AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು; ಆಸ್ಪತ್ರೆಗೆ ದಾಖಾಲಾಗುವವರ ಸಂಖ್ಯೆ ಹೆಚ್ಚಳ

ಬೆಂಗಳೂರಿನಲ್ಲಿ ಮುಂಗಾರು ಮಳೆಯ ಸಿಂಚನದೊಂದಿಗೆ ವೈರಲ್ ಸೋಂಕು ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಹವಾಮಾನದಲ್ಲಿ ಆಗಿರುವ ಬದಲಾವಣೆ ಕೂಡ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ ತಜ್ಞರು. ಹೀಗಾಗಿ, ಸಾರ್ವಜನಿಕರು ಏನೇನು ಮುನ್ನೆಚ್ಚರಿಕೆ ಕೈಗೊಳ್ಳಬೇಕೆಂಬ ಬಗ್ಗೆ ತಜ್ಞರು ಸಲಹೆ ನೀಡಿದ್ದು, ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು; ಆಸ್ಪತ್ರೆಗೆ ದಾಖಾಲಾಗುವವರ ಸಂಖ್ಯೆ ಹೆಚ್ಚಳ
ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು
Poornima Agali Nagaraj
| Edited By: |

Updated on: Jun 15, 2024 | 10:37 AM

Share

ಬೆಂಗಳೂರು, ಜೂನ್ 15: ಬೆಂಗಳೂರಿನಲ್ಲಿ (Bengaluru) ಒಂದು‌ ವಾರದಿಂದ‌ ಹವಮಾನದಲ್ಲಿ ಭಾರಿ (Climate Change) ಬದಲಾವಣೆಯಾಗುತ್ತಿದ್ದು, ಹವಮಾನ ವೈಪರಿತ್ಯದಿಂದ ಜನರಲ್ಲಿ ಹಲವು ಆರೋಗ್ಯ ಸಮಸ್ಯೆಗಳು (health Issues) ಕಾಡುವುದಕ್ಕೆ ಶುರುವಾಗಿದೆ‌‌. ಮಳೆಯಲ್ಲಿ ಸ್ವಲ್ಪ ನೆನೆದರೂ ಚಳಿ, ಜ್ವರ, ಕೆಮ್ಮು, ನೆಗಡಿ, ತಲೆನೋವಿನಂತಹ ಕಾಯಿಲೆಗಳು ಬಾಧಿಸುವುದಕ್ಕೆ ಶುರುವಾಗಿದ್ದು, ನಗರದ ಆಸ್ಪತ್ರೆಗಳಲ್ಲಿ ಆಸ್ಪತ್ರೆಗೆ ದಾಖಾಲಾಗುವ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ.

ಬೆಂಗಳೂರಿನ ಆಸ್ಪತ್ರೆಗಳಲ್ಲಿ‌ ವಯಸ್ಕರಿಂದ ಹಿಡಿದು ಮಕ್ಕಳವರೆಗೂ ಜ್ವರ, ಕೆಮ್ಮು, ಶೀತ, ಡೆಂಗ್ಯೂ, ಚಿಕೂನ್ ಗುನ್ಯಾ, ವಾಂತಿಯಂತಹ ಪ್ರಕರಣಗಳು ಹೆಚ್ಚಳವಾಗಿದ್ದು, ಆರೋಗ್ಯದ ಮೇಲೆ ನಿಗಾ ಇರಿಸುವಮಂತೆ ವೈದ್ಯರು ಸಲಹೆ ನೀಡಿದ್ದಾರೆ.‌ ಸದ್ಯ ನಗರದಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ, ಮಧ್ಯಾಹ್ನ ಚಳಿಯ ವಾತಾವರಣ, ಸಂಜೆಯ ಮೇಲೆ ಮಳೆ, ಚಳಿ ಕಂಡುಬರುತ್ತಿದ್ದು, ಈ ಬದಲಾವಣೆ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಜೊತೆಗೆ ಈ ಅವಧಿಯಲ್ಲಿ ಫುಡ್ ಪಾಯಿಸನ್ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ಎಲ್ಲೆಂದರಲ್ಲಿ ನೀರು, ತಿಂಡಿ, ಊಟ ಮಾಡುವುದು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಇಂದಿರಾ ಗಾಂಧಿ‌‌ ಮಕ್ಕಳ‌ ಆಸ್ಪತ್ರೆ ನಿರ್ದೇಶಕ ಡಾ ‌ಸಂಜಯ್ ಕೂಡ ಸಲಹೆ ನೀಡಿದ್ದಾರೆ.

ವೈದ್ಯರು ನೀಡಿರುವ ಸಲಹೆಗಳು ಏನು?

  • ಮಳೆ ಸಂಧರ್ಭದಲ್ಲಿ ಬೆಚ್ಚಗೆ ಬಟ್ಟೆ ಧರಿಸುವುದು
  • ಮಕ್ಕಳಿಗೆ ಬಿಸಿನೀರು ಹೆಚ್ಚು ಕೊಡುವುದು
  • ಮಳೆಯಲ್ಲಿ ನೆನೆಯದೇ ಇರುವುದು
  • ಉಸಿರಾಟದ ಸಮಸ್ಯೆ ಇರುವವರು ಮನೆಯಿಂದ ಹೊರ ಬರದಿರುವುದು
  • ಮನೆಯ ಸುತ್ತ- ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು
  • ಸಾಧ್ಯವಾದಷ್ಟು‌ ಮನೆ ಊಟವನ್ನೇ ಮಾಡುವುದು

ಇದನ್ನೂ ಓದಿ: ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಸೂಕ್ತ ಆಹಾರ ತಪಾಸಣೆಗೆ ರಾಜ್ಯ ಸರ್ಕಾರ ಸೂಚನೆ

ಒಟ್ಟಿನಲ್ಲಿ ಮಂಗಾರು ಮಳೆ‌ ಈಗಷ್ಟೇ ಚುರುಕಾಗಿದ್ದು, ಮುಂದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜನರು ಆರೋಗ್ಯದ ಬಗ್ಗೆ ನಿಗಾವಹಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್