AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ನಾರಾಯಣಗೌಡಗೆ ಜಾಮೀನು ಸಿಗುವ ನಿರೀಕ್ಷೆ: ಪರಪ್ಪನ ಅಗ್ರಹಾರ ಬಳಿ ಕರವೇ ಕಾರ್ಯಕರ್ತರ ಹರ್ಷ

ನಾಳೆ(ಜ.06) ಕರವೇ ನಾರಾಯಣ ಗೌಡ(Narayana Gowda)ರಿಗೆ ಜಾಮೀನು ಸಿಗುವ ನಿರೀಕ್ಷೆ ಹಿನ್ನೆಲೆ ಪರಪ್ಪನ ಅಗ್ರಹಾರ ಬಳಿ ಕರವೇ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸುತ್ತಿದ್ದು, ಕರವೇ(Karave) ರಾಜ್ಯ ಘಟಕದ ಮುಖಂಡರು ಘೋಷಣೆ ಕೂಗುತ್ತಿದ್ದಾರೆ.

ನಾಳೆ ನಾರಾಯಣಗೌಡಗೆ ಜಾಮೀನು ಸಿಗುವ ನಿರೀಕ್ಷೆ: ಪರಪ್ಪನ ಅಗ್ರಹಾರ ಬಳಿ ಕರವೇ ಕಾರ್ಯಕರ್ತರ ಹರ್ಷ
ಜೈಲಿನ ಮುಂದೆ ಕರವೇ ಹರ್ಷ
ರಾಮು, ಆನೇಕಲ್​
| Edited By: |

Updated on: Jan 05, 2024 | 3:45 PM

Share

ಬೆಂಗಳೂರು, ಜ.05: ನಾಳೆ(ಜ.06) ಕರವೇ ನಾರಾಯಣ ಗೌಡ(Narayana Gowda)ರಿಗೆ ಜಾಮೀನು ಸಿಗುವ ನಿರೀಕ್ಷೆ ಹಿನ್ನೆಲೆ ಪರಪ್ಪನ ಅಗ್ರಹಾರ ಬಳಿ ಕರವೇ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸುತ್ತಿದ್ದು, ಕರವೇ(Karave) ರಾಜ್ಯ ಘಟಕದ ಮುಖಂಡರು ಘೋಷಣೆ ಕೂಗುತ್ತಿದ್ದಾರೆ. ಈ ವೇಳೆ ಮಾತನಾಡಿದ ಕರವೇ ರಾಜ್ಯ ಉಪಾಧ್ಯಕ್ಷ ಸತೀಶ್ ಗೌಡ ‘ಈ ಸರ್ಕಾರ ಕನ್ನಡಿಗರ ವಿರೋಧಿಯಾಗಿದೆ. ಸಿದ್ದರಾಮಯ್ಯ ಕನ್ನಡ ರಾಮಯ್ಯ ಅಂತಾರೆ. ಆದರೆ, ಕನ್ನಡಿಗರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ ಎಂದು ಸಿಎಂ ವಿರುದ್ದ ಕಿಡಿಕಾರಿದರು.

ನಾರಾಯಣಗೌಡ ಬಂಧನ ವಿರೋಧಿಸಿ ನಿರಂತರವಾಗಿ ಪ್ರತಿಭಟನೆ

ನಮ್ಮ ವಕೀಲರ ತಂಡ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ನಾರಾಯಣ ಗೌಡ ಬಂಧನ ವಿರೋಧಿಸಿ ನಿರಂತರವಾಗಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ನಾಳೆ(ಜ.06) ಅವರ ಬಿಡುಗಡೆ ಆಗದಿದ್ದರೆ ಉಗ್ರವಾದ ಹೋರಾಟ ಮಾಡುತ್ತೇವೆ. ಅನೇಕ ಸ್ವಾಮೀಜಿಗಳ ಜೊತೆ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಯಲಿದೆ. ನಾವು ಕರ್ನಾಟಕದಲ್ಲಿ ಕನ್ನಡ ನಾಮಫಲಕ ಹಾಕಿ ಎಂದು ಹೇಳುತ್ತಿರುವುದು. ನಾವು ತಮಿಳುನಾಡಿನಲ್ಲಿ ಅಥವಾ ಬೇರೆ ರಾಜ್ಯಕ್ಕೆ ಹೋಗಿ ಕೇಳಿದರೆ ತಪ್ಪಾಗುತ್ತಿತ್ತು.

ಇದನ್ನೂ ಓದಿ:ಕರವೇ ನಾರಾಯಾಣಗೌಡ ಬಂಧನ: ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ; ಸಾಹಿತಿ ದೊಡ್ಡರಂಗೇಗೌಡ

ಮಹಿಳಾ ಕಾರ್ಯಕರ್ತರ ಟಾರ್ಗೆಟ್​

ಈಗ ಮಹಿಳಾ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದು, ಚಿಕ್ಕಜಾಲನಲ್ಲಿ ಮಹಿಳಾ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಕನ್ನಡ ಹೋರಾಟಗಾರ್ತಿಯರ ಮೇಲೆ ರೌಡಿಶೀಟರ್ ತೆರೆಯುತ್ತಿದ್ದಾರೆ. ಇದೆಲ್ಲವೂ ತಿಳಿದಿದ್ದರೂ ಗೃಹಮಂತ್ರಿ ಹಾಗೂ ಸಿದ್ರರಾಮಯ್ಯ ಸಂಪೂರ್ಣವಾಗಿ ಮೌನವಹಿಸಿದ್ದಾರೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ದ ಕರವೇ ರಾಜ್ಯ ಉಪಾಧ್ಯಕ್ಷ ಸತೀಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ