AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಹೋಟೆಲ್ ಮಾಲೀಕರ ಮನವಿ

ಬಾಡಿಗೆ, ಗ್ಯಾಸ್, ಸಿಬ್ಬಂದಿ ನಿರ್ವಹಣೆಗೆ ಹೆಚ್ಚು ವೆಚ್ಚ ಭರಿಸುತ್ತಿದ್ದೇವೆ. 18% ಹೆಚ್ಚಳ ಜಿಎಸ್​​ಟಿ ಕಟ್ಟುತ್ತಿದ್ದೇವೆ. ಉದ್ಯಮಕ್ಕೆ ಲೈಸೆನ್ಸ್ ಪಡೆಯುವ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಹೀಗಾಗಿ ಮಧ್ಯರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಣೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.

ರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಹೋಟೆಲ್ ಮಾಲೀಕರ ಮನವಿ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jul 14, 2024 | 10:12 AM

Share

ಬೆಂಗಳೂರು, ಜುಲೈ.14: ಪಬ್, ಬಾರ್​, ರೆಸ್ಟೋರೆಂಟ್​​ಗಳ ಲೈಸೆನ್ಸ್​ ಸಬಲೀಕರಣಕ್ಕೆ ಹೋಟೆಲ್ ಅಸೋಸಿಯೇಷನ್ (Hotel Association) ಮನವಿ ಮಾಡಿದೆ. ಮಧ್ಯರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಅವಕಾಶ ನೀಡುವಂತೆ ಅಬಕಾರಿ ಸಚಿವರಿಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.

ಬಾಡಿಗೆ, ಗ್ಯಾಸ್, ಸಿಬ್ಬಂದಿ ನಿರ್ವಹಣೆಗೆ ಹೆಚ್ಚು ವೆಚ್ಚ ಭರಿಸುತ್ತಿದ್ದೇವೆ. 18% ಹೆಚ್ಚಳ ಜಿಎಸ್​​ಟಿ ಕಟ್ಟುತ್ತಿದ್ದೇವೆ. ಉದ್ಯಮಕ್ಕೆ ಲೈಸೆನ್ಸ್ ಪಡೆಯುವ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಹೀಗಾಗಿ ಮಧ್ಯರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಣೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ. ಇನ್ನು ಮತ್ತೊಂದೆಡೆ ಈ ಹಿಂದೆ ಕೂಡ ಬಿಬಿಎಂಪಿ ವ್ಯಾಪ್ತಿಯ ಪಬ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವ ಸಮಯವನ್ನು ವಿಸ್ತರಿಸುವಂತೆ ಹೋಟೆಲ್​ ಅಸೋಸಿಯೇಷನ್ ಡಿಸಿಎಂ ಡಿ. ಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿತ್ತು.

ಇದನ್ನೂ ಓದಿ: ಗಾಜಾದಲ್ಲಿ ಹಮಾಸ್​ ಸೇನಾ ಕಮಾಂಡರ್​ನ ಗುರಿಯಾಗಿಸಿಕೊಂಡು ಇಸ್ರೇಲ್​ ದಾಳಿ, 90 ಮಂದಿ ಸಾವು

ಎಲ್ಲ ಹೋಟೆಲ್​ಗಳ ಪ್ರಸ್ತುತ ಮುಚ್ಚುವ ಸಮಯವನ್ನು ಮಧ್ಯರಾತ್ರಿ 1 ಗಂಟೆಗೆ ಮಿತಿಗೊಳಿಸಲಾಗಿದೆ. ಸುಮಾರು 8 ರಿಂದ 10 ತಿಂಗಳ ಹಿಂದೆ ಎಲ್ಲಾ ಹೋಟೆಲ್​ಗಳಿಗೆ, ವಿಶೇಷವಾಗಿ ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳ ಬಳಿ ಇರುವವರಿಗೆ 24/7 ಸಮಯ ತೆರೆದಿಡಲು ವಿನಂತಿ ಮಾಡಿಕೊಂಡಿದ್ದೆವು. ಸಾಮಾನ್ಯವಾಗಿ ತಡರಾತ್ರಿಯವರೆಗೆ ಪ್ರಯಾಣಿಸುವ ಗ್ರಾಹಕರಿಗೆ ಸೇವೆ ನೀಡಲು ಪ್ರಸ್ತುತ ಸಮಯವನ್ನು 2 ಗಂಟೆಗೆ ಹೆಚ್ಚಿಸುವಂತೆ ನಾವು ಕೇಳಿಕೊಳ್ಳುತ್ತಿದ್ದೇವೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿ. ಸಿ ರಾವ್ ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Vinay Kashappanavar
Vinay Kashappanavar
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ