AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED ದಾಳಿ ಬಗ್ಗೆ ನನಗೂ ಅನುಭವ ಇದೆ; ಜಮೀರ್ ಜೊತೆ ಹಂಚಿಕೊಳ್ಳುವೆ; ಸಾರ್ವಜನಿಕವಾಗಿ ಮಾತನಾಡೊಲ್ಲ-ಡಿಕೆ ಶಿವಕುಮಾರ್

ED ಅಧಿಕಾರಿಗಳ ದಾಳಿಯ ಬಗ್ಗೆ ನನಗೂ ಅನುಭವ ಇದೆ. ಜಮೀರ್ ಬಂದರೆ ಅದನ್ನೆಲ್ಲಾ ಅವರ ಜೊತೆ ಹಂಚಿಕೊಳ್ಳುವೆ. ಈ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ED ದೂರು ನೀಡಿರುವ ಬಗ್ಗೆ ಯಾರು ಹೇಳಿಕೆ ಕೊಟ್ಟಿದ್ದಾರೆ. ಹೇಳಿಕೆ ಕೊಟ್ಟವರ ಬಳಿಯೇ ದೂರಿನ ಬಗ್ಗೆ ಕೇಳಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ED ದಾಳಿ ಬಗ್ಗೆ ನನಗೂ ಅನುಭವ ಇದೆ; ಜಮೀರ್ ಜೊತೆ ಹಂಚಿಕೊಳ್ಳುವೆ; ಸಾರ್ವಜನಿಕವಾಗಿ ಮಾತನಾಡೊಲ್ಲ-ಡಿಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on: Aug 10, 2021 | 11:53 AM

Share

ಬೆಂಗಳೂರು: ಜಮೀರ್ ಅಹ್ಮದ್(Zameer Ahmed Khan) ಆಸ್ತಿಪಾಸ್ತಿ ಸಂಬಂಧಿಸಿ ಇ.ಡಿ ಅಧಿಕಾರಿಗಳು ಜಮೀರ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಮತ್ತಷ್ಟು ದಾಖಲೆ ಕೇಳಿದ್ದಾರೆ. ಈ ಸಂಬಂಧ ನಿನ್ನೆ ಜಮೀರ್ ಹೇಳಿಕೆಗಳನ್ನು ನೀಡಿದ್ದರು. ಸದ್ಯ ಈಗ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಕೂಡ ಮಾತನಾಡಿದ್ದು ಜಮೀರ್ ಮನೆ ಮೇಲೆ ED ದಾಳಿಗೂ ನನಗೂ ಸಂಬಂಧವಿಲ್ಲ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ED ಅಧಿಕಾರಿಗಳ ದಾಳಿಯ ಬಗ್ಗೆ ನನಗೂ ಅನುಭವ ಇದೆ. ಜಮೀರ್ ಬಂದರೆ ಅದನ್ನೆಲ್ಲಾ ಅವರ ಜೊತೆ ಹಂಚಿಕೊಳ್ಳುವೆ. ಈ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ED ದೂರು ನೀಡಿರುವ ಬಗ್ಗೆ ಯಾರು ಹೇಳಿಕೆ ಕೊಟ್ಟಿದ್ದಾರೆ. ಹೇಳಿಕೆ ಕೊಟ್ಟವರ ಬಳಿಯೇ ದೂರಿನ ಬಗ್ಗೆ ಕೇಳಬೇಕು. ನನಗೂ ಅದಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಶಾಸಕ ಜಮೀರ್ ಅಹ್ಮದ್ ಖಾನ್ ನಮ್ಮ ಪಕ್ಷದ ನಾಯಕ. ಅವರಿಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಕಾನೂನು ವಿಚಾರದ ಬಗ್ಗೆ ಜಮೀರ್ ಅಹ್ಮದ್‌ಗೆ ಹೇಳಿದ್ದೇನೆ ಎಂದು ಹೇಳಿದರು.

ನಿನ್ನೆ ಮಾತನಾಡಿದ ಜಮೀರ್, ಮನೆ ವಿಚಾರವಾಗಿ ದಾಳಿ ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶೀವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೂ ED ದಾಳಿ ಆಗಿತ್ತು. ಹಾಗಾದರೆ ಡಿಕೆಶಿಗೂ ಐಎಂಎಗೂ ಸಂಬಂಧ ಇತ್ತಾ? ಎಂದು ಡಿ.ಕೆ.ಶಿವಕುಮಾರ್‌ಗೆ ಜಮೀರ್ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ಮನೆ ಲೆಕ್ಕಾಚಾರ, ಒಳಾಂಗಣ ವಿನ್ಯಾಸದ ಬಗ್ಗೆ ವಿವರ ನೀಡುವುದಕ್ಕೆ 10 ದಿನ ಕಾಲಾವಕಾಶ ಕೇಳಿದ್ದೇನೆ: ಕಾಂಗ್ರೆಸ್ ಶಾಸಕ ಜಮೀರ್

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ