AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾಗಿ ಬಾಳೋಣಾ ಎಂದು ಕರೆಯಲು ಹೋಗಿ ಹೆಂಡ್ತಿ ಮನೆಯಲ್ಲೇ ಪತಿ ಆತ್ಮಹತ್ಯೆ!

ಗಂಡನ ಕಿರುಕುಳಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆಗಳು ಸಾಕಷ್ಟು ವರದಿಯಾಗಿವೆ. ಆದರೆ ಇತ್ತೀಚೆಗೆ ಇದು ಬದಲಾಗಿತ್ತು. ಹೆಂಡತಿ ಕಾಟ, ಕಿರುಕುಳ ತಾಳಲಾರದ ಗಂಡ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳಿವೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಮತ್ತೆ ಒಂದಾಗಲು ಪ್ರಯತ್ನಿಸುತ್ತಿದ್ದರು. ಆದರೆ ಪತ್ನಿ ನಿರಾಕರಿಸಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮತ್ತೆ ಒಂದಾಗಿ ಬಾಳೋಣಾ ಎಂದು ಕರೆಯಲು ಹೋಗಿ ಹೆಂಡ್ತಿ ಮನೆಯಲ್ಲೇ ಪತಿ ಆತ್ಮಹತ್ಯೆ!
ಮತ್ತೆ ಒಂದಾಗಿ ಬಾಳೋಣಾ ಎಂದು ಕರೆಯಲು ಹೋಗಿ ಹೆಂಡ್ತಿ ಮನೆಯಲ್ಲೇ ಪತಿ ಆತ್ಮಹತ್ಯೆ!
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 23, 2025 | 4:08 PM

Share

ಬೆಂಗಳೂರು, ಜನವರಿ 23: ಪತ್ನಿ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಾಗರಭಾವಿಯ ಎನ್​ಜಿಎಫ್​ ಲೇಔಟ್​ನ ಅಪಾರ್ಟ್‌ಮೆಂಟ್​ನಲ್ಲಿ ನಡೆದಿದೆ. ಮಂಜುನಾಥ್ (39) ಆತ್ಮಹತ್ಯೆ ಮಾಡಿಕೊಂಡ ಪತಿ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕ್ಯಾಬ್ ಡ್ರೈವರ್ ಆಗಿದ್ದ ಮಂಜುನಾಥ್ 2013 ರಲ್ಲಿ ನಯನ ಮದುವೆಯಾಗಿದ್ದ. ದಂಪತಿಗೆ 9 ವರ್ಷದ ಮಗ ಕೂಡ ಇದ್ದಾನೆ. ಆದರೆ ಗಂಡ-ಹೆಂಡತಿ ನಡುವೆ ಆಗಾಗ ಜಗಳವಾಗುತ್ತಿತ್ತು. ಈ ಹಿನ್ನೆಲೆ ದಂಪತಿ ಡಿವೋರ್ಸ್ ಮೊರೆ ಹೋಗಿದ್ದರು. 2022 ಕ್ಕೆ ಡಿವೋರ್ಸ್​ಗೆ ಅಪ್ಲೈ ಮಾಡಿದ್ದರು.

ಇದನ್ನೂ ಓದಿ: ಅನೈತಿಕ ಚಟುವಟಿಕೆ ಆರೋಪ: ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ

ಈ ಮಧ್ಯೆ ಹೆಂಡತಿಯ ಬಳಿ ಡಿವೋರ್ಸ್ ಬೇಡ ಎಂದಿದ್ದ ಮಂಜುನಾಥ್, ಮತ್ತೆ ಒಂದಾಗಿ ಬಾಳೋಣ ಅಂತಾ ಕೇಳಲು ಎನ್​ಜಿಎಫ್ ಲೇಔಟ್​ನಲ್ಲಿರುವ ಹೆಂಡತಿ ಮನೆಗೆ ಬಂದಿದ್ದರು. ಹೆಂಡತಿ ವಾಸವಿದ್ದ ಮನೆ ಬಳಿ 8 ಗಂಟೆಗೆ ಮಂಜುನಾಥ್ ತೆರಳಿದ್ದು, ನೀನೆಷ್ಟು ಹಿಂಸೆ ಕೊಟ್ಟಿದ್ದೀಯಾ, ಹೊಡೆದಿದ್ದೀಯಾ ನಾನು ಬರಲ್ಲವೆಂದು ನಯನ ಹೇಳಿದ್ದಾರೆ. ಈ ವೇಳೆ ನಡೆದ ಜಗಳದಿಂದ ಪೆಟ್ರೋಲ್ ತಂದು ಮಂಜುನಾಥ್ ಬೆಂಕಿ ಹಚ್ಚಿಕೊಂಡಿದು ಆತ್ಮಹತ್ಯೆ ಮಾಡಿದ್ದಾರೆ.

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಳಗಾವಿ ತಾಲೂಕಿನ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬೆಳಗಾವಿಯ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೈನಾನ್ಸ್​​ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ. ಸಾಲ ಕೊಡಿಸಿದ್ದ ಹೊಳೆಪ್ಪ ದಡ್ಡಿ, ಅರ್ಧದಷ್ಟು ಹಣ ನನಗೆ ಕೊಟ್ಟರೆ ಸಾಲ ಕಟ್ಟುವುದಾಗಿ ಹೇಳಿದ್ದರು. ಆತನ ನಂಬಿ ಸಾಲ ಪಡೆದು ಅರ್ಧದಷ್ಟು ಹಣ ನೀಡಿದ್ದ ಸರೋಜಾ. ಅರ್ಧ ಸಾಲ ಕಟ್ಟಿದ ಬಳಿಕ ಫೈನಾನ್ಸ್​ನಿಂದ ಪೂರ್ತಿ ಸಾಲ ಕಟ್ಟಲು ಸೂಚಿಸಲಾಗಿದೆ.

ಇದನ್ನೂ ಓದಿ: ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!

ಈ ವೇಳೆ ಸಬ್ಸಿಡಿಯಾಗಿ ಸಾಲ ಪಡೆದಿದ್ದೇನೆ ಎಂದಿದ್ದ ಸರೋಜಾ, ತಾವು ಸಬ್ಸಿಡಿಸಾಲ ಕೊಟ್ಟಿಲ್ಲ ಪೂರ್ತಿ ಹಣ ಕಟ್ಟಿ ಅಂತಾ ನಿತ್ಯ ಕಿರುಕುಳ ಕೊಟ್ಟಿದ್ದಾರೆ. ಸಾಲಕಟ್ಟದೆ ಸರೋಜಾಗೆ ಹೊಳೆಪ್ಪ ದಡ್ಡಿ ಕೂಡ ವಂಚಿಸಿದ್ದ. ಇದರಿಂದ ಬೇಸತ್ತು ಬಾವಿಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದ ಹೊಳೆಪ್ಪನ ವಿರುದ್ಧ ಕೂಡ ಕೇಸ್ ದಾಖಲಾಗಿದೆ.

ವರದಿ: ಪ್ರದೀಪ್ ಕ್ರೈಂ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:59 pm, Thu, 23 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ