AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಹೋಟೆಲ್​ಗಳಲ್ಲಿ ಕುಡಿಯಲು ಬಿಸಿ ನೀರು ಕಡ್ಡಾಯ: ಏನಿದರ ಹಿಂದಿನ ಉದ್ದೇಶ?

ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶಿತ್ತು. ಇದರ ಬೆನ್ನಲ್ಲೇ ಇದೀಗ ಸಚಿವ ಯುಟಿ ಖಾದರ್ ಮತ್ತೊಂದು ಮಹತ್ವದ ತಿರ್ಮಾನ ಕೈಗೊಂಡಿದ್ದಾರೆ. ಕಲುಷಿತ ನೀರಿನ ಸೇವನೆಯಿಂದಾಗಿ ನಾನಾ ರೀತಿಯ ಖಾಯಿಲೆಗಳಿಗೆ ಜನಸಾಮಾನ್ಯು ತುತ್ತಾಗುತ್ತಿದ್ದಾರೆ. ಹೀಗಾಗಿ ಇದಕ್ಕೆಲ್ಲಾ ಕಡಿವಾಣ ಹಾಕಲು ನಿರ್ಧರಿಸಿರುವ ಆರೋಗ್ಯ ಎಲ್ಲಾ ರೀತಿಯ ಹೋಟೆಲ್​ಗಳಲ್ಲಿ ಗ್ರಾಹಕರಿಗೆ ಕುಡಿಯಲು ಬಿಸಿ ನೀರನ್ನ ಕೊಡುವುದು ಕಡ್ಡಾಯ ಮಾಡುತ್ತಿದೆ.

ಎಲ್ಲಾ ಹೋಟೆಲ್​ಗಳಲ್ಲಿ ಕುಡಿಯಲು ಬಿಸಿ ನೀರು ಕಡ್ಡಾಯ: ಏನಿದರ ಹಿಂದಿನ ಉದ್ದೇಶ?
ಪ್ರಾತಿನಿಧಿಕ ಚಿತ್ರ
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Aug 02, 2026 | 10:19 PM

Share

ಬೆಂಗಳೂರು, (ಆಗಸ್ಟ್ 02): ಬೆಂಗಳೂರಿನಲ್ಲಿ ಕುಡಿಯುವ ನೀರು ಹದಗೆಡುತ್ತಿರುವ ಹಿನ್ನೆಲೆ ನಾನಾ ರೀತಿ ಆರೋಗ್ಯ ಸಮಸ್ಯೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಹೀಗಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಜನರ ಆರೋಗ್ಯ ಕಾಪಾಡಲು ಎಲ್ಲಾ ಹೋಟೆಲ್​ಗಳಲ್ಲಿ ಗ್ರಾಹಕರಿಗೆ ಕುಡಿಯಲು ಬಿಸಿ ನೀರನ್ನ (Hot Water) ಕೊಡೋದು ಕಡ್ಡಾಯ ಎಂಬ ನಿಯಮ ತರಲು ಆರೋಗ್ಯ ಇಲಾಖೆ ಮುಂದಾಗಿದೆ. ಸದ್ಯ ಎಲ್ಲಾ ಪ್ರೀಮಿಯಮ್ ಹಾಗೂ ಸ್ಟ್ಯಾಂಡರ್ಡ್ ಹೋಟೆಲ್​ಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಇದೆ. ಇದನ್ನ ಎಲ್ಲಾ ರೀತಿಯ ಅಂದರೆ, ಸಣ್ಣ-ಪುಟ್ಟ ಹೋಟೆಲ್​ಗಳಲ್ಲೂ ಕಡ್ಡಾಯ ಮಾಡಬೇಕಿದೆ ಎನ್ನುವುದು ಆರೋಗ್ಯ ಸಚಿವ ಯುಟಿ ಖಾದರ್​​ ಅವರ ಮಾತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹೋಟೆಲ್ ಮಾಲೀಕರು ಒಳ್ಳೆಯ ನಿರ್ಧಾರ ಎಂದಿದ್ದಾರೆ. ಇತ್ತ ಗ್ರಾಹಕರು ಕೂಡ ಈ ನಿರ್ಧಾರವನ್ನ ಸ್ವಾಗತ ಮಾಡಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶಿತ್ತು. ಇದರ ಬೆನ್ನಲ್ಲೇ ಇದೀಗ ಸಚಿವ ಯುಟಿ ಖಾದರ್ ಮತ್ತೊಂದು ಮಹತ್ವದ ತಿರ್ಮಾನ ಕೈಗೊಂಡಿದ್ದಾರೆ. ಕಲುಷಿತ ನೀರಿನ ಸೇವನೆಯಿಂದಾಗಿ ನಾನಾ ರೀತಿಯ ಖಾಯಿಲೆಗಳಿಗೆ ಜನಸಾಮಾನ್ಯು ತುತ್ತಾಗುತ್ತಿದ್ದಾರೆ. ಹೀಗಾಗಿ ಇದಕ್ಕೆಲ್ಲಾ ಕಡಿವಾಣ ಹಾಕಲು ನಿರ್ಧರಿಸಿರುವ ಆರೋಗ್ಯ ಎಲ್ಲಾ ರೀತಿಯ ಹೋಟೆಲ್​ಗಳಲ್ಲಿ ಗ್ರಾಹಕರಿಗೆ ಕುಡಿಯಲು ಬಿಸಿ ನೀರನ್ನ ಕೊಡುವುದು ಕಡ್ಡಾಯ ಮಾಡುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ: ಉದ್ದೇಶವೇನು?

ಈಗಾಗಲೇ ಕೆಲ ಹೋಟೆಗಳಲ್ಲಿ ಗ್ರಾಹಕರಿಗಾಗಿ ಬಿಸಿ ನೀರು ನೀಡಲಾಗುತ್ತಿದೆ. ಆದ್ರೆ, ಇದನ್ನು ಎಲ್ಲಾ ಹೋಟೆಗಳಲ್ಲಿ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದ್ದು, ಜನಸಾಮನ್ಯರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯ ನಿರ್ಧಾರ. ಆದ್ರೆ, ಇದನ್ನು ಹೋಟೆಲ್​​​​​ನವರು ಎಷ್ಟರ ಮಟ್ಟಿಗೆ ಪಾಲನೆ ಮಾಡುತ್ತಾರೆ ಎನ್ನುವುದು ಮುಂದಿರುವ ಪ್ರಶ್ನೆ.

ಒಟ್ಟಾರೆ ಗ್ಯಾಸ್ ಕೊರತೆಯ ಹಿನ್ನೆಲೆ ಒಂದಷ್ಟು ಹೋಟೆಲ್​ಗಳಲ್ಲಿ ಇನ್ಮುಂದೆ ಕುಡಿಯಲು ಬಿಸಿ ನೀರು ಇಲ್ಲ ಎನ್ನುವಂತಿಲ್ಲ. ಅಗತ್ಯ ಇರುವ ಎಲ್ಲಾ ಗ್ರಾಹಕರಿಗೂ ಕುಡಿಯುವ ಬಿಸಿ ನೀರು ಸಿಗಲಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು