AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಲಿ: ಸರ್ಕಾರಕ್ಕೆ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ವೇವಾಲ ಒತ್ತಾಯ

ಬಿಜೆಪಿ ಸಂಸದರು ಪ್ರತಿನಿಧಿಸುವ ಕ್ಷೇತ್ರದಲ್ಲೇ ಹಾನಿಯಾಗಿದೆ. ಸರ್ಕಾರ ಕೂಡಲೇ ತಲಾ 5 ಲಕ್ಷ ರೂ ಪರಿಹಾರ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ವೇವಾಲ ಆಗ್ರಹಿಸಿದರು.

ಬೆಂಗಳೂರು ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಲಿ: ಸರ್ಕಾರಕ್ಕೆ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ವೇವಾಲ ಒತ್ತಾಯ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ವೇವಾಲ
TV9 Web
| Edited By: |

Updated on: Sep 09, 2022 | 1:14 PM

Share

ಬೆಂಗಳೂರು: ಪ್ರವಾಹದಿಂದ ಇವತ್ತು ಬೆಂಗಳೂರು ನಗರ ನಲುಗುತ್ತಿದೆ. ಬೆಂಗಳೂರು ನಗರವನ್ನು ಬಿಜೆಪಿ ಈ ಅವಾಂತರಕ್ಕೆ ತಂದಿದೆ. ಬಿಜೆಪಿ ಸಂಸದರು ಪ್ರತಿನಿಧಿಸುವ ಕ್ಷೇತ್ರದಲ್ಲೇ ಹಾನಿಯಾಗಿದೆ. ಸರ್ಕಾರ ಕೂಡಲೇ ತಲಾ 5 ಲಕ್ಷ ರೂ ಪರಿಹಾರ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ವೇವಾಲ ಆಗ್ರಹಿಸಿದರು. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ನಾಯಕರ ಜಂಟಿ ಸುದ್ದಿಗೋಷ್ಠಿ ಅವರು ಮಾತನಾಡಿದರು. ಬೆಂಗಳೂರು ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಸರ್ಕಾರಕ್ಕೆ ರಣದೀಪ್​ ಸಿಂಗ್​ ಸುರ್ಜೇವಾಲ ಒತ್ತಾಯಿಸಿದರು. ನಿನ್ನೆ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಪರಿಶೀಲನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಬೆಂಗಳೂರಲ್ಲಿ ಒತ್ತುವರಿ ಜಾಗ ತೆರವು ಮಾಡಿಲ್ಲ. ಬೆಂಗಳೂರಿನ ಕೆರೆ ಹಾಗೂ ರಾಜಕಾಲುವೆಯಲ್ಲೂ ಹೂಳು ತೆಗೆದಿಲ್ಲ ಎಂದು ಹೇಳಿದರು.

ಭಾರಿ ಮಳೆಯಿಂದ ನಗರದಲ್ಲಿ ಪೀಠೋಪಕರಣ, ವಾಹನಗಳು ಸಹ ಹಾಳಾಗಿವೆ ಎಂದು ಸರ್ಕಾರದ ವಿರುದ್ಧ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಜಿ.ಪರಮೇಶ್ವರ್​​, ಸಲೀಂ ಅಹ್ಮದ್​​​, ಪ್ರಿಯಾಂಕ್ ಖರ್ಗೆ, ವಿ.ಎಸ್​.ಉಗ್ರಪ್ಪ, ರಾಜೀವ್ ಗೌಡ ಸೇರಿ ಹಲವರು ಉಪಸ್ಥಿತರಿದ್ದರು.

ಸರ್ಕಾರ ಸೂಕ್ತ ಕ್ರಮ ಯಾಕೆ ಜರುಗಿಸಿಲ್ಲ? ಒತ್ತುವರಿಯಾಗಿರುವುದನ್ನ ಯಾಕೆ ತೆರವು ಮಾಡಿಲ್ಲ? ಮಳೆಯಲ್ಲಿ ಮುಳುಗಿರುವ ಮನೆಗೆ ತಲಾ ೫ ಲಕ್ಷ ರೂ ಪರಿಹಾರವನ್ನ ನೀಡಬೇಕು. ಪೀಠೋಪಕರಣ,ವಾಹನಗಳು ಹಾಳಾಗಿವೆ. ಅವುಗಳ ಮರು ಹೊಂದಾಣಿಕೆಗೆ ಪರಿಹಾರ ನೀಡಬೇಕು. ಕೂಡಲೇ ಸಹಾಯ ಕೇಂದ್ರಗಳನ್ನ ಪ್ರಾರಂಭಿಸಬೇಕು ಎಂದು ಸರ್ಕಾರಕ್ಕೆ ಸುರ್ಜೇವಾಲ ಏಳು ಪ್ರಶ್ನೆ ಕೇಳುವ ಮೂಲಕ ಒತ್ತಾಯಿಸಿದರು. ಇನ್ನೂ ಸುದ್ದಿಗೋಷ್ಠಿಯಲ್ಲಿ ಭಾರತ್​ ಐಕ್ಯತಾ ಯಾತ್ರೆಯ ವೆಬ್​ಸೈಟ್​ನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಲಾಂಚ್ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ