AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಹೋಟೆಲ್ ಮಾಲೀಕರ ಮನವಿ

ಬಾಡಿಗೆ, ಗ್ಯಾಸ್, ಸಿಬ್ಬಂದಿ ನಿರ್ವಹಣೆಗೆ ಹೆಚ್ಚು ವೆಚ್ಚ ಭರಿಸುತ್ತಿದ್ದೇವೆ. 18% ಹೆಚ್ಚಳ ಜಿಎಸ್​​ಟಿ ಕಟ್ಟುತ್ತಿದ್ದೇವೆ. ಉದ್ಯಮಕ್ಕೆ ಲೈಸೆನ್ಸ್ ಪಡೆಯುವ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಹೀಗಾಗಿ ಮಧ್ಯರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಣೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.

ರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಹೋಟೆಲ್ ಮಾಲೀಕರ ಮನವಿ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jul 14, 2024 | 10:12 AM

Share

ಬೆಂಗಳೂರು, ಜುಲೈ.14: ಪಬ್, ಬಾರ್​, ರೆಸ್ಟೋರೆಂಟ್​​ಗಳ ಲೈಸೆನ್ಸ್​ ಸಬಲೀಕರಣಕ್ಕೆ ಹೋಟೆಲ್ ಅಸೋಸಿಯೇಷನ್ (Hotel Association) ಮನವಿ ಮಾಡಿದೆ. ಮಧ್ಯರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಅವಕಾಶ ನೀಡುವಂತೆ ಅಬಕಾರಿ ಸಚಿವರಿಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.

ಬಾಡಿಗೆ, ಗ್ಯಾಸ್, ಸಿಬ್ಬಂದಿ ನಿರ್ವಹಣೆಗೆ ಹೆಚ್ಚು ವೆಚ್ಚ ಭರಿಸುತ್ತಿದ್ದೇವೆ. 18% ಹೆಚ್ಚಳ ಜಿಎಸ್​​ಟಿ ಕಟ್ಟುತ್ತಿದ್ದೇವೆ. ಉದ್ಯಮಕ್ಕೆ ಲೈಸೆನ್ಸ್ ಪಡೆಯುವ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಹೀಗಾಗಿ ಮಧ್ಯರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಣೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ. ಇನ್ನು ಮತ್ತೊಂದೆಡೆ ಈ ಹಿಂದೆ ಕೂಡ ಬಿಬಿಎಂಪಿ ವ್ಯಾಪ್ತಿಯ ಪಬ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವ ಸಮಯವನ್ನು ವಿಸ್ತರಿಸುವಂತೆ ಹೋಟೆಲ್​ ಅಸೋಸಿಯೇಷನ್ ಡಿಸಿಎಂ ಡಿ. ಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿತ್ತು.

ಇದನ್ನೂ ಓದಿ: ಗಾಜಾದಲ್ಲಿ ಹಮಾಸ್​ ಸೇನಾ ಕಮಾಂಡರ್​ನ ಗುರಿಯಾಗಿಸಿಕೊಂಡು ಇಸ್ರೇಲ್​ ದಾಳಿ, 90 ಮಂದಿ ಸಾವು

ಎಲ್ಲ ಹೋಟೆಲ್​ಗಳ ಪ್ರಸ್ತುತ ಮುಚ್ಚುವ ಸಮಯವನ್ನು ಮಧ್ಯರಾತ್ರಿ 1 ಗಂಟೆಗೆ ಮಿತಿಗೊಳಿಸಲಾಗಿದೆ. ಸುಮಾರು 8 ರಿಂದ 10 ತಿಂಗಳ ಹಿಂದೆ ಎಲ್ಲಾ ಹೋಟೆಲ್​ಗಳಿಗೆ, ವಿಶೇಷವಾಗಿ ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳ ಬಳಿ ಇರುವವರಿಗೆ 24/7 ಸಮಯ ತೆರೆದಿಡಲು ವಿನಂತಿ ಮಾಡಿಕೊಂಡಿದ್ದೆವು. ಸಾಮಾನ್ಯವಾಗಿ ತಡರಾತ್ರಿಯವರೆಗೆ ಪ್ರಯಾಣಿಸುವ ಗ್ರಾಹಕರಿಗೆ ಸೇವೆ ನೀಡಲು ಪ್ರಸ್ತುತ ಸಮಯವನ್ನು 2 ಗಂಟೆಗೆ ಹೆಚ್ಚಿಸುವಂತೆ ನಾವು ಕೇಳಿಕೊಳ್ಳುತ್ತಿದ್ದೇವೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿ. ಸಿ ರಾವ್ ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ