AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಬಾರಿ ಗೆದ್ದಿದ್ದೇನೆ, ಆಪರೇಷನ್ ಕಮಲಕ್ಕೆ ಬಲಿಯಾಗಿಲ್ಲ, ಪಕ್ಷ ನಿಷ್ಠೆಗೆ ಸಚಿವ ಸ್ಥಾನ ಕೊಡಿ : ಭದ್ರಾವತಿ ಶಾಸಕ ಸಂಗಮೇಶ್ ಬೇಡಿಕೆ

ಕೆ.ಹೆಚ್.ಮುನಿಯಪ್ಪ ಕೇಂದ್ರ ಸಚಿವರ ಸ್ಥಾನ ಅನುಭವಿಸಿದ ಬಳಿಕನೂ ರಾಜ್ಯದಲ್ಲಿ ಮಂತ್ರಿ ಸ್ಥಾನ ಪಡೆದ ಬಗ್ಗೆ ಪ್ರತಿಕ್ರಿಯಿಸುತ್ತಾ, ಅಂತಹವರು ಹಿರಿಯರಿದ್ದಾರೆ. ಅವರೇ ಅರ್ಥಮಾಡಿಕೊಳ್ಳಬೇಕು‌ ಎಂದು ಭದ್ರಾವತಿ ಕೈ ಶಾಸಕ ಬಿ.ಕೆ.ಸಂಗಮೇಶ್ ಸೂಕ್ಷ್ಮವಾಗಿ ಹೇಳಿದರು.

ನಾಲ್ಕು ಬಾರಿ ಗೆದ್ದಿದ್ದೇನೆ, ಆಪರೇಷನ್ ಕಮಲಕ್ಕೆ ಬಲಿಯಾಗಿಲ್ಲ, ಪಕ್ಷ ನಿಷ್ಠೆಗೆ ಸಚಿವ ಸ್ಥಾನ ಕೊಡಿ : ಭದ್ರಾವತಿ ಶಾಸಕ ಸಂಗಮೇಶ್ ಬೇಡಿಕೆ
ಪಕ್ಷ ನಿಷ್ಠೆಗೆ ಸಚಿವ ಸ್ಥಾನ ಕೊಡಿ : ಭದ್ರಾವತಿ ಶಾಸಕ ಸಂಗಮೇಶ್ ಬೇಡಿಕೆ
ಸಾಧು ಶ್ರೀನಾಥ್​
|

Updated on: May 21, 2023 | 7:36 PM

Share

ಬೆಂಗಳೂರು: ನಾಲ್ಕು ಬಾರಿ ಶಾಸಕನಾಗಿ ಗೆದ್ದು ಬರುತ್ತಿರುವ ನನಗೆ ಹಿರಿತನ ನೋಡಿ ಮಂತ್ರಿ ಸ್ಥಾನ ನೀಡಬೇಕು ಎಂದು ಭದ್ರಾವತಿ ಕಾಂಗ್ರೆಸ್​ ಶಾಸಕ ಬಿ.ಕೆ.ಸಂಗಮೇಶ್ ಒತ್ತಾಯಿಸಿದರು. ಬೆಂಗಳೂರಿನ ತಮ್ಮ ಕಚೇರಿ ಬಳಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡಬೇಕೆಂದು ನಾನು ಡಿಕೆಶಿ, ಸಿದ್ದರಾಮಯ್ಯ ನವರಿಗೆ ಮನವಿ ಮಾಡುತ್ತೇನೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಾಲ್ಕನೇ‌ ಬಾರಿ ಜಯಗಳಿಸಿದ್ದೇನೆ. ಕಾಗೋಡು ತಿಮ್ಮಪ್ಪ ನಂತರ ನಾನೊಬ್ಬನೇ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಜಯಗಳಿಸಿರೋದು. ಸ್ವಾತಂತ್ರ್ಯ ಬಂದಾಗಿನಿಂದ ಭದ್ರಾವತಿಯ ಯಾವುದೇ ಶಾಸಕರಿಗೆ ಸಚಿವ ಸ್ಥಾನ ಸಿಗಲಿಲ್ಲ. ಬಿಜೆಪಿಯಿಂದ ಸಾಕಷ್ಟು ಆಫರ್ ಬಂದ್ರು ಕೂಡ, ಆಪರೇಷನ್ ಕಮಲದ ವೇಳೆ ಕೋಟಿ ಕೋಟಿ ಆಫರ್ ಕೊಟ್ಟು, ಸಚಿವ ಸ್ಥಾನದ ಆಮಿಷ ಒಡ್ಡಿದರೂ ಸಹ ನಾನು ಪಕ್ಷ ಬಿಟ್ಟು ಹೋಗಲಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಜನಾಕ್ರೋಶ ಸಮಾವೇಶಕ್ಕೆಂದು ಶಿವಮೊಗ್ಗಕ್ಕೆ ಬಂದಿದ್ದಾಗ ಸಂಗಮೇಶ್ ಅವರನ್ನ ಗೆಲ್ಲಿಸಿ, ಸಚಿವರನ್ನಾಗಿ ಮಾಡುತ್ತೇನೆ ಅಂದಿದ್ರು. ‌ಜನ ಮತ ಹಾಕಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ಕೊಟ್ಟಿಲ್ಲ ಅಂದ್ರೆ ಏನು ಮಾಡೋದಕ್ಕೆ ಆಗೋದಿಲ್ಲ. ಆದರೆ ನಾನು ಬಿಜೆಪಿಯ ಭದ್ರಕೊಟೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಲ್ಲಿ ಗೆದ್ದಿದ್ದೇನೆ. ಜಿಲ್ಲಾವರು ವಿಷಯದಲ್ಲಿ ನಾನು ಹಿರಿಯನಿದ್ದೇನೆ. ಶಿವಮೊಗ್ಗ ದಲ್ಲಿ ಪ್ರಾಮಾಣಿಕ ವಾಗಿ ನಾಲ್ಕು ಬಾರಿ ಗೆದ್ದಿದ್ದೇನೆ. ಇದರಿಂದ ನನಗೆ ಸಚಿವ ಸ್ಥಾನದ ಜೊತೆ ಶಿವಮೊಗ್ಗ ಉಸ್ತುವಾರಿ ನೀಡಬೇಕು. ನನಗೆ ಸಚಿವ ಸ್ಥಾನ ಸಿಗದಿದ್ದರೂ ಪಕ್ಷದಲ್ಲೇ ಇರುತ್ತೇನೆ. ನನ್ನ ಹಿರಿತನ ಪರಿಗಣಿಸಿ ಕೊಡುವ ವಿಶ್ವಾಸವಿದೆ. ನನಗೆ ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಕೊಡ್ತೇನೆ ಅಂತಾ ಭರವಸೆ ನೀಡಿದ್ದಾರೆ. ನನಗೆ ಸಚಿವ ಸ್ಥಾನ ಕೊಟ್ರೆ ಮುಂಬರುವ ಪಾರ್ಲಿಮೆಂಟ್ ಚುನಾವಣೆ ಗೆ ಅನುಕೂಲ ಆಗುತ್ತದೆ ಎಂದರು.

ಮಧು ಬಂಗಾರಪ್ಪ ಸಚಿವ ಸ್ಥಾನ ಕೇಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅದು ಅವರಿಗೆ ಬಿಟ್ಟ ವಿಚಾರ. ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ನಾನು ನಾಲ್ಕು ಬಾರಿ ಕಾಂಗ್ರೆಸ್ ನಿಂದ ಗೆದ್ದಿದ್ದೇನೆ. ಅವರು ಈ ಮುಂಚೆ ಜೆಡಿಎಸ್ ನಿಂದ ಗೆದ್ದಿದ್ದರೆ, ಈ ಬಾರಿ ಕಾಂಗ್ರೆಸ್ ನಿಂದ ಗೆದ್ದಿದ್ದಾರೆ. ಅವರೂ ಯೋಚನೆ ಮಾಡಲಿ. ಮಂತ್ರಿಗಿರಿ ಕೇಳುವುದರಲ್ಲಿ ತಪ್ಪಿಲ್ಲ. ಆದರೆ ಹಿರಿತನ ಆಧಾರದಲ್ಲಿ ನನಗೆ ಮಂತ್ರಿ ಸ್ಥಾನ ನೀಡಬೇಕು. ಹೈ ಕಮಾಂಡ್ ತೀರ್ಮಾನಕ್ಕೆ ನಾನು ಬದ್ದ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ಸಚಿವ ಸ್ಥಾನ ಸಿಗದ ಸೀನಿಯರ್ ಗಳಿಗೆ ಅವಕಾಶ ಕೊಡಿ:

ಮೂರು ನಾಲ್ಕು ಬಾರಿ ಗೆದ್ದವರಿಗೆ ಈ ಬಾರಿ ಅವಕಾಶ ನೀಡಬೇಕು. ಸಚಿವ ಸ್ಥಾನ ಗಿಟ್ಟಿಸಿಕೊಳ್ಳುತ್ತಿರುವ ಹಿರಿಯರ ಬದಲು ಮೂರು ನಾಲ್ಕು ಗೆದ್ದು ಬರುತ್ತಿರುವ ಹೊಸಬರಿಗೆ ಮಂತ್ರಿ ಸ್ಥಾನ ನೀಡಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಕೆ.ಹೆಚ್.ಮುನಿಯಪ್ಪ ಕೇಂದ್ರ ಸಚಿವರ ಸ್ಥಾನ ಅನುಭವಿಸಿದ ಬಳಿಕನೂ ರಾಜ್ಯದಲ್ಲಿ ಮಂತ್ರಿ ಸ್ಥಾನ ಪಡೆದ ಬಗ್ಗೆ ಪ್ರತಿಕ್ರಿಯಿಸುತ್ತಾ, ಅಂತಹವರು ಹಿರಿಯರಿದ್ದಾರೆ. ಅವರೇ ಅರ್ಥಮಾಡಿಕೊಳ್ಳಬೇಕು‌ ಎಂದು ಶಾಸಕ ಬಿ.ಕೆ.ಸಂಗಮೇಶ್  ಹೇಳಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!