AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 8 ಜನರೊಂದಿಗೆ ಮಹಿಳೆ ವಿವಾಹವೆಂದು ಪತಿ ಆರೋಪ; ಎಂಟಲ್ಲ ನಾಲ್ಕೇ ಎಂದ ಮಹಿಳೆ ಪರ ವಕೀಲೆ

ಕೆಲವೊಂದು ಬಾರಿ ಊಹೆಗೂ ಮೀರಿದ ಕೇಸ್​ಗಳು ಕೋರ್ಟ್​ಗೆ ಬರುತ್ತವೆ. ಅದರಂತೆ ಹೊಸಪೇಟೆಯ ರಾಜಾ ಹುಸೇನ್ ಎಂಬಾತ, ‘ತನ್ನ ಪತ್ನಿ ಎಂಟು ಪುರುಷರನ್ನು ಮದುವೆಯಾಗಿದ್ದಾಳೆಂದು ಆರೋಪಿಸಿ ಹೈಕೋರ್ಟ್ (High Court) ಮೆಟ್ಟಿಲೇರಿದ್ದಾನೆ. ಇದಕ್ಕೆ ಪ್ರತಿಕ್ರಿಯಿಸಿದ ಪತ್ನಿ ಪರ ವಕೀಲೆ, ‘ಇದು ಸುಳ್ಳು ಆರೋಪ, ನಾಲ್ಕು ಜನರನ್ನಷ್ಟೇ ಮಹಿಳೆ ವಿವಾಹವಾಗಿದ್ದಾಳೆ ಎಂದಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರು: 8 ಜನರೊಂದಿಗೆ ಮಹಿಳೆ ವಿವಾಹವೆಂದು ಪತಿ ಆರೋಪ; ಎಂಟಲ್ಲ ನಾಲ್ಕೇ ಎಂದ ಮಹಿಳೆ ಪರ ವಕೀಲೆ
ಹೈಕೋರ್ಟ್
ರಮೇಶ್​ ಎಮ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 11, 2024 | 3:29 PM

Share

ಬೆಂಗಳೂರು, ಸೆ.11: ಎಂಟು ಪುರುಷರನ್ನು ಮದುವೆಯಾಗಿದ್ದಾಳೆಂದು ಆರೋಪಿಸಿ ಮಹಿಳೆಯ ವಿರುದ್ಧ ಪತಿ ಹೈಕೋರ್ಟ್ (High Court) ಮೆಟ್ಟಿಲೇರಿದ್ದಾನೆ. ಅತ್ತ ಮಹಿಳೆ ತನ್ನ ಮೇಲೆ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿದ್ದು, ಪ್ರಕರಣ ರದ್ದುಪಡಿಸುವಂತೆ ಹೊಸಪೇಟೆಯ ರಾಜಾ ಹುಸೇನ್ ಎಂಬಾತ ಮನವಿ ಮಾಡಿದ್ದಾನೆ. ಹೌದು, ಮಹಿಳೆಯ ಐವರು ಪತಿಯರು ಕಳೆದ ವಿಚಾರಣೆ ವೇಳೆ ಹೈಕೋರ್ಟ್ ಗೆ ಖುದ್ದಾಗಿ ಹಾಜರಾಗಿದ್ದರು. ಆದರೆ, ಸಮಯದ ಅಭಾವದಿಂದ ವಿಚಾರಣೆ ಸಾಧ್ಯವಾಗಿರಲಿಲ್ಲ. ಈಗ ಮೂವರು ಪತಿಯರು ಹೈಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಮಹಿಳೆ ವಿರುದ್ಧ ಸಿಸಿಬಿ ತನಿಖೆ ನಡೆಸುವಂತೆ ಕೋರಿದ್ದಾರೆಂದು ಪತಿ ರಾಜಾ ಹುಸೇನ್ ಪರ ವಕೀಲ ಹೈಕೋರ್ಟ್ಗೆ ತಿಳಿಸಿದ್ದಾರೆ.

ಎಂಟಲ್ಲ ನಾಲ್ಕೇ ಜನರನ್ನ ವಿವಾಹವಾಗಿದ್ದಾಳೆ ಎಂದ ಮಹಿಳೆ ಪರ ವಕೀಲೆ

ಆದರೆ, ಪತಿಯ ವಾದಕ್ಕೆ ಆಕ್ಷೇಪ ಎತ್ತಿರುವ ಪತ್ನಿ ಪರ ವಕೀಲೆ, ಇದು ಸುಳ್ಳು ಆರೋಪ, ನಾಲ್ಕು ಜನರನ್ನಷ್ಟೇ ಮಹಿಳೆ ವಿವಾಹವಾಗಿದ್ದಾಳೆ. ಮೊದಲ ಪತಿ ತೀರಿಕೊಂಡ ಬಳಿಕ ವಿವಾಹ ಆಗಿದೆ. ತಲಾಖ್ ಪಡೆದ ನಂತರವಷ್ಟೇ ನಾಲ್ಕು ಮದುವೆಯಾಗಿರುವುದಾಗಿ ಹೈಕೋರ್ಟ್​ಗೆ ತಿಳಿಸಿದರು. ಅಲ್ಲದೇ ಎಂಟು ಮದುವೆಯಾಗಿರುವುದಾಗಿ ಆರೋಪಿಸುತ್ತಿರುವ ಪತಿಯ ಪರ ಮಾನನಷ್ಟ ಮೊಕದ್ದಮೆ ದಾಖಲಿಸಲು ಯೋಚಿಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ:ಕೋಲಾರ: ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿದ್ದ ಶಿಕ್ಷಕನಿಗೆ ಹೈಕೋರ್ಟ್​​ನಲ್ಲೂ ಸಂಕಷ್ಟ

ಇದಕ್ಕೆ ಪ್ರತಿಕ್ರಿಯಿಸಿದ ಪತಿ ಪರ ವಕೀಲ, ‘ಎಂಟೂ ಜನರ ದಾಖಲೆಗಳು ತಮ್ಮ ಬಳಿ ಇವೆ. ಕಳೆದ ಬಾರಿ ವಿಚಾರಣೆಗೆ ಐವರು ಪತಿಯರು ಖುದ್ದಾಗಿ ಹಾಜರಾಗಿದ್ದರು. ಆದರೆ, ವಿಚಾರಣೆ ಸಾಧ್ಯವಾಗಿಲ್ಲ. ಇನ್ನೂ ಮೂವರು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಮಹಿಳೆ ವಿರುದ್ಧ ಸಿಸಿಬಿ ತನಿಖೆ ನಡೆಸಲು ಆದೇಶಿಸುವಂತೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ಮುಂದೂಡಿದ್ದು, ದಾಖಲೆ ಹಾಜರುಪಡಿಸಿ ವಾದ ಮಂಡಿಸುವಂತೆ ಪತಿಯ ಪರ ವಕೀಲರಿಗೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ