AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೈದರಾಬಾದ್ ಕಸ ವಿಲೇವಾರಿ ಮಾದರಿ ಅಳವಡಿಕೆ: ಡಿಕೆ ಶಿವಕುಮಾರ್

ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ತೆಲಂಗಾಣ ರಾಜಧಾನಿ ಹೈದರಾಬಾದ್​ಗೆ ಭೇಟಿ ನೀಡಿ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಅಳವಡಿಸಿರುವ ಕಸ ವಿಲೇವಾರಿ ಘಟಕದ ಬಗ್ಗೆ ಮಾಹಿತಿ ಪಡೆದರು. ಈ ಮಾದರಿಯನ್ನು ಬೆಂಗಳೂರಿನಲ್ಲೂ ಅಳವಡಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಹೈದರಾಬಾದ್ ಕಸ ವಿಲೇವಾರಿ ಮಾದರಿ ಅಳವಡಿಕೆ: ಡಿಕೆ ಶಿವಕುಮಾರ್
ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್​ನ ತ್ಯಾಜ್ಯದಿಂದ ಇಂಧನ ಸ್ಥಾವರ ಘಟಕಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
Rakesh Nayak Manchi
Rakesh Nayak Manchi|

Updated on: Sep 19, 2023 | 7:27 PM

Share

ಬೆಂಗಳೂರು, ಸೆ.19: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಅಳವಡಿಸಿಕೊಂಡಿರುವ ಕಸ ವಿಲೇವಾರಿ ಬಗ್ಗೆ ತಿಳಿದುಕೊಳ್ಳಲು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಇತ್ತೀಚೆಗೆ ತೆಲಂಗಾಣ ರಾಜ್ಯ ರಾಜಧಾನಿ ಹೈದರಾಬಾದ್‌ಗೆ ಭೇಟಿ ನೀಡಿದರು. ಮಾಹಿತಿ ಪಡೆದ ನಂತರ ಮಾತನಾಡಿದ ಅವರು, ಬೆಂಗಳೂರಿನಲ್ಲೂ ಅದೇ ಮಾದರಿಯನ್ನು ಅಳವಡಿಸಲಾಗುವುದು ಎಂದರು.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಕಸ ವಿಲೇವಾರಿಗೆ ಇತ್ತೀಚಿನ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ ಮತ್ತು ಅದೇ ಮಾದರಿಯನ್ನು ಬೆಂಗಳೂರಿಗೆ ತರಲು ನಾನು ಹೈದರಾಬಾದ್‌ಗೆ ಪ್ರವಾಸ ಕೈಗೊಂಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಜುಲೈನಲ್ಲಿ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳೊಂದಿಗೆ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ರಚನೆಯ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಿದ್ದರು. ನಗರದ ಕಸ, ಟ್ರಾಫಿಕ್ ಸಮಸ್ಯೆ ಬಗೆಹರಿಸುವುದೇ ತಮ್ಮ ಆದ್ಯತೆ ಎಂದು ಸಚಿವರು ಆಗಾಗ ಹೇಳುತ್ತಲೇ ಇದ್ದಾರೆ.

ಇದನ್ನೂ ಓದಿ: ಕೆಎನ್ ರಾಜಣ್ಣ ಹೈಕಮಾಂಡ್ ಗೆ ಪತ್ರ ಬರೆಯಲಿರುವ ಬಗ್ಗೆ ಅವರನ್ನೇ ಇಲ್ಲ ಸಿದ್ದರಾಮಯ್ಯರನ್ನು ಕೇಳಬೇಕು: ಡಿಕೆ ಶಿವಕುಮಾರ್, ಡಿಸಿಎಂ

ತ್ಯಾಜ್ಯದಿಂದ ಇಂಧನ ಸ್ಥಾವರ, ವಿಶೇಷತೆ ಏನು?

ರಾಮ್‌ಕಿ ಎನ್ವಿರೋ ಇಂಜಿನಿಯರ್ಸ್ ಲಿಮಿಟೆಡ್‌ನ ಸಹಭಾಗಿತ್ವದಲ್ಲಿ ಸ್ಥಾಪಿಸಲಾದ ತ್ಯಾಜ್ಯದಿಂದ ಇಂಧನ ಸ್ಥಾವರವು ದಿನಕ್ಕೆ 1,200 ಟನ್ ತ್ಯಾಜ್ಯವನ್ನು ಬಳಸಿಕೊಂಡು 19.8 ಮೆಗಾವ್ಯಾಟ್ ತ್ಯಾಜ್ಯದಿಂದ ಪಡೆದ ಇಂಧನವನ್ನು (ಆರ್‌ಡಿಎಫ್) ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಪುರಸಭೆಯ ಘನ ತ್ಯಾಜ್ಯ ಮತ್ತು ಕೈಗಾರಿಕಾ ಮತ್ತು ವಾಣಿಜ್ಯ ತ್ಯಾಜ್ಯವನ್ನು ಬಳಸಿಕೊಂಡು RDF ಅನ್ನು ಉತ್ಪಾದಿಸಲಾಗುತ್ತದೆ. ಇದು ರಾಮ್‌ಕಿ ಎನ್ವಿರೋ ಇಂಜಿನಿಯರ್ಸ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಭಾರತದಲ್ಲಿನ ಮೊದಲ ತ್ಯಾಜ್ಯದಿಂದ ಇಂಧನ ಸ್ಥಾವರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ