ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು; ಆಸ್ಪತ್ರೆಗೆ ದಾಖಾಲಾಗುವವರ ಸಂಖ್ಯೆ ಹೆಚ್ಚಳ

ಬೆಂಗಳೂರಿನಲ್ಲಿ ಮುಂಗಾರು ಮಳೆಯ ಸಿಂಚನದೊಂದಿಗೆ ವೈರಲ್ ಸೋಂಕು ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಹವಾಮಾನದಲ್ಲಿ ಆಗಿರುವ ಬದಲಾವಣೆ ಕೂಡ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ ತಜ್ಞರು. ಹೀಗಾಗಿ, ಸಾರ್ವಜನಿಕರು ಏನೇನು ಮುನ್ನೆಚ್ಚರಿಕೆ ಕೈಗೊಳ್ಳಬೇಕೆಂಬ ಬಗ್ಗೆ ತಜ್ಞರು ಸಲಹೆ ನೀಡಿದ್ದು, ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು; ಆಸ್ಪತ್ರೆಗೆ ದಾಖಾಲಾಗುವವರ ಸಂಖ್ಯೆ ಹೆಚ್ಚಳ
ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು
Follow us
| Updated By: ಗಣಪತಿ ಶರ್ಮ

Updated on: Jun 15, 2024 | 10:37 AM

ಬೆಂಗಳೂರು, ಜೂನ್ 15: ಬೆಂಗಳೂರಿನಲ್ಲಿ (Bengaluru) ಒಂದು‌ ವಾರದಿಂದ‌ ಹವಮಾನದಲ್ಲಿ ಭಾರಿ (Climate Change) ಬದಲಾವಣೆಯಾಗುತ್ತಿದ್ದು, ಹವಮಾನ ವೈಪರಿತ್ಯದಿಂದ ಜನರಲ್ಲಿ ಹಲವು ಆರೋಗ್ಯ ಸಮಸ್ಯೆಗಳು (health Issues) ಕಾಡುವುದಕ್ಕೆ ಶುರುವಾಗಿದೆ‌‌. ಮಳೆಯಲ್ಲಿ ಸ್ವಲ್ಪ ನೆನೆದರೂ ಚಳಿ, ಜ್ವರ, ಕೆಮ್ಮು, ನೆಗಡಿ, ತಲೆನೋವಿನಂತಹ ಕಾಯಿಲೆಗಳು ಬಾಧಿಸುವುದಕ್ಕೆ ಶುರುವಾಗಿದ್ದು, ನಗರದ ಆಸ್ಪತ್ರೆಗಳಲ್ಲಿ ಆಸ್ಪತ್ರೆಗೆ ದಾಖಾಲಾಗುವ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ.

ಬೆಂಗಳೂರಿನ ಆಸ್ಪತ್ರೆಗಳಲ್ಲಿ‌ ವಯಸ್ಕರಿಂದ ಹಿಡಿದು ಮಕ್ಕಳವರೆಗೂ ಜ್ವರ, ಕೆಮ್ಮು, ಶೀತ, ಡೆಂಗ್ಯೂ, ಚಿಕೂನ್ ಗುನ್ಯಾ, ವಾಂತಿಯಂತಹ ಪ್ರಕರಣಗಳು ಹೆಚ್ಚಳವಾಗಿದ್ದು, ಆರೋಗ್ಯದ ಮೇಲೆ ನಿಗಾ ಇರಿಸುವಮಂತೆ ವೈದ್ಯರು ಸಲಹೆ ನೀಡಿದ್ದಾರೆ.‌ ಸದ್ಯ ನಗರದಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ, ಮಧ್ಯಾಹ್ನ ಚಳಿಯ ವಾತಾವರಣ, ಸಂಜೆಯ ಮೇಲೆ ಮಳೆ, ಚಳಿ ಕಂಡುಬರುತ್ತಿದ್ದು, ಈ ಬದಲಾವಣೆ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಜೊತೆಗೆ ಈ ಅವಧಿಯಲ್ಲಿ ಫುಡ್ ಪಾಯಿಸನ್ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ಎಲ್ಲೆಂದರಲ್ಲಿ ನೀರು, ತಿಂಡಿ, ಊಟ ಮಾಡುವುದು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಇಂದಿರಾ ಗಾಂಧಿ‌‌ ಮಕ್ಕಳ‌ ಆಸ್ಪತ್ರೆ ನಿರ್ದೇಶಕ ಡಾ ‌ಸಂಜಯ್ ಕೂಡ ಸಲಹೆ ನೀಡಿದ್ದಾರೆ.

ವೈದ್ಯರು ನೀಡಿರುವ ಸಲಹೆಗಳು ಏನು?

  • ಮಳೆ ಸಂಧರ್ಭದಲ್ಲಿ ಬೆಚ್ಚಗೆ ಬಟ್ಟೆ ಧರಿಸುವುದು
  • ಮಕ್ಕಳಿಗೆ ಬಿಸಿನೀರು ಹೆಚ್ಚು ಕೊಡುವುದು
  • ಮಳೆಯಲ್ಲಿ ನೆನೆಯದೇ ಇರುವುದು
  • ಉಸಿರಾಟದ ಸಮಸ್ಯೆ ಇರುವವರು ಮನೆಯಿಂದ ಹೊರ ಬರದಿರುವುದು
  • ಮನೆಯ ಸುತ್ತ- ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು
  • ಸಾಧ್ಯವಾದಷ್ಟು‌ ಮನೆ ಊಟವನ್ನೇ ಮಾಡುವುದು

ಇದನ್ನೂ ಓದಿ: ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಸೂಕ್ತ ಆಹಾರ ತಪಾಸಣೆಗೆ ರಾಜ್ಯ ಸರ್ಕಾರ ಸೂಚನೆ

ಒಟ್ಟಿನಲ್ಲಿ ಮಂಗಾರು ಮಳೆ‌ ಈಗಷ್ಟೇ ಚುರುಕಾಗಿದ್ದು, ಮುಂದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜನರು ಆರೋಗ್ಯದ ಬಗ್ಗೆ ನಿಗಾವಹಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!