AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ಹಾವಳಿ ಬಗ್ಗೆ ಅರಿವಿದೆ, ಆನೆ ಹೋದಮೇಲೆ ನಮ್ಮ ಬೀಗರೂ ಫೋನ್ ಮಾಡಿ ಅದರ ಹಾವಳಿ ಬಗ್ಗೆ ಹೇಳ್ತಾರೆ: ಸಿಎಂ ಬೊಮ್ಮಾಯಿ

ಆನೆ ಹಾವಳಿ ತಡೆಯಲು ನೂರು ಕೋಟಿ ಖರ್ಚು ಮಾಡಲು ನಿರ್ಧರಿಸಿದ್ದೇವೆ. ಆನೆಗಳಿಂದ ಬೆಳೆ ನಷ್ಟ ಪರಿಹಾರ ಮೊತ್ತ ದುಪ್ಪಟ್ಟು ಕೊಡಲು ನಿರ್ಧರಿಸ್ತೇವೆ.

ಆನೆ ಹಾವಳಿ ಬಗ್ಗೆ ಅರಿವಿದೆ, ಆನೆ ಹೋದಮೇಲೆ ನಮ್ಮ ಬೀಗರೂ ಫೋನ್ ಮಾಡಿ ಅದರ ಹಾವಳಿ ಬಗ್ಗೆ ಹೇಳ್ತಾರೆ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Edited By: |

Updated on: Sep 21, 2022 | 7:52 PM

Share

ಬೆಂಗಳೂರು: ಮಾನವ ಮತ್ತು ಪ್ರಾಣಿ ಸಂಘರ್ಷ ಹಳೆಯದು. ಆನೆ ಹಾವಳಿ ಬಗ್ಗೆ ನನಗೆ ಅರಿವಿದೆ. ನಮ್ಮ ಬೀಗರ ಕ್ಷೇತ್ರದಲ್ಲಿಯೂ ಆನೆ ಹಾವಳಿ ಇದೆ. ಆನೆ ದಾಟಿದ ಕೂಡಲೇ ಅವರು ನನಗೆ ಫೋನ್ ಮಾಡುತ್ತಾರೆ ಎಂದು ನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಆನೆ ಹಾವಳಿ ತಡೆಯಲು ನೂರು ಕೋಟಿ ಖರ್ಚು ಮಾಡಲು ನಿರ್ಧರಿಸಿದ್ದೇವೆ. ಆನೆಗಳಿಂದ ಬೆಳೆ ನಷ್ಟ ಪರಿಹಾರ ಮೊತ್ತ ದುಪ್ಪಟ್ಟು ಕೊಡಲು ನಿರ್ಧರಿಸ್ತೇವೆ. ಆನೆಗಳ ನೈಸರ್ಗಿಕ ಆವಾಸ ಸ್ಥಾನದ ವ್ಯಾಪ್ತಿ ಕಡಿಮೆಯಾಗ್ತಿದೆ. ಇದರಿಂದ ಆನೆಗಳು ನಾಡಿಗೆ ಬರುತ್ತಿವೆ. ಮೊದಲೆಲ್ಲಾ ಬಂದು ಬೆಳೆ ತಿಂದು ಹೋಗ್ತಿದ್ದವು. ಹೊಲ, ತೋಟಗಳಲ್ಲೇ ಆನೆಗಳು ಈಗ ಉಳಿದುಕೊಳ್ಳುತ್ತವೆ. ಈಗ ಹೊಸ ಮಾದರಿಯ ಫೆನ್ಸಿಂಗ್ ಬಂದಿದೆ. ಬಂಡೀಪುರದಲ್ಲಿ ಇದರ ಪ್ರಯೋಗ ನಡೆಯುತ್ತಿದೆ. ಅಧಿಕಾರಿಗಳಿಗೆ ಪ್ರಗತಿ ತೋರಿಸಿದರೆ, ಹೆಚ್ಚುವರಿ ಹಣ ಕೊಡೋದಾಗಿ ಹೇಳಿದ್ದೇವೆ.

ಹಾಸನ ಜಿಲ್ಲೆಯಲ್ಲಿ 74 ಕಿ.ಮೀ ಫೆನ್ಸಿಂಗ್ ಹಾಕಲು ನಿರ್ಧಾರ ಮಾಡಲಾಗಿದೆ. ಮನುಷ್ಯರ ಪ್ರಾಣ ಹೋದರೆ ಅದಕ್ಕೂ ಹೆಚ್ಚಿಗೆ ಪರಿಹಾರ ಕೊಡಲು ಕ್ರಮ. ಈಗ ಆನೆಯಿಂದ ಸತ್ತರೆ 7.5 ಲಕ್ಷ ರೂ ಪರಿಹಾರ ಇದೆ. ಇದನ್ನು ಇನ್ನೂ ಹೆಚ್ಚಿಸ್ತೇವೆ, ದುಪ್ಪಟ್ಟು ಮಾಡ್ತೇವೆ ಎಂದು ಹೇಳಿದರು. ಹೆಚ್ಚು ಕಾಟ‌ ಕೊಡುವ ಆನೆಗಳನ್ನು ಕಾಡಿಗೆ ಕಳಿಸಲು ನಿರ್ಧಾರ ಮಾಡಲಾಗಿದೆ. ನಾಲ್ಕು ಆನೆಗಳು ಹೆಚ್ಚು ಕಾಟ ಕೊಡ್ತಿವೆ. ಇವುಗಳನ್ನು ಮತ್ತೆ ಕಾಡಿಗೆ ಬಿಡಲು‌ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವು ಕಡೆ ಸೋಲಾರ್ ಫೆನ್ಸಿಂಗ್ ಹಾಕಲಾಗಿದೆ. ಇದಕ್ಕೆ ವನ್ಯಜೀವಿ ತಜ್ಞರು, ಪರಿಸರವಾದಿಗಳ ವಿರೋಧವೂ ಇದೆ. ಒಟ್ಟಾರೆ ಸ್ಥಳೀಕರು, ಸರ್ಕಾರ, ಅರಣ್ಯ ಇಲಾಖೆ ಸೇರಿ ನಿರ್ಧಾರ ಮಾಡ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಕಾಡಾನೆ ಹಾವಳಿಯಿಂದ ಬೆಳೆ ಹಾನಿ‌, ಪ್ರಾಣ ಹಾನಿ ಬಗ್ಗೆ ವಿಧಾನಸಭೆಯಲ್ಲಿ ನಿಯಮ 69ರ ಅಡಿಯಲ್ಲಿ ಚರ್ಚೆ ಮಾಡಿದ್ದು, ಹಾಸನ ಜಿಲ್ಲೆಯ ಬೇಲೂರು, ಆಲೂರು ತಾಲೂಕು ಮತ್ತು ಸಕಲೇಶಪುರ ತಾಲೂಕುಗಳಲ್ಲಿ ಕಾಡಾನೆ ಹಾವಳಿ ಬಗ್ಗೆ ಬೇಲೂರು ಕ್ಷೇತ್ರದ ಶಾಸಕ ಲಿಂಗೇಶ್ ಚರ್ಚೆ ಆರಂಭಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ