Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆ ಮೆರೆದ ಹೊಯ್ಸಳ ಸಿಬ್ಬಂದಿ: ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹಣ ಸಹಾಯ

ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹೊಯ್ಸಳ ಸಿಬ್ಬಂದಿಯೇ ಹಣ ಸಹಾಯ ಮಾಡಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ.

ಮಾನವೀಯತೆ ಮೆರೆದ ಹೊಯ್ಸಳ ಸಿಬ್ಬಂದಿ: ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹಣ ಸಹಾಯ
ಮಹಿಳೆಯಗೆ ನೆರವಾದ ಹೊಯ್ಸಳ ಪೊಲೀಸರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 25, 2022 | 11:38 AM

ಬೆಂಗಳೂರು: ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹೊಯ್ಸಳ ಸಿಬ್ಬಂದಿಯೇ ಹಣ ಸಹಾಯ ಮಾಡಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ. ಮಹಿಳೆಯ ಕಷ್ಟ ಆಲಿಸಿದ ವಿಜಯನಗರದ ಹೊಯ್ಸಳ ಸಿಬ್ಬಂದಿ ಸಹೋದ್ಯೋಗಿಗಳಿಂದ ₹ 10 ಸಾವಿರ ಹೊಂದಿಸಿ, ಇತರರಿಂದ ₹ 35 ಸಾವಿರ ಸಂಗ್ರಹಿಸಿದರು. ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ₹ 20 ಸಾವಿರ ಬಿಲ್ ಕಡಿಮೆ ಮಾಡಿಸಿದರು. ಬಳಿಕ ಮಹಿಳೆಯ ಬಳಿಯಿದ್ದ ₹ 70 ಸಾವಿರ ಪಡೆದು ಆಸ್ಪತ್ರೆಯ ಬಿಲ್ ಕಟ್ಟಿ ಆಕೆಯನ್ನು ಡಿಸ್​ಚಾರ್ಜ್ ಮಾಡಿಸಿದರು. ವಿಜಯನಗರ ಎಎಸ್ಐ ಜಗದೀಶ್ ಹಾಗೂ ಎಸಿಪಿ ಮೋಹನ್ ಸಹ ಮಹಿಳೆಗೆ ನೆರವಾದರು.

ಈ ಕುರಿತು ಬೆಂಗಳೂರು ಸಿಟಿ ಪೊಲೀಸ್ ಟ್ವಿಟರ್​ ಅಕೌಂಟ್​ನಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ‘ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆದು ₹ 1.25 ಲಕ್ಷ ಬಿಲ್ ಪಾವತಿಸಲು ಸಾಧ್ಯವಾಗದ ಮಹಿಳೆಯೊಬ್ಬರು ನಮ್ಮ-112ಗೆ ಕರೆ ಮಾಡಿ ಹೇಳಿಕೊಂಡಿದ್ದರು. ಹೊಯ್ಸಳ-87 ಸಿಬ್ಬಂದಿಗಳಾದ ಜಗದೀಶ್ ಎಎಸ್ಐ, ಮೋಹನ್ ಎಪಿಸಿ ಅವರು ಆಸ್ಪತ್ರೆಗೆ ಭೇಟಿ ನೀಡಿ ನೆರವಾಗಿದ್ದಾರೆ’ ಎಂದು ಟ್ವೀಟ್​ ಮೂಲಕ ತಿಳಿಸಲಾಗಿದೆ.

137ಕ್ಕೂ ಹೆಚ್ಚು ಜನರು ಈ ಟ್ವೀಟ್​ಗೆ ಲೈಕ್ ಮಾಡಿದ್ದಾರೆ. ಕೆಲವರಂತೂ ’ಹೀಗೂ ಉಂಟೆ’ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ತಂಡಕ್ಕೆ ಹ್ಯಾಟ್ಸಾಫ್’ ಎಂದು ಹಲವರು ಕೃತಜ್ಞತೆ ಹಂಚಿಕೊಂಡಿದ್ದಾರೆ. ಪ್ರಕಾಶ ಬಿರಾದರ ಎನ್ನುವವರು ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಪೊಲೀಸರ ಟ್ವೀಟ್​ಗೆ ಹಲವರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವುದರ ಮೂಲಕ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಎನ್ನುವವರು ‘ಒಳ್ಳೆಯ ಕೆಲಸ ಸರ್ ಕೇಳಿ ಖುಷಿ ಆಯ್ತು… ಆ ಮಹಿಳೆಯ ಕರೆ ಸ್ವೀಕರಿಸಿ ಸಮಸ್ಯೆಗೆ ಸ್ಪಂದಿಸಿದಕ್ಕೆ ನಿಮಗೆ ತುಂಬಾ ಧನ್ಯವಾದಗಳು ಸರ್’ ಎಂದಿದ್ದಾರೆ.

ಇದನ್ನೂ ಓದಿ: ಧನಂಜಯ ನಟನೆಯ ‘ಹೊಯ್ಸಳ’ ಚಿತ್ರಕ್ಕೆ ನೆರವೇರಿತು ಮುಹೂರ್ತ; ಯಾರೆಲ್ಲಾ ಭಾಗಿ?

ಇದನ್ನೂ ಓದಿ: ಪೊಲೀಸ್ ಠಾಣೆ, ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಉರ್ದು ಶಾಲೆಯ ಬಾಗಿಲು ಮುರಿದು ಪುಂಡರ ಎಣ್ಣೆ ಪಾರ್ಟಿ; ಸ್ಥಳೀಯರ ಆಕ್ರೋಶ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ