರು ವಾಗ್ವಾದಕ್ಕಿಳಿದಿದ್ದಾರೆ. ಏನಪ್ಪ ನಿನಗೆ ಕಾಮನ್​ಸೆನ್ಸ್ ಇಲ್ವಾ?, ಕನಿಷ್ಠ ಜ್ಞಾನವೂ ಇಲ್ವಾ? ಮನೆ ಒಳಗೆ ಹೋಗಿ ಎಂದಿದ್ದಕ್ಕೆ ನಮಗೆ ಬೆಳಗ್ಗೆ ಉಪಾಹಾರ […]

ಹೊಂಗಸಂದ್ರ ಹಾಟ್​ಸ್ಪಾಟ್​: ಆಶಾ ಕಾರ್ಯಕರ್ತೆಯರ ಜೊತೆ ಸ್ಥಳೀಯರ ಕಿರಿಕ್
ಸಾಧು ಶ್ರೀನಾಥ್​

Updated on: Apr 24, 2020 | 1:07 PM

ಬೆಂಗಳೂರು: ಹೊಂಗಸಂದ್ರ ವಾರ್ಡ್​ನಲ್ಲಿ 15 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಂಗಸಂದ್ರ ವಾರ್ಡ್ ಹಾಗೂ ಸುತ್ತಮುತ್ತ ಏರಿಯಾಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಆದರೆ ಮನೆಯೊಳಗೆ ಹೋಗುವಂತೆ ಹೇಳಿದ್ದಕ್ಕೆ ಸ್ಥಳೀಯರು ಆಶಾ ಕಾರ್ಯಕರ್ತೆಯರ ಜತೆ ಗಲಾಟೆ ಮಾಡಿರುವ ಘಟನೆ ನಡೆದಿದೆ.

ನಗರದ ಹೊಂಗಸಂದ್ರ ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಒಳಗಡೆ ಹೋಗಲು ಹೇಳಿದ್ದಕ್ಕೆ ಸ್ಥಳೀಯರು ವಾಗ್ವಾದಕ್ಕಿಳಿದಿದ್ದಾರೆ. ಏನಪ್ಪ ನಿನಗೆ ಕಾಮನ್​ಸೆನ್ಸ್ ಇಲ್ವಾ?, ಕನಿಷ್ಠ ಜ್ಞಾನವೂ ಇಲ್ವಾ? ಮನೆ ಒಳಗೆ ಹೋಗಿ ಎಂದಿದ್ದಕ್ಕೆ ನಮಗೆ ಬೆಳಗ್ಗೆ ಉಪಾಹಾರ ಇಲ್ಲ, ಹಾಲು ಇಲ್ಲ, ತರಕಾರಿಯೂ ಇಲ್ಲ, ದಿನಸಿ ಇಲ್ಲ ಏನ್ ಮಾಡೋದು ಅಂತಾ ಗಲಾಟೆ ಮಾಡಿದ್ರೆ. ಮತ್ತೊಬ್ಬ ವ್ಯಕ್ತಿ ನಮ್ಮ ಆರೋಗ್ಯ ತಪಾಸಣೆ ಮಾಡಲೇ ಇಲ್ಲ ಅಂತಾ ಕಿರಿಕ್ ಮಾಡಿದ್ದಾರೆ.

ಹೊರಗಡೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಈಗ ನೀವು ಹೊರಗಡೆ ಹೋದರೆ ನಿಮಗೆ ಏನು ಸಿಗುತ್ತದೆ. ಸ್ವಲ್ಪವೂ ತಿಳಿದುಕೊಳ್ಳದೆ ಮಾತಾಡುತ್ತೀಯಾ ಎಂc ಸ್ಥಳೀಯರಿಗೆ ಆಶಾ ಕಾರ್ಯಕರ್ತೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

Published On - 12:12 pm, Fri, 24 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us