AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆ ಮೆರೆದ ಹೊಯ್ಸಳ ಸಿಬ್ಬಂದಿ: ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹಣ ಸಹಾಯ

ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹೊಯ್ಸಳ ಸಿಬ್ಬಂದಿಯೇ ಹಣ ಸಹಾಯ ಮಾಡಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ.

ಮಾನವೀಯತೆ ಮೆರೆದ ಹೊಯ್ಸಳ ಸಿಬ್ಬಂದಿ: ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹಣ ಸಹಾಯ
ಮಹಿಳೆಯಗೆ ನೆರವಾದ ಹೊಯ್ಸಳ ಪೊಲೀಸರು
TV9 Web
| Edited By: |

Updated on: Apr 25, 2022 | 11:38 AM

Share

ಬೆಂಗಳೂರು: ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹೊಯ್ಸಳ ಸಿಬ್ಬಂದಿಯೇ ಹಣ ಸಹಾಯ ಮಾಡಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ. ಮಹಿಳೆಯ ಕಷ್ಟ ಆಲಿಸಿದ ವಿಜಯನಗರದ ಹೊಯ್ಸಳ ಸಿಬ್ಬಂದಿ ಸಹೋದ್ಯೋಗಿಗಳಿಂದ ₹ 10 ಸಾವಿರ ಹೊಂದಿಸಿ, ಇತರರಿಂದ ₹ 35 ಸಾವಿರ ಸಂಗ್ರಹಿಸಿದರು. ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ₹ 20 ಸಾವಿರ ಬಿಲ್ ಕಡಿಮೆ ಮಾಡಿಸಿದರು. ಬಳಿಕ ಮಹಿಳೆಯ ಬಳಿಯಿದ್ದ ₹ 70 ಸಾವಿರ ಪಡೆದು ಆಸ್ಪತ್ರೆಯ ಬಿಲ್ ಕಟ್ಟಿ ಆಕೆಯನ್ನು ಡಿಸ್​ಚಾರ್ಜ್ ಮಾಡಿಸಿದರು. ವಿಜಯನಗರ ಎಎಸ್ಐ ಜಗದೀಶ್ ಹಾಗೂ ಎಸಿಪಿ ಮೋಹನ್ ಸಹ ಮಹಿಳೆಗೆ ನೆರವಾದರು.

ಈ ಕುರಿತು ಬೆಂಗಳೂರು ಸಿಟಿ ಪೊಲೀಸ್ ಟ್ವಿಟರ್​ ಅಕೌಂಟ್​ನಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ‘ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆದು ₹ 1.25 ಲಕ್ಷ ಬಿಲ್ ಪಾವತಿಸಲು ಸಾಧ್ಯವಾಗದ ಮಹಿಳೆಯೊಬ್ಬರು ನಮ್ಮ-112ಗೆ ಕರೆ ಮಾಡಿ ಹೇಳಿಕೊಂಡಿದ್ದರು. ಹೊಯ್ಸಳ-87 ಸಿಬ್ಬಂದಿಗಳಾದ ಜಗದೀಶ್ ಎಎಸ್ಐ, ಮೋಹನ್ ಎಪಿಸಿ ಅವರು ಆಸ್ಪತ್ರೆಗೆ ಭೇಟಿ ನೀಡಿ ನೆರವಾಗಿದ್ದಾರೆ’ ಎಂದು ಟ್ವೀಟ್​ ಮೂಲಕ ತಿಳಿಸಲಾಗಿದೆ.

137ಕ್ಕೂ ಹೆಚ್ಚು ಜನರು ಈ ಟ್ವೀಟ್​ಗೆ ಲೈಕ್ ಮಾಡಿದ್ದಾರೆ. ಕೆಲವರಂತೂ ’ಹೀಗೂ ಉಂಟೆ’ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ತಂಡಕ್ಕೆ ಹ್ಯಾಟ್ಸಾಫ್’ ಎಂದು ಹಲವರು ಕೃತಜ್ಞತೆ ಹಂಚಿಕೊಂಡಿದ್ದಾರೆ. ಪ್ರಕಾಶ ಬಿರಾದರ ಎನ್ನುವವರು ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಪೊಲೀಸರ ಟ್ವೀಟ್​ಗೆ ಹಲವರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವುದರ ಮೂಲಕ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಎನ್ನುವವರು ‘ಒಳ್ಳೆಯ ಕೆಲಸ ಸರ್ ಕೇಳಿ ಖುಷಿ ಆಯ್ತು… ಆ ಮಹಿಳೆಯ ಕರೆ ಸ್ವೀಕರಿಸಿ ಸಮಸ್ಯೆಗೆ ಸ್ಪಂದಿಸಿದಕ್ಕೆ ನಿಮಗೆ ತುಂಬಾ ಧನ್ಯವಾದಗಳು ಸರ್’ ಎಂದಿದ್ದಾರೆ.

ಇದನ್ನೂ ಓದಿ: ಧನಂಜಯ ನಟನೆಯ ‘ಹೊಯ್ಸಳ’ ಚಿತ್ರಕ್ಕೆ ನೆರವೇರಿತು ಮುಹೂರ್ತ; ಯಾರೆಲ್ಲಾ ಭಾಗಿ?

ಇದನ್ನೂ ಓದಿ: ಪೊಲೀಸ್ ಠಾಣೆ, ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಉರ್ದು ಶಾಲೆಯ ಬಾಗಿಲು ಮುರಿದು ಪುಂಡರ ಎಣ್ಣೆ ಪಾರ್ಟಿ; ಸ್ಥಳೀಯರ ಆಕ್ರೋಶ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು