AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 8 ಜನರೊಂದಿಗೆ ಮಹಿಳೆ ವಿವಾಹವೆಂದು ಪತಿ ಆರೋಪ; ಎಂಟಲ್ಲ ನಾಲ್ಕೇ ಎಂದ ಮಹಿಳೆ ಪರ ವಕೀಲೆ

ಕೆಲವೊಂದು ಬಾರಿ ಊಹೆಗೂ ಮೀರಿದ ಕೇಸ್​ಗಳು ಕೋರ್ಟ್​ಗೆ ಬರುತ್ತವೆ. ಅದರಂತೆ ಹೊಸಪೇಟೆಯ ರಾಜಾ ಹುಸೇನ್ ಎಂಬಾತ, ‘ತನ್ನ ಪತ್ನಿ ಎಂಟು ಪುರುಷರನ್ನು ಮದುವೆಯಾಗಿದ್ದಾಳೆಂದು ಆರೋಪಿಸಿ ಹೈಕೋರ್ಟ್ (High Court) ಮೆಟ್ಟಿಲೇರಿದ್ದಾನೆ. ಇದಕ್ಕೆ ಪ್ರತಿಕ್ರಿಯಿಸಿದ ಪತ್ನಿ ಪರ ವಕೀಲೆ, ‘ಇದು ಸುಳ್ಳು ಆರೋಪ, ನಾಲ್ಕು ಜನರನ್ನಷ್ಟೇ ಮಹಿಳೆ ವಿವಾಹವಾಗಿದ್ದಾಳೆ ಎಂದಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರು: 8 ಜನರೊಂದಿಗೆ ಮಹಿಳೆ ವಿವಾಹವೆಂದು ಪತಿ ಆರೋಪ; ಎಂಟಲ್ಲ ನಾಲ್ಕೇ ಎಂದ ಮಹಿಳೆ ಪರ ವಕೀಲೆ
ಹೈಕೋರ್ಟ್
Ramesha M
| Edited By: |

Updated on: Sep 11, 2024 | 3:29 PM

Share

ಬೆಂಗಳೂರು, ಸೆ.11: ಎಂಟು ಪುರುಷರನ್ನು ಮದುವೆಯಾಗಿದ್ದಾಳೆಂದು ಆರೋಪಿಸಿ ಮಹಿಳೆಯ ವಿರುದ್ಧ ಪತಿ ಹೈಕೋರ್ಟ್ (High Court) ಮೆಟ್ಟಿಲೇರಿದ್ದಾನೆ. ಅತ್ತ ಮಹಿಳೆ ತನ್ನ ಮೇಲೆ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿದ್ದು, ಪ್ರಕರಣ ರದ್ದುಪಡಿಸುವಂತೆ ಹೊಸಪೇಟೆಯ ರಾಜಾ ಹುಸೇನ್ ಎಂಬಾತ ಮನವಿ ಮಾಡಿದ್ದಾನೆ. ಹೌದು, ಮಹಿಳೆಯ ಐವರು ಪತಿಯರು ಕಳೆದ ವಿಚಾರಣೆ ವೇಳೆ ಹೈಕೋರ್ಟ್ ಗೆ ಖುದ್ದಾಗಿ ಹಾಜರಾಗಿದ್ದರು. ಆದರೆ, ಸಮಯದ ಅಭಾವದಿಂದ ವಿಚಾರಣೆ ಸಾಧ್ಯವಾಗಿರಲಿಲ್ಲ. ಈಗ ಮೂವರು ಪತಿಯರು ಹೈಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಮಹಿಳೆ ವಿರುದ್ಧ ಸಿಸಿಬಿ ತನಿಖೆ ನಡೆಸುವಂತೆ ಕೋರಿದ್ದಾರೆಂದು ಪತಿ ರಾಜಾ ಹುಸೇನ್ ಪರ ವಕೀಲ ಹೈಕೋರ್ಟ್ಗೆ ತಿಳಿಸಿದ್ದಾರೆ.

ಎಂಟಲ್ಲ ನಾಲ್ಕೇ ಜನರನ್ನ ವಿವಾಹವಾಗಿದ್ದಾಳೆ ಎಂದ ಮಹಿಳೆ ಪರ ವಕೀಲೆ

ಆದರೆ, ಪತಿಯ ವಾದಕ್ಕೆ ಆಕ್ಷೇಪ ಎತ್ತಿರುವ ಪತ್ನಿ ಪರ ವಕೀಲೆ, ಇದು ಸುಳ್ಳು ಆರೋಪ, ನಾಲ್ಕು ಜನರನ್ನಷ್ಟೇ ಮಹಿಳೆ ವಿವಾಹವಾಗಿದ್ದಾಳೆ. ಮೊದಲ ಪತಿ ತೀರಿಕೊಂಡ ಬಳಿಕ ವಿವಾಹ ಆಗಿದೆ. ತಲಾಖ್ ಪಡೆದ ನಂತರವಷ್ಟೇ ನಾಲ್ಕು ಮದುವೆಯಾಗಿರುವುದಾಗಿ ಹೈಕೋರ್ಟ್​ಗೆ ತಿಳಿಸಿದರು. ಅಲ್ಲದೇ ಎಂಟು ಮದುವೆಯಾಗಿರುವುದಾಗಿ ಆರೋಪಿಸುತ್ತಿರುವ ಪತಿಯ ಪರ ಮಾನನಷ್ಟ ಮೊಕದ್ದಮೆ ದಾಖಲಿಸಲು ಯೋಚಿಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ:ಕೋಲಾರ: ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿದ್ದ ಶಿಕ್ಷಕನಿಗೆ ಹೈಕೋರ್ಟ್​​ನಲ್ಲೂ ಸಂಕಷ್ಟ

ಇದಕ್ಕೆ ಪ್ರತಿಕ್ರಿಯಿಸಿದ ಪತಿ ಪರ ವಕೀಲ, ‘ಎಂಟೂ ಜನರ ದಾಖಲೆಗಳು ತಮ್ಮ ಬಳಿ ಇವೆ. ಕಳೆದ ಬಾರಿ ವಿಚಾರಣೆಗೆ ಐವರು ಪತಿಯರು ಖುದ್ದಾಗಿ ಹಾಜರಾಗಿದ್ದರು. ಆದರೆ, ವಿಚಾರಣೆ ಸಾಧ್ಯವಾಗಿಲ್ಲ. ಇನ್ನೂ ಮೂವರು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಮಹಿಳೆ ವಿರುದ್ಧ ಸಿಸಿಬಿ ತನಿಖೆ ನಡೆಸಲು ಆದೇಶಿಸುವಂತೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ಮುಂದೂಡಿದ್ದು, ದಾಖಲೆ ಹಾಜರುಪಡಿಸಿ ವಾದ ಮಂಡಿಸುವಂತೆ ಪತಿಯ ಪರ ವಕೀಲರಿಗೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!