AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆ ಮೆರೆದ ಹೊಯ್ಸಳ ಸಿಬ್ಬಂದಿ: ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹಣ ಸಹಾಯ

ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹೊಯ್ಸಳ ಸಿಬ್ಬಂದಿಯೇ ಹಣ ಸಹಾಯ ಮಾಡಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ.

ಮಾನವೀಯತೆ ಮೆರೆದ ಹೊಯ್ಸಳ ಸಿಬ್ಬಂದಿ: ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹಣ ಸಹಾಯ
ಮಹಿಳೆಯಗೆ ನೆರವಾದ ಹೊಯ್ಸಳ ಪೊಲೀಸರು
TV9 Web
| Edited By: |

Updated on: Apr 25, 2022 | 11:38 AM

Share

ಬೆಂಗಳೂರು: ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹೊಯ್ಸಳ ಸಿಬ್ಬಂದಿಯೇ ಹಣ ಸಹಾಯ ಮಾಡಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ. ಮಹಿಳೆಯ ಕಷ್ಟ ಆಲಿಸಿದ ವಿಜಯನಗರದ ಹೊಯ್ಸಳ ಸಿಬ್ಬಂದಿ ಸಹೋದ್ಯೋಗಿಗಳಿಂದ ₹ 10 ಸಾವಿರ ಹೊಂದಿಸಿ, ಇತರರಿಂದ ₹ 35 ಸಾವಿರ ಸಂಗ್ರಹಿಸಿದರು. ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ₹ 20 ಸಾವಿರ ಬಿಲ್ ಕಡಿಮೆ ಮಾಡಿಸಿದರು. ಬಳಿಕ ಮಹಿಳೆಯ ಬಳಿಯಿದ್ದ ₹ 70 ಸಾವಿರ ಪಡೆದು ಆಸ್ಪತ್ರೆಯ ಬಿಲ್ ಕಟ್ಟಿ ಆಕೆಯನ್ನು ಡಿಸ್​ಚಾರ್ಜ್ ಮಾಡಿಸಿದರು. ವಿಜಯನಗರ ಎಎಸ್ಐ ಜಗದೀಶ್ ಹಾಗೂ ಎಸಿಪಿ ಮೋಹನ್ ಸಹ ಮಹಿಳೆಗೆ ನೆರವಾದರು.

ಈ ಕುರಿತು ಬೆಂಗಳೂರು ಸಿಟಿ ಪೊಲೀಸ್ ಟ್ವಿಟರ್​ ಅಕೌಂಟ್​ನಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ‘ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆದು ₹ 1.25 ಲಕ್ಷ ಬಿಲ್ ಪಾವತಿಸಲು ಸಾಧ್ಯವಾಗದ ಮಹಿಳೆಯೊಬ್ಬರು ನಮ್ಮ-112ಗೆ ಕರೆ ಮಾಡಿ ಹೇಳಿಕೊಂಡಿದ್ದರು. ಹೊಯ್ಸಳ-87 ಸಿಬ್ಬಂದಿಗಳಾದ ಜಗದೀಶ್ ಎಎಸ್ಐ, ಮೋಹನ್ ಎಪಿಸಿ ಅವರು ಆಸ್ಪತ್ರೆಗೆ ಭೇಟಿ ನೀಡಿ ನೆರವಾಗಿದ್ದಾರೆ’ ಎಂದು ಟ್ವೀಟ್​ ಮೂಲಕ ತಿಳಿಸಲಾಗಿದೆ.

137ಕ್ಕೂ ಹೆಚ್ಚು ಜನರು ಈ ಟ್ವೀಟ್​ಗೆ ಲೈಕ್ ಮಾಡಿದ್ದಾರೆ. ಕೆಲವರಂತೂ ’ಹೀಗೂ ಉಂಟೆ’ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ತಂಡಕ್ಕೆ ಹ್ಯಾಟ್ಸಾಫ್’ ಎಂದು ಹಲವರು ಕೃತಜ್ಞತೆ ಹಂಚಿಕೊಂಡಿದ್ದಾರೆ. ಪ್ರಕಾಶ ಬಿರಾದರ ಎನ್ನುವವರು ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಪೊಲೀಸರ ಟ್ವೀಟ್​ಗೆ ಹಲವರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವುದರ ಮೂಲಕ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಎನ್ನುವವರು ‘ಒಳ್ಳೆಯ ಕೆಲಸ ಸರ್ ಕೇಳಿ ಖುಷಿ ಆಯ್ತು… ಆ ಮಹಿಳೆಯ ಕರೆ ಸ್ವೀಕರಿಸಿ ಸಮಸ್ಯೆಗೆ ಸ್ಪಂದಿಸಿದಕ್ಕೆ ನಿಮಗೆ ತುಂಬಾ ಧನ್ಯವಾದಗಳು ಸರ್’ ಎಂದಿದ್ದಾರೆ.

ಇದನ್ನೂ ಓದಿ: ಧನಂಜಯ ನಟನೆಯ ‘ಹೊಯ್ಸಳ’ ಚಿತ್ರಕ್ಕೆ ನೆರವೇರಿತು ಮುಹೂರ್ತ; ಯಾರೆಲ್ಲಾ ಭಾಗಿ?

ಇದನ್ನೂ ಓದಿ: ಪೊಲೀಸ್ ಠಾಣೆ, ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಉರ್ದು ಶಾಲೆಯ ಬಾಗಿಲು ಮುರಿದು ಪುಂಡರ ಎಣ್ಣೆ ಪಾರ್ಟಿ; ಸ್ಥಳೀಯರ ಆಕ್ರೋಶ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ