AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು; ಆಸ್ಪತ್ರೆಗೆ ದಾಖಾಲಾಗುವವರ ಸಂಖ್ಯೆ ಹೆಚ್ಚಳ

ಬೆಂಗಳೂರಿನಲ್ಲಿ ಮುಂಗಾರು ಮಳೆಯ ಸಿಂಚನದೊಂದಿಗೆ ವೈರಲ್ ಸೋಂಕು ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಹವಾಮಾನದಲ್ಲಿ ಆಗಿರುವ ಬದಲಾವಣೆ ಕೂಡ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ ತಜ್ಞರು. ಹೀಗಾಗಿ, ಸಾರ್ವಜನಿಕರು ಏನೇನು ಮುನ್ನೆಚ್ಚರಿಕೆ ಕೈಗೊಳ್ಳಬೇಕೆಂಬ ಬಗ್ಗೆ ತಜ್ಞರು ಸಲಹೆ ನೀಡಿದ್ದು, ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು; ಆಸ್ಪತ್ರೆಗೆ ದಾಖಾಲಾಗುವವರ ಸಂಖ್ಯೆ ಹೆಚ್ಚಳ
ಬೆಂಗಳೂರು ಹವಾಮಾನದಲ್ಲಿ ಭಾರಿ ಬದಲಾವಣೆ, ಹೆಚ್ಚಾದ ವೈರಲ್ ಸೋಂಕು
Poornima Agali Nagaraj
Poornima Agali Nagaraj| Edited By: |

Updated on: Jun 15, 2024 | 10:37 AM

Share

ಬೆಂಗಳೂರು, ಜೂನ್ 15: ಬೆಂಗಳೂರಿನಲ್ಲಿ (Bengaluru) ಒಂದು‌ ವಾರದಿಂದ‌ ಹವಮಾನದಲ್ಲಿ ಭಾರಿ (Climate Change) ಬದಲಾವಣೆಯಾಗುತ್ತಿದ್ದು, ಹವಮಾನ ವೈಪರಿತ್ಯದಿಂದ ಜನರಲ್ಲಿ ಹಲವು ಆರೋಗ್ಯ ಸಮಸ್ಯೆಗಳು (health Issues) ಕಾಡುವುದಕ್ಕೆ ಶುರುವಾಗಿದೆ‌‌. ಮಳೆಯಲ್ಲಿ ಸ್ವಲ್ಪ ನೆನೆದರೂ ಚಳಿ, ಜ್ವರ, ಕೆಮ್ಮು, ನೆಗಡಿ, ತಲೆನೋವಿನಂತಹ ಕಾಯಿಲೆಗಳು ಬಾಧಿಸುವುದಕ್ಕೆ ಶುರುವಾಗಿದ್ದು, ನಗರದ ಆಸ್ಪತ್ರೆಗಳಲ್ಲಿ ಆಸ್ಪತ್ರೆಗೆ ದಾಖಾಲಾಗುವ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ.

ಬೆಂಗಳೂರಿನ ಆಸ್ಪತ್ರೆಗಳಲ್ಲಿ‌ ವಯಸ್ಕರಿಂದ ಹಿಡಿದು ಮಕ್ಕಳವರೆಗೂ ಜ್ವರ, ಕೆಮ್ಮು, ಶೀತ, ಡೆಂಗ್ಯೂ, ಚಿಕೂನ್ ಗುನ್ಯಾ, ವಾಂತಿಯಂತಹ ಪ್ರಕರಣಗಳು ಹೆಚ್ಚಳವಾಗಿದ್ದು, ಆರೋಗ್ಯದ ಮೇಲೆ ನಿಗಾ ಇರಿಸುವಮಂತೆ ವೈದ್ಯರು ಸಲಹೆ ನೀಡಿದ್ದಾರೆ.‌ ಸದ್ಯ ನಗರದಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ, ಮಧ್ಯಾಹ್ನ ಚಳಿಯ ವಾತಾವರಣ, ಸಂಜೆಯ ಮೇಲೆ ಮಳೆ, ಚಳಿ ಕಂಡುಬರುತ್ತಿದ್ದು, ಈ ಬದಲಾವಣೆ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಜೊತೆಗೆ ಈ ಅವಧಿಯಲ್ಲಿ ಫುಡ್ ಪಾಯಿಸನ್ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ಎಲ್ಲೆಂದರಲ್ಲಿ ನೀರು, ತಿಂಡಿ, ಊಟ ಮಾಡುವುದು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಇಂದಿರಾ ಗಾಂಧಿ‌‌ ಮಕ್ಕಳ‌ ಆಸ್ಪತ್ರೆ ನಿರ್ದೇಶಕ ಡಾ ‌ಸಂಜಯ್ ಕೂಡ ಸಲಹೆ ನೀಡಿದ್ದಾರೆ.

ವೈದ್ಯರು ನೀಡಿರುವ ಸಲಹೆಗಳು ಏನು?

  • ಮಳೆ ಸಂಧರ್ಭದಲ್ಲಿ ಬೆಚ್ಚಗೆ ಬಟ್ಟೆ ಧರಿಸುವುದು
  • ಮಕ್ಕಳಿಗೆ ಬಿಸಿನೀರು ಹೆಚ್ಚು ಕೊಡುವುದು
  • ಮಳೆಯಲ್ಲಿ ನೆನೆಯದೇ ಇರುವುದು
  • ಉಸಿರಾಟದ ಸಮಸ್ಯೆ ಇರುವವರು ಮನೆಯಿಂದ ಹೊರ ಬರದಿರುವುದು
  • ಮನೆಯ ಸುತ್ತ- ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು
  • ಸಾಧ್ಯವಾದಷ್ಟು‌ ಮನೆ ಊಟವನ್ನೇ ಮಾಡುವುದು

ಇದನ್ನೂ ಓದಿ: ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಸೂಕ್ತ ಆಹಾರ ತಪಾಸಣೆಗೆ ರಾಜ್ಯ ಸರ್ಕಾರ ಸೂಚನೆ

ಒಟ್ಟಿನಲ್ಲಿ ಮಂಗಾರು ಮಳೆ‌ ಈಗಷ್ಟೇ ಚುರುಕಾಗಿದ್ದು, ಮುಂದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜನರು ಆರೋಗ್ಯದ ಬಗ್ಗೆ ನಿಗಾವಹಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ