AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ವಂಚನೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಮಹಿಳೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ
ರಿಹಾನಾ ಬೇಗಂ ಮತ್ತು ತಹ್ಸೀನ್ ಅಹ್ಮದ್
TV9 Web
| Edited By: |

Updated on: Dec 21, 2021 | 4:21 PM

Share

ಆನ್ಲೈನ್​ ಪರಿಚಯ, ಪ್ರೀತಿ, ಮದುವೆ ಅನಾಹುತಕ್ಕೆ ಕಾರಣ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳನ್ನು ಕಾಣಬಹದು. ಆದರೂ ವಂಚನೆಹೋಗುವವರು ಇರುವವರೆಗೂ ವಂಚನೆ ಆಡುವವರು ಇರುತ್ತಾರೆ ಎನ್ನುವಂತೆ ವ್ಯಕ್ತಿಯೊಬ್ಬ ಮದುವೆಯಾದ ಪತ್ನಿಗೇ ವಂಚಿಸಿದ ಘಟನೆ ನಡೆದಿದೆ.ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ವಂಚನೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಮಹಿಳೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ. ರಿಹಾನಾ ಬೇಗಂ ಮೋಸ ಹೋದ ಮಹಿಳೆ.

ಶಾದಿ ಡಾಟ್​ ಕಾಮ್​ನಲ್ಲಿ ತಹ್ಸೀನ್ ಅಹ್ಮದ್ ಎನ್ನುವಾತನ ಪರಿಚಯವಾಗಿ ರಿಹಾನಾಳನ್ನು ಪ್ರೀತಿಸಿ ಮದುವೆಯಾಗಿದ್ದನು. ಮದುವೆಯ ಬಳಿಕ ತನ್ನ ಮನೆ ಕನ್ಸ್ಟ್ರಕ್ಷನ್ ನಡೆಯುತ್ತಿದೆ ಎಂದು ತಹ್ಸೀನ್ ಅಹ್ಮದ್ ಪತ್ನಿ ರಿಹಾನಾ ಮನೆಯಲ್ಲಿಯೇ ವಾಸವಾಗಿದ್ದ. ಆದರೆ ಮದುವೆಯಾಗಿ ಒಂದೇ ತಿಂಗಳಿನಲ್ಲಿ ಬ್ಯಸಿನೆಸ್​ ಆರಂಭಿಸಬೇಕು ಎಂದು ಪತ್ನಿ ರಿಹಾನಾ ಬಳಿ ಹಣಕ್ಕಾಗಿ ಪೀಡಿಸಲು ಆರಂಭಿಸಿದ್ದ. ಪತಿಯ ಕಾಟ ತಾಳಲಾರದೆ ರಿಹಾನಾ 2 ಲಕ್ಷ ಹಣ 6 ಲಕ್ಷ ಮೌಲ್ಯದ ಚಿನ್ನಾಭರಣ ನೀಡಿದ್ದಳು. ಅದನ್ನು ತೆಗೆದುಕೊಂಡು ಮನೆಯಿಂದ ಪತಿ ನಾಪತ್ತೆಯಾಗಿದ್ದ. ಮೂರು ತಿಂಗಳಾದರೂ ಪತಿಯ ಬಗ್ಗೆ ಯಾವ ಸುಳಿವೂ ಸಿಗದ ಕಾರಣ ರಾಮಮೂರ್ತಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಬಳಿಕ ಇದೇ ರೀತಿ ತಹ್ಸೀನ್ ಅಹ್ಮದ್ ಐದಾರು ಮದುವೆಯಾಗಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ದೂರು ನೀಡಿ 2 ವರ್ಷವಾದರೂ ವಂಚಿಸಿ ನಾಪತ್ತೆಯಾದ ಪತಿಯ ಬಗ್ಗೆ ಸುಳಿವು ದೊರಕದ ಕಾರಣ ರಿಹಾನಾ ಬೇಗಂ ಇದೀಗ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರು: ದಿನಬಳಕೆ ವಸ್ತುಗಳ ಜತೆಗೆ ಡ್ರಗ್ಸ್ ಪೂರೈಸುತ್ತಿದ್ದ ಇಬ್ಬರ ಬಂಧನ; ಗೋಧಿ ಹಿಟ್ಟಿನ ಬಾಕ್ಸ್, ಕುಕ್ಕರ್ ಒಳಗೆ ಹೆರಾಯಿನ್ ಪತ್ತೆ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ