AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ: ಡಿ.ಕೆ.ಶಿವಕುಮಾರ್‌

ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಮಾಡಿಸಿದೆ ಎಂಬ ಗಂಭೀರ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಸಮರ್ಥನೆ ನೀಡಿದ್ದಾರೆ.

ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ: ಡಿ.ಕೆ.ಶಿವಕುಮಾರ್‌
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌
TV9 Web
| Edited By: |

Updated on:Dec 15, 2022 | 6:13 PM

Share

ಬೆಂಗಳೂರು: ರಾಜ್ಯದಲ್ಲಿ ತೀರ್ವ ಆತಂಕ ಮೂಡಿಸಿದ್ದ ಮಂಗಳೂರು ಕುಕ್ಕರ್​ ಬಾಂಬ್​​ ಸ್ಫೋಟ್​ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಹೊಸ ವಿವಾದವನ್ನು ಹುಟ್ಟು ಹಾಕಿದ್ದಾರೆ. ಇಂದು (ಡಿ.15) ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಮಾಡಿಸಿದೆ ಎಂದು ಗಂಭೀರ ಆರೋಪ ಮಾಡಿದರು. ಮತ ಮಾಹಿತಿ ಕಳವು ಅಕ್ರಮ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ ತಂದರು. ಎಲ್ಲಿಂದ ಭಯೋತ್ಪಾದಕರು ಬಂದು ಬ್ಲಾಸ್ಟ್ ಮಾಡಿದರು? ಡಿಜಿ ಆತುರದಲ್ಲಿ ಭಯೋತ್ಪಾದಕ ಕೃತ್ಯ ಎಂದರು. ಕೇವಲ ವಿಚಾರ ಬೇರೆಡೆ ಸೆಳೆಯುವ ಪ್ರಯತ್ನವಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕುಕ್ಕರ್ ಬ್ಲಾಸ್ಟ್ ಪೂರ್ವನಿಯೋಜಿತ ಎಂದು ಹೇಗೆ ಹೇಳುತ್ತೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಗೂ ಮುನ್ನವೇ ಅಧಿಕಾರಿಗಳು ಇದನ್ನು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು? ಇದರ ಹಿಂದೆ ಯಾವ ಉಗ್ರನಿದ್ದಾನೆ? ಯಾವ ಸಂಘಟನೆ ಇದೆ? ಯಾರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ. ತನಿಖೆ ಏನಾಯ್ತು ಎಂದು ಪ್ರಶ್ನಿಸಿದರು. ಮತ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿಹಾಕಲು ಈ ಷಡ್ಯಂತ್ರ ರೂಪಿಸಿದ್ದಾರೆ ಎಂದರು.

ಇದನ್ನೂ ಓದಿ: ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣದ ಬಗ್ಗೆ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರ: ಸರಣಿ ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ ಬಿಜೆಪಿ

ಮತದಾನದ ಕಳವು ಇಡೀ ದೇಶದಲ್ಲಿ ಆಗಿರಲಿಲ್ಲ. ಈಗ ಇದನ್ನು ಮಾಡಿ ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದ್ದಾರೆ. ಹಾಗಾದರೆ ಡಿ.ಕೆ.ಶಿವಕುಮಾರ್‌ ಅವರಿಗೆ ಕುಕ್ಕರ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನ ಮೇಲೆ ಏಕೆ ಸಿಂಪತಿ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇವೆಲ್ಲದರ ನಡುವೆ ಸದ್ಯ ಡಿ.ಕೆ.ಶಿವಕುಮಾರ್ ತಮ್ಮ ಹೇಳಿಕೆಗೆ ಸಮರ್ಥನೆ ನೀಡಿದ್ದಾರೆ.

ನಾನು ಯಾರಿಗೂ ಕ್ಷಮೆ ಕೇಳುವುದಿಲ್ಲ. ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ. ಅದೊಂದು ಇನ್ಸಿಡೆಂಟ್ ಆಗಿದೆ, ಅದಕ್ಕೆ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಆದರೆ ಅದನ್ನು ವೈಭವೀಕರಿಸಿದ ರೀತಿ ಸರಿಯಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ನಿಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಅಧಿಕಾರಿಗಳನ್ನು ಬಳಸಿಕೊಂಡರು. ನಾನು ಯಾವ ಟೆರರಿಸ್ಟ್‌ಗೂ ಬೆಂಬಲ ನೀಡಲ್ಲ. ಭ್ರಷ್ಟಾಚಾರವನ್ನು ಮಾಧ್ಯಮಗಳು ತುಂಬಾ ಚೆನ್ನಾಗಿ ತೋರಿಸುತ್ತಿದ್ದವು. ಮಾಧ್ಯಮಗಳನ್ನು ಡೈವರ್ಟ್‌ ಮಾಡಲು ಸ್ಫೋಟ ಪ್ರಕರಣ ಬಳಸಿಕೊಂಡ್ರು ಎಂದು ಹೇಳಿದರು.

ಟೆರರಿಸ್ಟ್‌ ಅಟ್ಯಾಕ್‌ನಿಂದ ನಮ್ಮ ನಾಯಕರನ್ನೇ ಕಳೆದುಕೊಂಡವರು ನಾವು. ಇದರ ನೋವು ಏನು ಅನ್ನೋದು ನಮಗೆ ಗೊತ್ತಿದೆ. ಯಾವುದೇ ತನಿಖೆ ಮಾಡದೆಯೇ ಉಗ್ರ ಚಟುವಟಿಕೆ ಅಂತ ಹೇಳಿದ್ದೀರಿ. ತನಿಖೆ ಮಾಡುವ ಮೊದಲೇ ನಿಮಗೆ ಹೇಗೆ ಗೊತ್ತಾಯ್ತು ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:13 pm, Thu, 15 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?