AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ; 7 ಅಧಿಕಾರಿಗಳ ವಿರುದ್ಧ FIR

ಬಿಎಂಟಿಸಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅಕ್ರಮ ಎಸಗಿದ್ದಾರೆ ಎಂಬ ಬಗ್ಗೆ ದೂರು ದಾಖಲಾಗಿದೆ. BMTC ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ ಮಾಡಲಾಗಿದೆ.

ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ; 7 ಅಧಿಕಾರಿಗಳ ವಿರುದ್ಧ FIR
ಪ್ರಾತಿನಿಧಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Jul 31, 2023 | 10:45 AM

Share

ಬೆಂಗಳೂರು, ಜುಲೈ 31: ಬಿಎಂಟಿಸಿಯಲ್ಲಿ ಭಾರಿ ಗೋಲ್ ಮಾಲ್ ನಡೆದಿದೆ. BMTC ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ ಮಾಡಲಾಗಿದೆ. ಬಿಎಂಟಿಸಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅಕ್ರಮ ನಡೆಸಿದ್ದಾರೆ ಎಂದು ಬಿಎಂಟಿಸಿ ಸಹಾಯಕ ಭದ್ರತಾ-ಜಾಗೃತಾಧಿಕಾರಿ ಸಿ.ಕೆ.ರಮ್ಯಾರವರು ದೂರು ದಾಖಲಿಸಿದ್ದು BMTC ವಾಣಿಜ್ಯ ವಿಭಾಗದ ಮುಖ್ಯ ಸಂಚಾರಕ ಸೇರಿ 6 ಜನರ ಮೇಲೆ ಬೆಂಗಳೂರಿನ ವಿಲ್ಸನ್​ಗಾರ್ಡನ್​ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬಿಎಂಟಿಸಿಯ ಟೆಂಡರ್‌ಗಳ ನೀಡಿಕೆ, ಫ್ಲ್ಯಾಟ್‌ಗಳು ಮತ್ತು ವಾಣಿಜ್ಯ ಮಳಿಗೆಗಳ ಹಂಚಿಕೆ, ಟೆಂಡರ್‌ ಅವಧಿ ವಿಸ್ತರಣೆಗೆ ಸಂಬಂಧಪಟ್ಟ ಕಡತಗಳಿಗೆ BMTC ಎಂಡಿ, ನಿರ್ದೇಶಕರ ಹೆಸರಿನಲ್ಲಿ ನಕಲು ಸಹಿ ಮಾಡಿ ಸಂಸ್ಥೆಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಸೂರ್ಯಸೇನ್, ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ರೇಜು, ಸಿ. ಶಿಖಾ, ಭದ್ರತಾ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಕೆ ಅರುಣ ಸಹಿ ನಕಲು ಮಾಡಲಾಗಿದೆ. ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಶ್ರೀರಾಮ ಮುಲ್ಕಾವನ್, ವಿಭಾಗೀಯ ಸಂಚಾರ ಅಧಿಕಾರಿ ಶ್ಯಾಮಲಾ ಎಸ್ ಮುದ್ದೋಡಿ, ಸಹಾಯಕ ಸಂಚಾರ ವ್ಯವಸ್ಥಾಪಕಿ ಬಿ.ಕೆ.ಮಮತ, ಸಹಾಯಕ ಸಂಚಾರ ಅಧೀಕ್ಷಕಿ ಟಿ ಅನಿತಾ, ಸಂಚಾರ ನೀರೀಕ್ಷಕ ಸತೀಶ್, ಕಿರಿಯ ಸಹಾಯಕ ಪ್ರಕಾಶ್ ಕೊಪ್ಪಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru: ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈ ಓವರ್ ಮೇಲೆ ಪಾರ್ಟಿ ಮಾಡಿದ ವಿಡಿಯೋ ವೈರಲ್; ರಾತ್ರಿ ಗಸ್ತಿಗೆ ಖಾಕಿ ಸಜ್ಜು

ಕಳೆದ ಮೂರು ವರ್ಷಗಳಿಂದ ನಿಗಮದ ಕೆಲ ಬಸ್ ನಿಲ್ದಾಣಗಳ ವಾಣಿಜ್ಯ ಸಂಕೀರ್ಣ, ಸ್ವಚ್ಛತಾ ನಿರ್ವಹವಣಾ ಗುತ್ತಿಗೆ ಸೇರಿ 4 ಟೆಂಡರ್​​ಗಳಲ್ಲಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅವ್ಯವಹಾರ ನಡೆಸಿದ್ದಾರೆ. ದಾಖಲೆಗಳಲ್ಲಿ ಬಿಎಂಟಿಸಿ ಅಧಿಕಾರಿಗಳ ಸಹಿ ನಕಲು ಮಾಡಿ ಬಿಎಂಟಿಸಿ ನಿಗಮಕ್ಕೆ ₹76.57 ಲಕ್ಷ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಬಿಎಂಟಿಸಿ ಬಸ್‌ ನಿಲ್ದಾಣಗಳ ಆವರಣದಲ್ಲಿ ಜಾಹೀರಾತು ನೀಡಿಕೆ, ಬ್ಯಾಂಕ್‌ ಎಟಿಎಂ ಘಟಕಗಳ ಜಾಗದ ಪರವಾನಗಿ ಅವಧಿ ವಿಸ್ತರಣೆ, ಬಿಎಂಟಿಸಿಯ ಫ್ಲ್ಯಾಟ್‌ಗಳ ಹಂಚಿಕೆಗೆ ಸಂಬಂಧಪಟ್ಟ ಕಡತಗಳಿಗೆ ತಪ್ಪಿತಸ್ಥ ಅಧಿಕಾರಿಗಳು ಸಂಸ್ಥೆಯ ಹಾಲಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ, ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಭದ್ರತೆ ಮತ್ತು ಜಾಗೃತ ದಳದ ನಿರ್ದೇಶಕರ ಹೆಸರಿನಲ್ಲಿ ನಕಲಿ ಸಹಿ ಮಾಡಿ ವಂಚಿಸಿದ್ದಾರೆ. ಇದರಿಂದ ಸಂಸ್ಥೆಗೆ ಸಾಕಷ್ಟು ವಂಚನೆಯಾಗಿದೆ. ಅಧಿಕಾರಿಗಳ ಅಕ್ರಮವು ಈಗಾಗಲೇ ಇಲಾಖಾ ತನಿಖೆಯಲ್ಲಿ ದೃಢಪಟ್ಟಿದೆ ಎಂದು ರಮ್ಯಾ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Mon, 31 July 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ