AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್: ರಿಟ್​​ ಅರ್ಜಿ ಸಲ್ಲಿಕೆ

ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ. ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಕೆಲವು ಮೆನು ಕಡಿತಗೊಳಿಸಿವೆ. ಈ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. 40 ಸಾವಿರ ಹೋಟೆಲ್‌ಗಳು ಮತ್ತು 6 ಲಕ್ಷ ಕಾರ್ಮಿಕರ ಭವಿಷ್ಯ ಅತಂತ್ರವಾಗಿದ್ದು, ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್: ರಿಟ್​​ ಅರ್ಜಿ ಸಲ್ಲಿಕೆ
ಹೈಕೋರ್ಟ್​​ಗೆ ರಿಟ್​​ ಅರ್ಜಿ ಸಲ್ಲಿಕೆImage Credit source: Google
ರಮೇಶ್​ ಎಮ್​.
| Edited By: |

Updated on: Mar 17, 2026 | 5:32 PM

Share

ಬೆಂಗಳೂರು, ಮಾರ್ಚ್​​ 17: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರೋದು ಹೋಟೆಲ್​​ ಉದ್ಯಮವನ್ನು ನಷ್ಟದ ಕೂಪಕ್ಕೆ ತಳ್ಳುತ್ತಿದೆ. ಈಗಾಗಲೇ ಹಲವು ಹೋಟೆಲ್​​ಗಳು ಬಂದ್​​ ಆಗಿದ್ದರೆ, ಇನ್ನೊಂದಿಷ್ಟು ಮೆನುವಿನಲ್ಲಿ ಭಾರೀ ಕಡಿತದ ಜೊತೆ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಸ್ಥಿತಿ ಹೀಗೆಯೇ ಮುಂದುವರಿದರೆ ಅವುಗಳೂ ಕ್ಲೋಸ್​​ ಆಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್​​ಗಳಿಗಾಗಿ ಹೈಕೋರ್ಟ್​​ ಕದ ತಟ್ಟಿದೆ.

ಹೈಕೋರ್ಟ್​ಗೆ ರಿಟ್ ಅರ್ಜಿ

ಹೋಟೆಲ್​ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಹೋಟೆಲ್ ಮುಚ್ಚಿರುವುದರಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಆಗಿದೆ. 40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರಿಗೆ ಸಮಸ್ಯೆಯಾಗಿದೆ. ಹೀಗಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ; ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

ಹೋಟೆಲ್ ಉದ್ಯಮಕ್ಕೆ 1 ಸಾವಿರ ಸಿಲಿಂಡರ್​ಗಳನ್ನು ಪೂರೈಸುವುದಾಗಿ ಸಚಿವ ಮುನಿಯಪ್ಪ ಹೇಳಿದ್ದರೂ, ಸಚಿವರ ಭರವಸೆ ಬಗ್ಗೆ ಬೆಂಗಳೂರಿನ ಹೋಟೆಲ್ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. 40 ಸಾವಿರ ಹೋಟೆಲ್​​ಗಳಿಗೆ ಒಂದು ಸಾವಿರ ಸಿಲಿಂಡರ್ ಕೊಡುವ ಬದಲು, ಕೊಡದೆ ಇರುವುದೇ ಒಳ್ಳೆಯದು. ಹೋಟೆಲ್​​ಗಳ ಮಾಲಕರು ಮಾತ್ರವಲ್ಲದೆ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್​ಗಳಿದ್ದು, ಈ ಪೈಕಿ 4,500 ಹೋಟೆಲ್​​ಗಳು ರಿಜಿಸ್ಟರ್​​ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ನಷ್ಟದಲ್ಲಿಯೇ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ನೂರಾರು ಕೋಟಿ ರೂಪಾಯಿ ಹೋಟೆಲ್​​ ಉದ್ಯಮಕ್ಕೆ ನಷ್ಟ ಉಂಟಾಗಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ