AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ, ಮಂಡ್ಯ ಸಂಸದೆ ಸುಮಲತಾರಿಗೆ ಗೌರವ ಡಾಕ್ಟರೇಟ್

ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್​ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್​ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನಿಂದ ಮಂಡ್ಯ ಸಂಸದೆ ಮತ್ತು ಕನ್ನಡ ಚಿತ್ರರಂಗದ ಹಿರಿಯ ನಟಿ ಸುಮಲತಾ ಅಂಬರೀಶ್​ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

ಹಿರಿಯ ನಟಿ, ಮಂಡ್ಯ ಸಂಸದೆ ಸುಮಲತಾರಿಗೆ ಗೌರವ ಡಾಕ್ಟರೇಟ್
ಸುಮಲತಾ ಅಂಬರೀಶ್​ ಅವರಿಗೆ ಗೌರವ ಡಾಕ್ಟರೇಟ್
TV9 Web
| Edited By: |

Updated on:Jan 20, 2024 | 10:11 PM

Share

ಬೆಂಗಳೂರು, ಜನವರಿ 20: ಮಂಡ್ಯ ಸಂಸದೆ ಮತ್ತು ಕನ್ನಡ ಚಿತ್ರರಂಗದ ಹಿರಿಯ ನಟಿ ಸುಮಲತಾ ಅಂಬರೀಶ್ (Sumalathari Ambareesh) ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್​ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್​ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದುಕೊಂಡಿರುವುದಕ್ಕೆ ಸುಮಲತಾ ಅವರು ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದವನ್ನು ಅರ್ಪಿಸಿದ್ದಾರೆ.

ಈ ಕುರಿತಾಗಿ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೆ ಸುಮಲತಾ, ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು, ನನ್ನ ಹಿತೈಷಿಗಳು, ಚಲನಚಿತ್ರ ಮತ್ತು ರಾಜಕೀಯ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ.

ಸಂಸದೆ ಸುಮಲತಾ ಅಂಬರೀಶ್ ಫೇಸ್​ಬುಕ್ ಪೋಸ್ಟ್

ಇಂಥದ್ದೊಂದು ಗೌರವ ಸಿಕ್ಕಿರುವುದು ನನ್ನ ಮೇಲಿನ ನಂಬಿಕೆ ಮತ್ತು ನಿಮ್ಮೆಲ್ಲರ ಆಶೀರ್ವಾದ ಕಾರಣ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:08 pm, Sat, 20 January 24

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು