ಹಾಲಿನ ದರ ಹೆಚ್ಚಾದರೆ ಹೊಟೇಲ್ ತಿಂಡಿ ಬೆಲೆಯಲ್ಲೂ ಏರಿಕೆ: ಹೊಟೇಲ್ ಮಾಲೀಕರು ಹೇಳುವುದೇನು?

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬೆಲೆ ಏರಿಕೆ ಆರಂಭವಾಗಿದೆ. ವಿದ್ಯುತ್ ದರ ಏರಿಕೆ ನಂತರ ಇದೀಗ ಹಾಲಿನ ದರ ಏರಿಕೆಗೆ ಚಿಂತನೆ ನಡೆಸುತ್ತಿದೆ. ಇದರ ದರ ಏರಿಕೆಯಾದರೆ ಹೊಟೇಲ್ ತಿಂಡಿ ದರವೂ ಏರಿಕೆಯಾಗಲಿದೆ.

ಹಾಲಿನ ದರ ಹೆಚ್ಚಾದರೆ ಹೊಟೇಲ್ ತಿಂಡಿ ಬೆಲೆಯಲ್ಲೂ ಏರಿಕೆ: ಹೊಟೇಲ್ ಮಾಲೀಕರು ಹೇಳುವುದೇನು?
ಹಾಲಿನ ದರ ಹೆಚ್ಚಾದರೆ ಹೊಟೇಲ್ ತಿಂಡಿ ಬೆಲೆಯಲ್ಲೂ ಹೆಚ್ಚಳ
Rakesh Nayak Manchi

Updated on: Jun 22, 2023 | 8:06 PM

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು (Congress Guarantees) ಅನುಷ್ಠಾನಕ್ಕೆ ತರಲು ಹಣ ಹೊಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಕೆ ಬಗ್ಗೆ ಚಿಂತನೆ ನಡೆಸುತ್ತಿದೆ. ವಿದ್ಯುತ್ ದರ ಏರಿಕೆ ಆಯ್ತು, ಇದೀಗ ಹಾಲಿನ ದರ ಏರಿಕೆಗೆ ಚಿಂತಿಸಲಾಗುತ್ತಿದೆ. ಒಂದೊಮ್ಮೆ ಹಾಲಿನ ದರ ಏರಿಕೆಯಾದರೆ ಹೊಟೇಲ್ (Hotel) ತಿಂಡಿಗಳ ಬೆಲೆಯಲ್ಲೂ ಏರಿಕೆಯಾಗಲಿದೆ.

ಹೋಟೆಲ್​​ಗಳಲ್ಲಿ ದರ ಏರಿಕೆಗೆ ಚಿಂತನೆ ನಡೆಸುತ್ತಿರುವ ಬಗ್ಗೆ ಮಾತನಾಡಿದ ನಿಸರ್ಗ ಹೋಟೆಲ್ ಮಾಲೀಕ ಕೃಷ್ಣರಾಜ್, ವಿದ್ಯುತ್, ತರಕಾರಿ, ಕಾಫಿ ಪುಡಿ, ಆಹಾರ ಧಾನ್ಯಗಳ ಬೆಲೆಗಳಲ್ಲಿ ಏರಿಕೆ ಆಗುತ್ತಿದೆ. ಸದ್ಯ ಸರ್ಕಾರದ ಮುಂದೆ ಹಾಲಿನ ದರ ಹೆಚ್ಚಳ ಪ್ರಸ್ತಾವನೆ ಇದೆ. ಇದು ನಮಗೆ ಹೊರೆ ಆಗುತ್ತದೆ. ಹೀಗಾಗಿ ಹೋಟೆಲ್​ನಲ್ಲಿ ತಿಂಡಿ ಊಟದ ದರ ಏರಿಕೆಗೆ ಚಿಂತನೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: Anna Bhagya Scheme: ಅಕ್ಕಿ ಹೊಂದಿಸಲು ನೆರವಾಗುವಂತೆ ಕೇಂದ್ರಕ್ಕೆ ಮನವಿ ಮಾಡಲು ಹೋಗಿದ್ದ ಸಿಎಂ ಸಿದ್ದರಾಮಯ್ಯ ಬರಿಗೈಲಿ ವಾಪಸ್ಸು

ಸರ್ಕಾರವು ದರ ಏರಿಕೆಗೆ ಮುಂದಾಗಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ನಾವು ಭೇಟಿ ಮಾಡಿ ದರ ಹೆಚ್ಚಳ ಮಾಡದಂತೆ ಮನವಿ ಮಾಡಿದ್ದೇವೆ. ಈ ವೇಳೆ ಅವರು ನಾವು ಯೋಚನೆ ಮಾಡುತ್ತೇವೆ ಸರ್ಕಾರಕ್ಕೆ ಈಗ ಹಣ ಇಲ್ಲ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಹಾಲಿನ ದರದ ಮೇಲೆ ನಮ್ಮ ದರ ಏರಿಕೆ ಅವಲಂಬಿತವಾಗಿರುತ್ತದೆ. ಇನ್ನೊಂದು ವಾರದಲ್ಲಿ ನಿರ್ಧಾರ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರದಲ್ಲೂ ಏರಿಕೆಯಾಗಿದೆ. ಒಂದೆಡೆ ಜನರು ಸರ್ಕಾರದ ಮೇಲೆ ಆಕ್ರೋಶ ಹೊರಹಾಕುತ್ತಿದ್ದರೆ, ಇನ್ನೊಂದೆಡೆ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಮತ್ತು ಆಡಳಿತ ಪಕ್ಷ ಕಾಂಗ್ರೆಸ್ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ವಿದ್ಯುತ್ ಬಿಲ್ ಕಡಿತ ಮಾಡಿ ಎಂದರೂ ಕಡಿಮೆ ಮಾಡಲು ಒಲ್ಲೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಒಟ್ಟಾರೆಯಾಗಿ, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಜನರು ಆರೋಪಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Thu, 22 June 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us