AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ದರ ಹೆಚ್ಚಾದರೆ ಹೊಟೇಲ್ ತಿಂಡಿ ಬೆಲೆಯಲ್ಲೂ ಏರಿಕೆ: ಹೊಟೇಲ್ ಮಾಲೀಕರು ಹೇಳುವುದೇನು?

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬೆಲೆ ಏರಿಕೆ ಆರಂಭವಾಗಿದೆ. ವಿದ್ಯುತ್ ದರ ಏರಿಕೆ ನಂತರ ಇದೀಗ ಹಾಲಿನ ದರ ಏರಿಕೆಗೆ ಚಿಂತನೆ ನಡೆಸುತ್ತಿದೆ. ಇದರ ದರ ಏರಿಕೆಯಾದರೆ ಹೊಟೇಲ್ ತಿಂಡಿ ದರವೂ ಏರಿಕೆಯಾಗಲಿದೆ.

ಹಾಲಿನ ದರ ಹೆಚ್ಚಾದರೆ ಹೊಟೇಲ್ ತಿಂಡಿ ಬೆಲೆಯಲ್ಲೂ ಏರಿಕೆ: ಹೊಟೇಲ್ ಮಾಲೀಕರು ಹೇಳುವುದೇನು?
ಹಾಲಿನ ದರ ಹೆಚ್ಚಾದರೆ ಹೊಟೇಲ್ ತಿಂಡಿ ಬೆಲೆಯಲ್ಲೂ ಹೆಚ್ಚಳ
Rakesh Nayak Manchi
|

Updated on:Jun 22, 2023 | 8:06 PM

Share

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು (Congress Guarantees) ಅನುಷ್ಠಾನಕ್ಕೆ ತರಲು ಹಣ ಹೊಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಕೆ ಬಗ್ಗೆ ಚಿಂತನೆ ನಡೆಸುತ್ತಿದೆ. ವಿದ್ಯುತ್ ದರ ಏರಿಕೆ ಆಯ್ತು, ಇದೀಗ ಹಾಲಿನ ದರ ಏರಿಕೆಗೆ ಚಿಂತಿಸಲಾಗುತ್ತಿದೆ. ಒಂದೊಮ್ಮೆ ಹಾಲಿನ ದರ ಏರಿಕೆಯಾದರೆ ಹೊಟೇಲ್ (Hotel) ತಿಂಡಿಗಳ ಬೆಲೆಯಲ್ಲೂ ಏರಿಕೆಯಾಗಲಿದೆ.

ಹೋಟೆಲ್​​ಗಳಲ್ಲಿ ದರ ಏರಿಕೆಗೆ ಚಿಂತನೆ ನಡೆಸುತ್ತಿರುವ ಬಗ್ಗೆ ಮಾತನಾಡಿದ ನಿಸರ್ಗ ಹೋಟೆಲ್ ಮಾಲೀಕ ಕೃಷ್ಣರಾಜ್, ವಿದ್ಯುತ್, ತರಕಾರಿ, ಕಾಫಿ ಪುಡಿ, ಆಹಾರ ಧಾನ್ಯಗಳ ಬೆಲೆಗಳಲ್ಲಿ ಏರಿಕೆ ಆಗುತ್ತಿದೆ. ಸದ್ಯ ಸರ್ಕಾರದ ಮುಂದೆ ಹಾಲಿನ ದರ ಹೆಚ್ಚಳ ಪ್ರಸ್ತಾವನೆ ಇದೆ. ಇದು ನಮಗೆ ಹೊರೆ ಆಗುತ್ತದೆ. ಹೀಗಾಗಿ ಹೋಟೆಲ್​ನಲ್ಲಿ ತಿಂಡಿ ಊಟದ ದರ ಏರಿಕೆಗೆ ಚಿಂತನೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: Anna Bhagya Scheme: ಅಕ್ಕಿ ಹೊಂದಿಸಲು ನೆರವಾಗುವಂತೆ ಕೇಂದ್ರಕ್ಕೆ ಮನವಿ ಮಾಡಲು ಹೋಗಿದ್ದ ಸಿಎಂ ಸಿದ್ದರಾಮಯ್ಯ ಬರಿಗೈಲಿ ವಾಪಸ್ಸು

ಸರ್ಕಾರವು ದರ ಏರಿಕೆಗೆ ಮುಂದಾಗಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ನಾವು ಭೇಟಿ ಮಾಡಿ ದರ ಹೆಚ್ಚಳ ಮಾಡದಂತೆ ಮನವಿ ಮಾಡಿದ್ದೇವೆ. ಈ ವೇಳೆ ಅವರು ನಾವು ಯೋಚನೆ ಮಾಡುತ್ತೇವೆ ಸರ್ಕಾರಕ್ಕೆ ಈಗ ಹಣ ಇಲ್ಲ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಹಾಲಿನ ದರದ ಮೇಲೆ ನಮ್ಮ ದರ ಏರಿಕೆ ಅವಲಂಬಿತವಾಗಿರುತ್ತದೆ. ಇನ್ನೊಂದು ವಾರದಲ್ಲಿ ನಿರ್ಧಾರ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರದಲ್ಲೂ ಏರಿಕೆಯಾಗಿದೆ. ಒಂದೆಡೆ ಜನರು ಸರ್ಕಾರದ ಮೇಲೆ ಆಕ್ರೋಶ ಹೊರಹಾಕುತ್ತಿದ್ದರೆ, ಇನ್ನೊಂದೆಡೆ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಮತ್ತು ಆಡಳಿತ ಪಕ್ಷ ಕಾಂಗ್ರೆಸ್ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ವಿದ್ಯುತ್ ಬಿಲ್ ಕಡಿತ ಮಾಡಿ ಎಂದರೂ ಕಡಿಮೆ ಮಾಡಲು ಒಲ್ಲೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಒಟ್ಟಾರೆಯಾಗಿ, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಜನರು ಆರೋಪಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Thu, 22 June 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ