AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಮಾನ ಮಾಡಿದವರಿಂದಲೇ ಸನ್ಮಾನ; ಪಂಚೆ ಹಾಕಿಕೊಂಡು ಮಾಲ್ ಸಿಬ್ಬಂದಿಯಿಂದ ಸನ್ಮಾನ ಮಾಡಿಸಿಕೊಂಡ ಫಕೀರಪ್ಪ

ರೈತನೋರ್ವ ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ಆತನನ್ನು ಮಾಲ್​ ಒಳಗೆ ಎಂಟ್ರಿ ಕೊಟ್ಟಿರಲಿಲ್ಲ. ಆದರೆ ಇಂದು ಅದೇ ಮಾಲ್​ನ ಸಿಬ್ಬಂದಿ ರೈತನನ್ನು ಕರೆಸಿ ಸನ್ಮಾನ ಮಾಡಿದ್ದಾರೆ. ಬೆಂಗಳೂರಿನ ಜಿಟಿ ಮಾಲ್​ಗೆ ರೈತ ಫಕೀರಪ್ಪ ಪಂಚ ಧರಿಸಿಕೊಂಡು ಬಂದು ಸನ್ಮಾನ ಸ್ವೀಕರಿಸಿದ್ದಾರೆ. ಅಂಬಾನಿ ಮಗನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದ ಸೌಥ್ ಸ್ಟಾರ್ ನಟರೇ ಪಂಚೆಯಲ್ಲಿ ಮಿಂಚಿದ್ದರು. ಆದರೆ ಇಲ್ಲಿ ಮಾಲ್​ಗೆ ಪಂಚೆಯಲ್ಲಿ ಪ್ರವೇಶಿಸುವುದನ್ನು ನಿಷೇಧಿಸಲಾಗಿತ್ತು.

ಅವಮಾನ ಮಾಡಿದವರಿಂದಲೇ ಸನ್ಮಾನ; ಪಂಚೆ ಹಾಕಿಕೊಂಡು ಮಾಲ್ ಸಿಬ್ಬಂದಿಯಿಂದ ಸನ್ಮಾನ ಮಾಡಿಸಿಕೊಂಡ ಫಕೀರಪ್ಪ
ಪಂಚೆ ಹಾಕಿಕೊಂಡು ಬಂದು ಮಾಲ್ ಸಿಬ್ಬಂದಿಯಿಂದ ಸನ್ಮಾನ ಮಾಡಿಸಿಕೊಂಡ ಫಕೀರಪ್ಪ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on:Jul 17, 2024 | 1:42 PM

Share

ಬೆಂಗಳೂರು, ಜುಲೈ.17: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್​ಗೆ (GT Mall) ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದ ಫಕೀರಪ್ಪ ಎಂಬ ವೃದ್ಧ ಪಂಚೆ ಧರಿಸಿದ್ದ ಎಂಬ ಕಾರಣಕ್ಕೆ ಮಾಲ್ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಸದ್ಯ ಈಗ ರೈತ ಫಕೀರಪ್ಪಗೆ ಅವಮಾನ ಮಾಡಿದ್ದ ಮಾಲ್​​ನಿಂದಲೇ ಸನ್ಮಾನ ಮಾಡಲಾಗಿದೆ. ರೈತ ಫಕೀರಪ್ಪಗೆ ಶಾಲು ಹಾಕಿ ಸನ್ಮಾನಿಸಲಾಗಿದೆ. ಮಾಲ್​ ಇನ್​​ಚಾರ್ಜ್ ಸುರೇಶ್​​​ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.

ರೈತ ಫಕೀರಪ್ಪ ಪಂಚೆ ಧರಿಸಿ ಮಾಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರೈತನನ್ನು ಅವಮಾನಿಸಿದಕ್ಕೆ ಕನ್ನಡಪರ ಹೋರಾಟಗಾರರು ಮಾಲ್ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾಲ್ ಇನ್ಚಾರ್ಜ್ ಸುರೇಶ್ ಕ್ಷಮೆ ಕೇಳಿದರೂ ಹೋರಾಟಗಾರರು ಜಗ್ಗಲಿಲ್ಲ. ಮ್ಯಾನೇಜರ್ ಬರಬೇಕು ಎಂದು ಪಟ್ಟು ಹಿಡಿದಿದ್ದರು. ಸದ್ಯ ಈಗ ಮಾಲ್​ ಸಿಬ್ಬಂದಿ ತಾವು ಮಾಡಿದ ಎಡವಟ್ಟನ್ನು ಸರಿ ಮಾಡಿಕೊಂಡಿದ್ದು ಪಂಚೆಯಲ್ಲೇ ಬಂದ ರೈತ ಫಕೀರಪ್ಪನಿಗೆ ಮಾಲ್ ಒಳಗೆ ಸನ್ಮಾನ ಮಾಡಿ ಕ್ಷಮೆ ಕೇಳಿದೆ.

ಇನ್ನು ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ‌ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್​ಸೆಟ್. ಜಿ.ಟಿ.ಮಾಲ್​ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್​ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.

ಇದನ್ನೂ ಓದಿ: ಪಂಚೆ ಹಾಕೊಂಡು ಬಂದಿದ್ದ ರೈತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ, ವಿಡಿಯೋ ನೋಡಿ

ನಿನ್ನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್​ಗೆ ಹಾವೇರಿ ಮೂಲದ ಕುಟುಂಬವೊಂದು ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿತ್ತು. ಅದ್ರಲ್ಲಿ ಫಕೀರಪ್ಪ ಎಂಬ ವೃದ್ಧರೊಬ್ಬರು ಪಂಚೆ ಧರಿಸಿ ಬಂದಿದ್ರು. ಪಂಚೆ ಧರಿಸಿದ್ದಾರೆ ಎಂಬ ಏಕಮಾತ್ರ ಕಾರಣಕ್ಕೆ ಜಿ.ಟಿ.ಮಾಲ್​ನ ಸೆಕ್ಯೂರಿಟಿ ಪ್ರವೇಶಕ್ಕೆ ನಿರಾಕರಣೆ ಮಾಡಿದ್ದರು.

ವೃದ್ಧನನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿದ್ದರು. ಇದ್ರಿಂದ ತೀವ್ರ ಅವಮಾನಕ್ಕೊಳಗಾದ ಫಕೀರಪ್ಪನವರ ಪುತ್ರ ನಾಗರಾಜ್ ಮಾಲ್​ನವರಿಗೆ ಒಳಗೆ ಬಿಡುವಂತೆ ರಿಕ್ವೆಸ್ಟ್ ಮಾಡಿದ್ದಾರೆ. ಆದ್ರೆ ಮಾಲ್​ನವನು ಯಾವಾಗ ಪ್ರವೇಶವನ್ನು ನೀರಾಕರಣೆ ಮಾಡಿದ್ನೋ ನಾಗರಾಜ್ ವಿಡಿಯೋ ಮಾಡಿ ತಮ್ಮ ನೋವು ತೋಡಿಕೊಂಡಿದ್ರು. ಸದ್ಯ ಈಗ ಫಕೀರಪ್ಪರನ್ನು ಸನ್ಮಾನ ಮಾಡಿ ಗೌರವಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:09 pm, Wed, 17 July 24

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ