AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡ ರಾತ್ರಿ 1 ಗಂಟೆ ತನಕ ಹೊಟೇಲ್ ಓಪನ್ ಆದೇಶ ಬೆನ್ನಲ್ಲೇ ಕೇಳಿ ಬಂತು 24 ಗಂಟೆ ವ್ಯಾಪಾರ ಅನುಮತಿಗೆ ಆಗ್ರಹ

ರಾಜ್ಯದಲ್ಲಿ ತಡರಾತ್ರಿ 1 ಗಂಟೆ ತನಕ ವ್ಯಾಪಾರ, ವಹಿವಾಟು ಮಾಡಲು ಅವಕಾಶ ನೀಡಿ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರ ಬೆನ್ನಲ್ಲೇ ಈಗ ಹೊಟೇಲ್ ಮಾಲೀಕರ ಸಂಘ 24 ಗಂಟೆಗಳ ಕಾಲ ವ್ಯಾಪಾರಕ್ಕೆ ಅನುಮತಿ ಕೊಡಬೇಕು ಎಂದು ಆಗ್ರಹಿಸಿದೆ. ಸದ್ಯ ಹೋಟೆಲ್ ಸಂಘದ ಈ ಬೇಡಿಕೆಯನ್ನು ಸರ್ಕಾರ ಯಾವ ರೀತಿ ಪರಿಗಣಿಸುತ್ತೇ ಕಾದು ನೋಡಬೇಕಿದೆ.

ತಡ ರಾತ್ರಿ 1 ಗಂಟೆ ತನಕ ಹೊಟೇಲ್ ಓಪನ್ ಆದೇಶ ಬೆನ್ನಲ್ಲೇ ಕೇಳಿ ಬಂತು 24 ಗಂಟೆ ವ್ಯಾಪಾರ ಅನುಮತಿಗೆ ಆಗ್ರಹ
ಹೋಟೆಲ್
TV9 Web
| Edited By: ಆಯೇಷಾ ಬಾನು|

Updated on: Feb 18, 2024 | 7:40 AM

Share

ಬೆಂಗಳೂರು, ಫೆ.18: ರಾತ್ರಿ 11 ಗಂಟೆ ದಾಟಿದ್ರೆ ಸಾಕು ಊಟ ಎಲ್ಲಿ ಸಿಗುತ್ತೆ ಅಂತಾ ಅಲುದಾಡ್ತಿದ್ದ ಶ್ರಮಿಕರು, ಕಾರ್ಮಿಕರು ಹಾಗೂ ರಾತ್ರಿ ಪಾಳಯದ ಕೆಲಸಗಾರರ ಜೊತೆಗೆ ಹೊಟೇಲ್ ಮಾಲೀಕರಿಗೆ (Hotels) ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಬಜೆಟ್ ನಲ್ಲಿ ವ್ಯಾಪಾರ, ವಾಣಿಜ್ಯ ಅಭಿವೃದ್ಧಿ ಉದ್ದೇಶದಿಂದ ತಡರಾತ್ರಿ 1 ಗಂಟೆ ತನಕ ಹೊಟೇಲ್ ಓಪನ್ ಗೆ ಅವಕಾಶ ನೀಡಿರೋದಕ್ಕೆ ಹೊಟೇಲ್ ಮಾಲೀಕರು, ಗ್ರಾಹಕರು ಖುಷ್ ಆಗಿದ್ದಾರೆ. ನೈಟ್ ಲೈಫ್ ಎಂಜಾಯ್ ಮಾಡಬೇಕು ಅಂಡುಕೊಂಡವರಿಗೆ ಸರ್ಕಾರದ (Karnataka Government) ಈ ನಿಯಮ ಗುಡ್ ನ್ಯೂಸ್ ಕೊಟ್ಟರೇ, ಅತ್ತ ರಾತ್ರಿ ಪಾಳಯದ ಕಾರ್ಮಿಕರಿಗೆ, ಹೊಟೇಲ್ ಮಾಲೀಕರಿಗೂ ಸಂತಸ ತಂದಿದೆ. ಆದರೆ ಈಗ 24 ಗಂಟೆ ವ್ಯಾಪಾರ ಅನುಮತಿಗೆ ಆಗ್ರಹ ಕೇಳಿ ಬಂದಿದೆ.

ರಾಜ್ಯದಲ್ಲಿ ತಡರಾತ್ರಿ 1 ಗಂಟೆ ತನಕ ವ್ಯಾಪಾರ, ವಹಿವಾಟಿಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ವ್ಯಾಪಾರ, ವಾಣಿಜ್ಯ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡಿರೋ ಪ್ಲಾನ್ ಗೆ ಸಿಲಿಕಾನ್ ಸಿಟಿ ಮಂದಿ ಫುಲ್ ಖುಷ್ ಆಗಿದ್ದಾರೆ. ಮೊದಲೆಲ್ಲ ರಾತ್ರಿ 10 ,11 ಗಂಟೆಗೆ ಹೊಟೇಲ್ ಬಂದ್ ಆಗ್ತಿದ್ದರಿಂದ ಪರದಾಡ್ತಿದ್ದ ಜನರು, ಇದೀಗ 1 ಗಂಟೆ ತನಕ ಅವಕಾಶ ಕೊಟ್ಟಿರೋದಕ್ಕೆ ಸಂತಸ ವ್ಯಕ್ತಪಡಿಸ್ತಿದ್ದಾರೆ.

ಇದನ್ನೂ ಓದಿ: ತುಮಕೂರು: ನಿಂತಿದ್ದ ಟ್ರ್ಯಾಕ್ಟರ್​ಗೆ ಟವೆರಾ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಇನ್ನು ಈ ಹಿಂದೆ 24 ಗಂಟೆಗಳ ಕಾಲ ವ್ಯಾಪಾರಕ್ಕೆ ಅವಕಾಶ ಕೋರಿ ಹೊಟೇಲ್ ಮಾಲೀಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಆದ್ರೆ ಸರ್ಕಾರ ಮಾತ್ರ ಈ ಮನವಿಗೆ ಪುರಸ್ಕಾರ ಕೊಡದೇ ಇರೋದಕ್ಕೆ ಹೊಟೇಲ್ ಮಾಲೀಕರು ಅಸಮಾಧಾನ ಹೊರಹಾಕ್ತಿದ್ದಾರೆ. ಇಡೀ ರಾತ್ರಿ ವ್ಯಾಪಾರಕ್ಕೆ ಅವಕಾಶ ಕೊಟ್ಟರೇ ವಾಣಿಜ್ಯ ಚಟುವಟಿಕೆಗಳ ಅಭಿವೃದ್ಧಿ ಜೊತೆಗೆ ಕ್ರೈಂ ರೇಟ್ ಕೂಡ ಕಡಿಮೆಯಾಗುತ್ತೆ, ಸರ್ಕಾರ ಈ ಬಗ್ಗೆ ಗಮನಹರಿಸಲಿ ಅಂತಾ ಹೊಟೇಲ್ ಮಾಲೀಕರು ಆಗ್ರಹಿಸಿದ್ದಾರೆ.

ಸದ್ಯ ರಾತ್ರಿ 1 ಗಂಟೆ ತನಕ ವ್ಯಾಪಾರಕ್ಕೆ ಅವಕಾಶ ನೀಡೋ ಮೂಲಕ ಸರ್ಕಾರ, ವಾಣಿಜ್ಯ ಚಟುವಟಿಕೆಗಳ ಅಭಿವೃದ್ಧಿ ಜೊತೆಗೆ ಆದಾಯ ಹೆಚ್ಚಳಕ್ಕೂ ಪ್ಲಾನ್ ಮಾಡಿದೆ. 24 ಗಂಟೆಗಳ ಕಾಲ ವ್ಯಾಪಾರಕ್ಕೆ ಅನುಮತಿ ಕೊಡಬೇಕು ಅನ್ನೋ ಹೊಟೇಲ್ ಮಾಲೀಕರ ಸಂಘದ ಮನವಿಗೆ ಸರ್ಕಾರ ಸೊಪ್ಪು ಹಾಕುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು