AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಲಿ: ಸರ್ಕಾರಕ್ಕೆ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ವೇವಾಲ ಒತ್ತಾಯ

ಬಿಜೆಪಿ ಸಂಸದರು ಪ್ರತಿನಿಧಿಸುವ ಕ್ಷೇತ್ರದಲ್ಲೇ ಹಾನಿಯಾಗಿದೆ. ಸರ್ಕಾರ ಕೂಡಲೇ ತಲಾ 5 ಲಕ್ಷ ರೂ ಪರಿಹಾರ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ವೇವಾಲ ಆಗ್ರಹಿಸಿದರು.

ಬೆಂಗಳೂರು ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಲಿ: ಸರ್ಕಾರಕ್ಕೆ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ವೇವಾಲ ಒತ್ತಾಯ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ವೇವಾಲ
TV9 Web
| Edited By: |

Updated on: Sep 09, 2022 | 1:14 PM

Share

ಬೆಂಗಳೂರು: ಪ್ರವಾಹದಿಂದ ಇವತ್ತು ಬೆಂಗಳೂರು ನಗರ ನಲುಗುತ್ತಿದೆ. ಬೆಂಗಳೂರು ನಗರವನ್ನು ಬಿಜೆಪಿ ಈ ಅವಾಂತರಕ್ಕೆ ತಂದಿದೆ. ಬಿಜೆಪಿ ಸಂಸದರು ಪ್ರತಿನಿಧಿಸುವ ಕ್ಷೇತ್ರದಲ್ಲೇ ಹಾನಿಯಾಗಿದೆ. ಸರ್ಕಾರ ಕೂಡಲೇ ತಲಾ 5 ಲಕ್ಷ ರೂ ಪರಿಹಾರ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ವೇವಾಲ ಆಗ್ರಹಿಸಿದರು. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ನಾಯಕರ ಜಂಟಿ ಸುದ್ದಿಗೋಷ್ಠಿ ಅವರು ಮಾತನಾಡಿದರು. ಬೆಂಗಳೂರು ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಸರ್ಕಾರಕ್ಕೆ ರಣದೀಪ್​ ಸಿಂಗ್​ ಸುರ್ಜೇವಾಲ ಒತ್ತಾಯಿಸಿದರು. ನಿನ್ನೆ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಪರಿಶೀಲನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಬೆಂಗಳೂರಲ್ಲಿ ಒತ್ತುವರಿ ಜಾಗ ತೆರವು ಮಾಡಿಲ್ಲ. ಬೆಂಗಳೂರಿನ ಕೆರೆ ಹಾಗೂ ರಾಜಕಾಲುವೆಯಲ್ಲೂ ಹೂಳು ತೆಗೆದಿಲ್ಲ ಎಂದು ಹೇಳಿದರು.

ಭಾರಿ ಮಳೆಯಿಂದ ನಗರದಲ್ಲಿ ಪೀಠೋಪಕರಣ, ವಾಹನಗಳು ಸಹ ಹಾಳಾಗಿವೆ ಎಂದು ಸರ್ಕಾರದ ವಿರುದ್ಧ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಜಿ.ಪರಮೇಶ್ವರ್​​, ಸಲೀಂ ಅಹ್ಮದ್​​​, ಪ್ರಿಯಾಂಕ್ ಖರ್ಗೆ, ವಿ.ಎಸ್​.ಉಗ್ರಪ್ಪ, ರಾಜೀವ್ ಗೌಡ ಸೇರಿ ಹಲವರು ಉಪಸ್ಥಿತರಿದ್ದರು.

ಸರ್ಕಾರ ಸೂಕ್ತ ಕ್ರಮ ಯಾಕೆ ಜರುಗಿಸಿಲ್ಲ? ಒತ್ತುವರಿಯಾಗಿರುವುದನ್ನ ಯಾಕೆ ತೆರವು ಮಾಡಿಲ್ಲ? ಮಳೆಯಲ್ಲಿ ಮುಳುಗಿರುವ ಮನೆಗೆ ತಲಾ ೫ ಲಕ್ಷ ರೂ ಪರಿಹಾರವನ್ನ ನೀಡಬೇಕು. ಪೀಠೋಪಕರಣ,ವಾಹನಗಳು ಹಾಳಾಗಿವೆ. ಅವುಗಳ ಮರು ಹೊಂದಾಣಿಕೆಗೆ ಪರಿಹಾರ ನೀಡಬೇಕು. ಕೂಡಲೇ ಸಹಾಯ ಕೇಂದ್ರಗಳನ್ನ ಪ್ರಾರಂಭಿಸಬೇಕು ಎಂದು ಸರ್ಕಾರಕ್ಕೆ ಸುರ್ಜೇವಾಲ ಏಳು ಪ್ರಶ್ನೆ ಕೇಳುವ ಮೂಲಕ ಒತ್ತಾಯಿಸಿದರು. ಇನ್ನೂ ಸುದ್ದಿಗೋಷ್ಠಿಯಲ್ಲಿ ಭಾರತ್​ ಐಕ್ಯತಾ ಯಾತ್ರೆಯ ವೆಬ್​ಸೈಟ್​ನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಲಾಂಚ್ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ