AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ವೈಟ್​ಫೀಲ್ಡ್​​ ಬಾಲಕನ ಹೈದರಾಬಾದ್​​ನಲ್ಲಿ ಪತ್ತೆಹಚ್ಚಿದ್ದು ಬೆಂಗಳೂರಿನ ಮಹಿಳೆ! ಹೇಗೆಂದು ಗೊತ್ತೇ?

ಬೆಂಗಳೂರಿನ ವೈಟ್‌ಫೀಲ್ಡ್‌ನ ನಿವಾಸಿಯಾಗಿರುವ ಗುಂಜೂರಿನ ದೀನ್ಸ್ ಅಕಾಡೆಮಿಯ ವಿದ್ಯಾರ್ಥಿ ಪರಿಣವ್ ಜನವರಿ 21 ರಂದು ಬೆಳಿಗ್ಗೆ 8.30 ರ ಸುಮಾರಿಗೆ ಟ್ಯೂಷನ್ ತರಗತಿಗೆ ಮನೆಯಿಂದ ಹೋದವ ನಾಪತ್ತೆಯಾಗಿದ್ದ. ಆತನನ್ನು ಬೆಂಗಳೂರಿನ ಮಹಿಳೆಯೊಬ್ಬರೇ ಹೈದರಾಬಾದ್‌ನ ನಾಂಪಲ್ಲಿಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆಮಾಡಿದ ಸ್ಟೋರಿ ಇಲ್ಲಿದೆ.

ನಾಪತ್ತೆಯಾಗಿದ್ದ ವೈಟ್​ಫೀಲ್ಡ್​​ ಬಾಲಕನ ಹೈದರಾಬಾದ್​​ನಲ್ಲಿ ಪತ್ತೆಹಚ್ಚಿದ್ದು ಬೆಂಗಳೂರಿನ ಮಹಿಳೆ! ಹೇಗೆಂದು ಗೊತ್ತೇ?
ನಾಪತ್ತೆಯಾಗಿದ್ದ ವೈಟ್​ಫೀಲ್ಡ್​​ ಬಾಲಕನ ಹೈದರಾಬಾದ್​​ನಲ್ಲಿ ಪತ್ತೆಹಚ್ಚಿದ್ದು ಬೆಂಗಳೂರಿನ ಮಹಿಳೆ
ಗಣಪತಿ ಶರ್ಮಾ
|

Updated on: Jan 25, 2024 | 7:58 AM

Share

ಬೆಂಗಳೂರು, ಜನವರಿ 25: ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ (Whitefield) ನಿಗೂಢವಾಗಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್​ ಎರಡು ದಿನಗಳ ನಂತರ, ಅಂದರೆ ಬುಧವಾರ ಹೈದರಾಬಾದ್‌ನ ನಾಂಪಲ್ಲಿ (Nampally) ಮೆಟ್ರೋ ನಿಲ್ದಾಣದಲ್ಲಿ ಪತ್ತೆಯಾಗಿ ಹೆತ್ತವರಲ್ಲಿ ನಿಟ್ಟುಸಿರು ಮೂಡಿಸಿದ್ದ. ಆದರೆ, ಪರಿಣವ್​ನನ್ನು ಸುಲಭವಾಗಿ ಪತ್ತೆ ಮಾಡಲು ನೆರವಾಗಿದ್ದು ಬೆಂಗಳೂರಿನ ಮಹಿಳೆಯೊಬ್ಬರು ಎಂಬುದು ಈಗ ತಿಳಿದುಬಂದಿದೆ. ಅಷ್ಟಕ್ಕೂ ಮಹಿಳೆ ಆತನನ್ನು ಪತ್ತೆಹಚ್ಚಿದ ರೀತಿಯೇ ಕುತೂಹಲಕಾರಿಯಾಗಿದೆ.

ಕೆಲಸದ ನಿಮಿತ್ತ ಬುಧವಾರ ಬೆಳಗ್ಗೆ ಹೈದರಾಬಾದ್‌ಗೆ ಬಂದಿದ್ದ ಮಾಧ್ಯಮ ವೃತ್ತಿಪರರಾದ ವಂದನಾ ಮೆನನ್ ಎಂಬವರು ಪರಿಣವ್​​ನನ್ನು ಗಮನಿಸಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಂದನಾ ಕೂಡ ವೈಟ್‌ಫೀಲ್ಡ್‌ನವರೇ! ವಾಟ್ಸ್​​ಆ್ಯಪ್ ಮೂಲಕ ಪರಿಣವ್ ಹುಡುಕಾಟದ ಬಗ್ಗೆ ನಿರಂತರವಾಗಿ ಅವರಿಗೆ ಮಾಹಿತಿ ದೊರೆತಿತ್ತು.

ನಾನು ಗಚಿಬೌಲಿಗೆ ರೈಲಿನಲ್ಲಿ ಹೋಗಲು ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿದ್ದೆ. ಪರಿಣವ್ ಟಿಕೇಟ್ ಖರೀದಿಸಲು ಸಾಲಿನಲ್ಲಿ ನಿಂತಿರುವುದನ್ನು ನಾನು ಗಮನಿಸಿದೆ. ಆತ ಕಾಣೆಯಾದ ದಿನ ಅದೇ ಸಮವಸ್ತ್ರವನ್ನು ಧರಿಸಿದ್ದರಿಂದ ಮತ್ತು ಅದೇ ಉಡುಗೆಯನ್ನು ಧರಿಸಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದರಿಂದ ಆತನನ್ನು ಗುರುತಿಸಲು ನನಗೆ ನೆರವಾಯಿತು ಎಂದು ವಂದನಾ ಮೆನನ್ ತಿಳಿಸಿರುವುದಾಗಿ ‘ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಆತನನ್ನು ಗುರುತಿಸಲು ನಾನು ಸ್ವಲ್ಪ ಸಮಯ ತೆಗೆದುಕೊಂಡೆ. ಆತನೊಂದಿಗೆ ಮಾತನಾಡಲು ಪ್ರಾರಂಭಿಸಿದೆ ಮತ್ತು ನಂತರ ಆತ ಬೆಂಗಳೂರಿನವ ಮತ್ತು ವೈಟ್‌ಫೀಲ್ಡ್ ಪ್ರದೇಶದಲ್ಲಿ ವಾಸಿಸುತ್ತಿದ್ದಾನೆ ಎಂಬುದು ತಿಳಿಯಿತು. ಆಗ, ನಾನು ಕೂಡ ಅದೇ ಏರಿಯಾದಲ್ಲಿ ವಾಸವಿರುವುದು ಎಂದು ಹೇಳಿದೆ. ನಂತರ ನನ್ನ ಪತಿಗೆ ಕರೆ ಮಾಡಿ ಆತನ ಪೋಷಕರಿಗೆ ಮಾಹಿತಿ ತಲುಪಿಸಲು ಸೂಚಿಸಿದೆ. ನಾನು ಮಲಯಾಳಂನಲ್ಲಿ ಮಾತನಾಡಿದ್ದರಿಂದ ಪರಿಣವ್‌ಗೆ ಸರಿಯಾಗಿ ಅರ್ಥವಾಗಲಿಲ್ಲ. ಆತ ಶಾಂತವಾಗಿಯೇ ಇದ್ದ. ನಂತರ ನಾನು ಮೆಟ್ರೋ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಅಷ್ಟೊತ್ತಿಗಾಗಲೇ ಆತನ ತಂದೆ-ತಾಯಿ ವಾಸ್ಟ್​​ಆ್ಯಪ್ ವಿಡಿಯೋ ಕಾಲ್​​​ ಮಾಡಿ ಮಾತನಾಡಿದರು. ಹೈದರಾಬಾದ್​ನಲ್ಲಿ ನೆಲೆಸಿದ್ದ ಅವನ ತಂದೆಯ ಸ್ನೇಹಿತ ಬಂದು ಅವನನ್ನು ಕರೆದುಕೊಂಡು ಹೋದರು ಎಂದು ವಂದನಾ ಮೆನನ್ ತಿಳಿಸಿದ್ದಾರೆ.

ಇದನ್ನೂ ಓದಿ: ಟ್ಯೂಷನ್​ಗೆ ತೆರಳಿದ್ದ 12 ವರ್ಷದ ಬಾಲಕ ನಾಪತ್ತೆ! ವೈಟ್​ಫೀಲ್ಡ್ ಠಾಣೆಯಲ್ಲಿ ಕೇಸ್ ದಾಖಲು

ಜನವರಿ 21ರ ಭಾನುವಾರದಂದು ವೈಟ್‌ಫೀಲ್ಡ್‌ನಲ್ಲಿ ಟ್ಯೂಷನ್ ತರಗತಿ ಮುಗಿಸಿ ಹಿಂತಿರುಗುತ್ತಿದ್ದಾಗ ಪರಿಣವ್ ನಾಪತ್ತೆಯಾಗಿದ್ದ. ತಂದೆ ತಡವಾಗಿ ಟ್ಯೂಷನ್ ತರಗತಿ ನಡೆಯತ್ತಿದ್ದಲ್ಲಿಗೆ ಬಂದಿದ್ದಾಗ ಬಾಲಕ ಅಲ್ಲಿಂದ ತೆರಳಿರುವುದು ಗೊತ್ತಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದ. ಮಾರತ್ತಹಳ್ಳಿ, ಯಮಲೂರು ಮತ್ತು ಮೆಜೆಸ್ಟಿಕ್‌ನಲ್ಲಿರುವ ವಿವಿಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಬಾಲಕನ ಚಲನವಲನಗಳು ಪತ್ತೆಯಾಗಿದ್ದವು. ಬಾಲಕ ನಗರ ತೊರೆದು ಬೇರೆಡೆ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಕಿಡ್ನ್ಯಾಪ್​ ಮಾಡಿರುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗಿದ್ದವು. ಆದರೆ, ಬುಧವಾರ ಪ್ರಕರಣ ಸುಖಾಂತ್ಯವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ