AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಸಾಮಾನ್ಯವಾಗಿ ಪತ್ನಿಯರೇ ಪತಿಯ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡುವುದನ್ನು ಕೇಳಿದ್ದೇವೆ. ಗಂಡ ಟಾರ್ಚರ್ ಕೊಡುತ್ತಾನೆ ಹಾಗೇ ಹೀಗೆ ಎಂದು ಹೆಂಡತಿ ಪೊಲೀಸ್ ಮೆಟ್ಟಿಲೇರುವ ಸಾಕಷ್ಟು ಉದಾಹರಣೆಗಳಿವೆ. ಆದ್ರೆ, ಗಂಡನೇ ಪತ್ನಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡುವುದು ಅಪರೂಪದಲ್ಲಿ ಅಪರೂಪ. ಅಂತಹ ಅಪರೂಪದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಪತ್ನಿಯ ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ
ಪ್ರಾತಿನಿಧಿಕ ಚಿತ್ರImage Credit source: advocatetanwar.com
ರಮೇಶ್ ಬಿ. ಜವಳಗೇರಾ
|

Updated on: Mar 29, 2026 | 9:49 PM

Share

ಬೆಂಗಳೂರು, (ಮಾರ್ಚ್ 29): ಪತ್ನಿಯ (Wife) ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬರು (Husband) ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆಗೆ  ಬೇಸತ್ತಿರುವ ಪತಿ,  ಆಕೆಯ ವಿಕೃತ ಕಾಮದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ಮಾತ್ರವಲ್ಲದೆ, ತನ್ನ ಸ್ನೇಹಿತೆಯ ಜೊತೆಯೂ ದೈಹಿಕ ಸಂಬಂಧ ಹೊಂದುವಂತೆ ಪತ್ನಿ ಒತ್ತಾಯಿಸುತ್ತಿದ್ದಾಳೆಂದು ದೂರಿನಲ್ಲಿ ವಿವರಿಸಿದ್ದಾರೆ.

ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ ವಿಕೃತವಾಗಿ ವರ್ತಿಸುತ್ತಾಳೆ. ಸ್ನೇಹಿತೆಯರ ಜೊತೆ ಸ್ವೀಟ್ ಮೆಮೋರಿ ಹಂಚಿಕೊಳ್ಳುವಂತೆ ಒತ್ತಾಯಿಸುತ್ತಾಳೆ. ಅಲ್ಲದೇ ಮದುವೆಗೂ ಮುನ್ನ ಆಕೆಯ ಸಂಬಂಧಗಳ ಬಗ್ಗೆ ಹೇಳಿ ಕಿರಿಕಿರಿ ಉಂಟುಮಾಡುತ್ತಾಳೆ.ಅಷ್ಟೇ ಅಲ್ಲ ಕುಡಿದು ಬರುವುದು, ಸ್ನೇಹಿತರ ಜೊತೆ ಅಲೆದಾಡುವುದು ಇಂದಿನ ಕಾಲದಲ್ಲಿ ಕಾಮನ್ ಎಂದು ಹೇಳಿ ವಿಕೃತವಾಗಿ ವರ್ತಿಸುತ್ತಾಳೆ. ವಿಕೃತ ದೈಹಿಕ ಸಂಪರ್ಕಕ್ಕೆ ಒಪ್ಪದೇ ಇದ್ದಾಗ ಕಿರುಕುಳ ನೀಡುತ್ತಾಳೆ ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾನೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಇನ್ನು ಪತ್ನಿಯ ಈ ಅಸಲಿ ಮುಖ ತಿಳಿಯುವ ಮುನ್ನವೇ ಆಕೆಗೆ ಒಡವೆಗಳನ್ನು ಕೊಟ್ಟಿದ್ದೇನೆ. ಆ ಒಡವೆಗಳನ್ನೂ ವಾಪಸ್ ನೀಡದೆ ಸತಾಯಿಸುತ್ತಿದ್ದಾಳೆ ಎಂದು ನೊಂದ ಪತಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ