AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆ ಮೆರೆದ ಹೊಯ್ಸಳ ಸಿಬ್ಬಂದಿ: ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹಣ ಸಹಾಯ

ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹೊಯ್ಸಳ ಸಿಬ್ಬಂದಿಯೇ ಹಣ ಸಹಾಯ ಮಾಡಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ.

ಮಾನವೀಯತೆ ಮೆರೆದ ಹೊಯ್ಸಳ ಸಿಬ್ಬಂದಿ: ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹಣ ಸಹಾಯ
ಮಹಿಳೆಯಗೆ ನೆರವಾದ ಹೊಯ್ಸಳ ಪೊಲೀಸರು
TV9 Web
| Edited By: |

Updated on: Apr 25, 2022 | 11:38 AM

Share

ಬೆಂಗಳೂರು: ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದ ಮಹಿಳೆಗೆ ಹೊಯ್ಸಳ ಸಿಬ್ಬಂದಿಯೇ ಹಣ ಸಹಾಯ ಮಾಡಿರುವ ಅಪರೂಪದ ಘಟನೆ ನಗರದಲ್ಲಿ ನಡೆದಿದೆ. ಮಹಿಳೆಯ ಕಷ್ಟ ಆಲಿಸಿದ ವಿಜಯನಗರದ ಹೊಯ್ಸಳ ಸಿಬ್ಬಂದಿ ಸಹೋದ್ಯೋಗಿಗಳಿಂದ ₹ 10 ಸಾವಿರ ಹೊಂದಿಸಿ, ಇತರರಿಂದ ₹ 35 ಸಾವಿರ ಸಂಗ್ರಹಿಸಿದರು. ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ₹ 20 ಸಾವಿರ ಬಿಲ್ ಕಡಿಮೆ ಮಾಡಿಸಿದರು. ಬಳಿಕ ಮಹಿಳೆಯ ಬಳಿಯಿದ್ದ ₹ 70 ಸಾವಿರ ಪಡೆದು ಆಸ್ಪತ್ರೆಯ ಬಿಲ್ ಕಟ್ಟಿ ಆಕೆಯನ್ನು ಡಿಸ್​ಚಾರ್ಜ್ ಮಾಡಿಸಿದರು. ವಿಜಯನಗರ ಎಎಸ್ಐ ಜಗದೀಶ್ ಹಾಗೂ ಎಸಿಪಿ ಮೋಹನ್ ಸಹ ಮಹಿಳೆಗೆ ನೆರವಾದರು.

ಈ ಕುರಿತು ಬೆಂಗಳೂರು ಸಿಟಿ ಪೊಲೀಸ್ ಟ್ವಿಟರ್​ ಅಕೌಂಟ್​ನಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ‘ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆದು ₹ 1.25 ಲಕ್ಷ ಬಿಲ್ ಪಾವತಿಸಲು ಸಾಧ್ಯವಾಗದ ಮಹಿಳೆಯೊಬ್ಬರು ನಮ್ಮ-112ಗೆ ಕರೆ ಮಾಡಿ ಹೇಳಿಕೊಂಡಿದ್ದರು. ಹೊಯ್ಸಳ-87 ಸಿಬ್ಬಂದಿಗಳಾದ ಜಗದೀಶ್ ಎಎಸ್ಐ, ಮೋಹನ್ ಎಪಿಸಿ ಅವರು ಆಸ್ಪತ್ರೆಗೆ ಭೇಟಿ ನೀಡಿ ನೆರವಾಗಿದ್ದಾರೆ’ ಎಂದು ಟ್ವೀಟ್​ ಮೂಲಕ ತಿಳಿಸಲಾಗಿದೆ.

137ಕ್ಕೂ ಹೆಚ್ಚು ಜನರು ಈ ಟ್ವೀಟ್​ಗೆ ಲೈಕ್ ಮಾಡಿದ್ದಾರೆ. ಕೆಲವರಂತೂ ’ಹೀಗೂ ಉಂಟೆ’ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ತಂಡಕ್ಕೆ ಹ್ಯಾಟ್ಸಾಫ್’ ಎಂದು ಹಲವರು ಕೃತಜ್ಞತೆ ಹಂಚಿಕೊಂಡಿದ್ದಾರೆ. ಪ್ರಕಾಶ ಬಿರಾದರ ಎನ್ನುವವರು ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಪೊಲೀಸರ ಟ್ವೀಟ್​ಗೆ ಹಲವರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವುದರ ಮೂಲಕ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಎನ್ನುವವರು ‘ಒಳ್ಳೆಯ ಕೆಲಸ ಸರ್ ಕೇಳಿ ಖುಷಿ ಆಯ್ತು… ಆ ಮಹಿಳೆಯ ಕರೆ ಸ್ವೀಕರಿಸಿ ಸಮಸ್ಯೆಗೆ ಸ್ಪಂದಿಸಿದಕ್ಕೆ ನಿಮಗೆ ತುಂಬಾ ಧನ್ಯವಾದಗಳು ಸರ್’ ಎಂದಿದ್ದಾರೆ.

ಇದನ್ನೂ ಓದಿ: ಧನಂಜಯ ನಟನೆಯ ‘ಹೊಯ್ಸಳ’ ಚಿತ್ರಕ್ಕೆ ನೆರವೇರಿತು ಮುಹೂರ್ತ; ಯಾರೆಲ್ಲಾ ಭಾಗಿ?

ಇದನ್ನೂ ಓದಿ: ಪೊಲೀಸ್ ಠಾಣೆ, ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಉರ್ದು ಶಾಲೆಯ ಬಾಗಿಲು ಮುರಿದು ಪುಂಡರ ಎಣ್ಣೆ ಪಾರ್ಟಿ; ಸ್ಥಳೀಯರ ಆಕ್ರೋಶ

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು