AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಾರ್ಕ್​ಗಳಿಗೆ ಸಾಕು ನಾಯಿ ಕೊಂಡೊಯ್ಯುವವರು ಇದನ್ನು ಗಮನಿಸಿ; ತೋಟಗಾರಿಕೆ ಇಲಾಖೆಯಿಂದ ಕೆಲ ನಿಯಮಗಳು ಜಾರಿ

ಮಾಲೀಕರು ಪಾರ್ಕ್​ಗಳಿಗೆ ನಾಯಿಗಳನ್ನ ಕರೆತರುವಾಗ 6 ಅಡಿ ಉದ್ದದ ಸರಪಳಿ ಹಾಕಿರಬೇಕು. ನಾಯಿಗಳನ್ನ ಕೈಯಲ್ಲಿ ಹಿಡಿದುಕೊಂಡು ನಿಯಂತ್ರಿಸಬೇಕು. ತಮ್ಮ ನಾಯಿಗೆ ರೇಬಿಸ್ ಚುಚ್ಚು ಮದ್ದು ಹಾಕಿರುವ ಬಗ್ಗೆ ದಾಖಲೆ ತೋರಿಸಬೇಕು.

ಬೆಂಗಳೂರಿನಲ್ಲಿ ಪಾರ್ಕ್​ಗಳಿಗೆ ಸಾಕು ನಾಯಿ ಕೊಂಡೊಯ್ಯುವವರು ಇದನ್ನು ಗಮನಿಸಿ; ತೋಟಗಾರಿಕೆ ಇಲಾಖೆಯಿಂದ ಕೆಲ ನಿಯಮಗಳು ಜಾರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on: Dec 18, 2021 | 12:24 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನರು ಬೆಳಿಗ್ಗೆ ಮತ್ತು ಸಂಜೆ ಹೊತ್ತಿಗೆ ವಾಯು ವಿಹಾರಕ್ಕೆ ಹೋಗುವುದು ಸಹಜ. ವಾಕಿಂಗ್ ಹೋಗುವ ಜನರು ತಮ್ಮ ತಮ್ಮ ಮನೆಗಳಲ್ಲಿ ಸಾಕಿದ ನಾಯಿಯನ್ನು ಜೊತೆಗೆ ಕೊಂಡೊಯ್ಯುತ್ತಾರೆ. ಆದರೆ ನಾಯಿಗಳು ಹಲವು ಕಾರಣಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ನೀಡುತ್ತವೆ. ಹೀಗಾಗಿ ತೋಟಗಾರಿಕೆ ಇಲಾಖೆ ಕೆಲ ನಿಯಮಗಳನ್ನು ಜಾರಿಗೆ ತಂದಿದೆ. ನಾಯಿ ಕಾಟದ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದ ಹಿನ್ನೆಲೆ ತೋಟಗಾರಿಕೆ ಇಲಾಖೆ ಕೆಲ ನಿಯಮಗಳನ್ನ ಜಾರಿಗೆ ತಂದು ಆದೇಶ ನೀಡಿದೆ.

ಮಾಲೀಕರು ಪಾರ್ಕ್​ಗಳಿಗೆ ನಾಯಿಗಳನ್ನ ಕರೆತರುವಾಗ 6 ಅಡಿ ಉದ್ದದ ಸರಪಳಿ ಹಾಕಿರಬೇಕು. ನಾಯಿಗಳನ್ನ ಕೈಯಲ್ಲಿ ಹಿಡಿದುಕೊಂಡು ನಿಯಂತ್ರಿಸಬೇಕು. ತಮ್ಮ ನಾಯಿಗೆ ರೇಬಿಸ್ ಚುಚ್ಚು ಮದ್ದು ಹಾಕಿರುವ ಬಗ್ಗೆ ದಾಖಲೆ ತೋರಿಸಬೇಕು. ಪಾರ್ಕ್​ಗಳಲ್ಲಿ ನಾಯಿಗಳು ಮಲವಿಸರ್ಜನೆ ಮಾಡದಂತೆ ಕ್ರಮ ವಹಿಸಬೇಕು. ಒಂದು ವೇಳೆ ಮಲವಿಸರ್ಜನೆ ಮಾಡಿದರೆ ಮಾಲೀಕರೇ ಸ್ವಚ್ಚಗೊಳಿಸಬೇಕು. ಸಾಕು ನಾಯಿಗಳಿಗೆ ಪಾರ್ಕ್​ಗಳ್ಲಿ ಯಾವುದೇ ಕಾರಣಕ್ಕೂ ಆಹಾರ ನೀಡಬಾರದು ಅಂತ ತೋಟಗಾರಿಕೆ ಇಲಾಖೆ ನಿಯಮಗಳನ್ನ ಜಾರಿಗೆ ತಂದಿದೆ.

ಅಲ್ಲದೇ ಉಗ್ರ ಸ್ವರೂಪ ಹಾಗೂ ದೊಡ್ಡ ಗಾತ್ರದ ನಾಯಿಗಳನ್ನ ತರಬಾರದು. ತೋಟಾಗಾರಿಕೆ ಭದ್ರತಾ ಸಿಬ್ಬಂದಿ, ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ನಾಯಿಗಳಿಂದ ತೊಂದರೆಯಾದರೆ ಅದಕ್ಕೆ ಮಾಲೀಕರೆ ಜವಾಬ್ದಾರಿ. ಪಾರ್ಕ್​ನಲ್ಲಿ ಮಕ್ಕಳು, ಹಿರಿಯ ನಾಗರಿಕರು ವಾಯುವಿಹಾರ ನಡೆಸುವ ಉದ್ಯಾನವನಗಳಲ್ಲಿ ನಾಯಿಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ತೋಟಗಾರಿಗೆ ಇಲಾಖೆ ಗುರುತುಪಡಿಸಿರುವ ಕಡೆ ಮಾತ್ರ ನಾಯಿಗಳಿಗೆ ಊಟ ನೀಡಬೇಕು ಅಂತ ತೋಟಗಾರಿಕೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ

ಟ್ರಿನಿಡಾಡ್​ನಲ್ಲಿ 12, ಚೀನಾದಲ್ಲಿ 20; ಮಹಿಳೆಯರ ವಿವಾಹ ವಯೋಮಿತಿ ವಿವಿಧ ದೇಶಗಳಲ್ಲಿ ಹೇಗಿದೆ? ಕುತೂಹಲಕಾರಿ ಮಾಹಿತಿ ಇಲ್ಲಿದೆ

Kohli vs BCCI: ಬಿಸಿಸಿಐ ಆಯ್ಕೆ ಸಮಿತಿಯವರು ವಿರಾಟ್ ಕೊಹ್ಲಿಯ ಅರ್ಧದಷ್ಟು ಪಂದ್ಯವನ್ನೂ ಆಡಿಲ್ಲ ಎಂದ ಕೀರ್ತಿ ಆಜಾದ್

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ