AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಅಧಿಕಾರಿಗಳಿಗೆ ದೂರು ಕೊಟ್ಟವರು ಯಾರೆಂದು ಗೊತ್ತಿದೆ; ಸಿಎಂಗೆ ಹೇಳಿದ್ದೇನೆ ಎಂದ ಸಚಿವ ಸತೀಶ್​ ಜಾರಕಿಹೊಳಿ

ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ಇಡಿ ದಾಳಿ ಮಾಡಿತ್ತು. ಬೆಂಗಳೂರಿನ ಸರ್ಕಾರಿ ನಿವಾಸ, ಖಾಸಗಿ ನಿವಾಸ ಹಾಗೂ ಗೋಕಾಕ್​​ನಲ್ಲಿರುವ ಮನೆ, ಪುತ್ರ, ಪುತ್ರಿ ಹಾಗೂ ಆಪ್ತರಿಗೂ ಶಾಕ್​ ಕೊಟ್ಟಿತ್ತು. ಇ.ಡಿ ಅಧಿಕಾರಿಗಳ ಈ ಮೆಗಾ ಆಪರೇಷನ್ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇಡಿ ಅಧಿಕಾರಿಗಳಿಗೆ ದೂರು ಕೊಟ್ಟರು ಯಾರೆಂದು ನನಗೆ ಗೊತ್ತಿದೆ. ಸಿಎಂಗೆ ಹೇಳಿದ್ದೇನೆ ಎಂದು ಇದೀಗ ಸಚಿವ ಸತೀಶ್​ ಜಾರಕಿಹೊಳಿ ಹೊಸ್​​ ಬಾಂಬ್​ ಸಿಡಿಸಿದ್ದಾರೆ.

ಇಡಿ ಅಧಿಕಾರಿಗಳಿಗೆ ದೂರು ಕೊಟ್ಟವರು ಯಾರೆಂದು ಗೊತ್ತಿದೆ; ಸಿಎಂಗೆ ಹೇಳಿದ್ದೇನೆ ಎಂದ ಸಚಿವ ಸತೀಶ್​ ಜಾರಕಿಹೊಳಿ
ಸತೀಶ್ ಜಾರಕಿಹೊಳಿ Image Credit source: tv9 kannada
Anil Kalkere
| Edited By: |

Updated on:Sep 12, 2026 | 5:00 PM

Share

ಬೆಂಗಳೂರು, ಸೆಪ್ಟೆಂಬರ್​​ 12: ಸಚಿವ ಸತೀಶ್ ಜಾರಕಿಹೊಳಿಗೆ ಸಂಬಂಧಿಸಿದ ಬೆಂಗಳೂರು, ಬೆಳಗಾವಿ ಸೇರಿ ಬರೋಬ್ಬರಿ 18 ಕಡೆ ಸತತ 36 ಗಂಟೆಗಳ ಕಾಲ ಇ.ಡಿ ಮೆಗಾ ಆಪರೇಷನ್​​​ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ದಾಳಿ ಬಳಿಕ ಲೋಕೋಪಯೋಗಿ ಇಲಾಖೆಯ ಅಕ್ರಮ, ಲಂಚ ಸಂಗ್ರಹದ ದಾಖಲೆ ಪತ್ತೆ ಬಗ್ಗೆ ಇ.ಡಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದೆ. ಇದೆಲ್ಲದರ ಮಧ್ಯೆ ‘ಇ.ಡಿ ಅಧಿಕಾರಿಗಳಿಗೆ ದೂರು ಕೊಟ್ಟವರ ಬಗ್ಗೆ ನನಗೆ ಗೊತ್ತಿದೆ. ಸಿಎಂ ಡಿಕೆ ಶಿವಕುಮಾರ್​ಗೆ ದೂರು ಕೊಟ್ಟವರ ಬಗ್ಗೆ ಹೇಳಿದ್ದೇನೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಿಗ್ ಟ್ವಿಸ್ಟ್ ಕೊಟ್ಟ ಸಚಿವ ಸತೀಶ್​ ಜಾರಕಿಹೊಳಿ

ಇಡಿ ಪತ್ರಿಕಾ ಪ್ರಕಟಣೆ ಬೆನ್ನಲ್ಲೇ ಇಂದು ಕೂಡ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ್​ ಜಾರಕಿಹೊಳಿ, ‘ದೂರು ಕೊಟ್ಟವರು ಯಾರು ಅಂತ ಗೊತ್ತಿದೆ, ಸಿಎಂ ಡಿಕೆ ಶಿವಕುಮಾರ್​ ಗಮನಕ್ಕೆ ತಂದಿದ್ದೇನೆ. ಇಲ್ಲಿ ನಮ್ಮ ಪಕ್ಷದವರು ಇರಬಹುದು. ಯಾರೇ ಇದ್ದರೂ ಮುಖ್ಯಮಂತ್ರಿಗಳು ಗಮನವಹಿಸುತ್ತಾರೆ. ಬಿಜೆಪಿಯವರಿರಬಹುದು ಅಥವಾ ಅವರ ಸಂಬಂಧಿ ಇರಬಹುದು. 50:50 ಇದೆ, ಯಾರು ಅಂತಾ ಅವರಿಗೆ ಗೊತ್ತಿದೆ, ಹೇಳಿದ್ದೇವೆ’ ಅಂತ ಬಿಗ್ ಟ್ವಿಸ್ಟ್​ ಕೊಟ್ಟಿದ್ದಾರೆ.

LIVE TV

ಇ.ಡಿ ಅಧಿಕಾರಿಗಳು ಕರೆಯಲಿ, ಉತ್ತರ ಕೊಡುತ್ತೇನೆ ಎಂದ ಸಚಿವ

‘ಇ.ಡಿ ಅಧಿಕಾರಿಗಳು ವಿಚಾರಣೆಗೆ ಕರೆದರೆ ದಾಖಲೆ ಕೊಡುತ್ತೇವೆ. ಹೂಡಿಕೆ ಅಂದರೆ ಅಧಿಕೃತವಾಗಿ ವರ್ಗಾವಣೆ ಆಗಬೇಕಲ್ಲವೇ? ಹೆಚ್ಚಿನ ತನಿಖೆ ಮಾಡಬೇಕೆಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ. ನೋಟಿಸ್ ಕೊಟ್ಟು ಕರೆಸಿದರೆ ಸರಿಯಾದ ಉತ್ತರ ಕೊಡುತ್ತೇನೆ. ಇ.ಡಿ ಅಧಿಕಾರಿಗಳು ಕರೆಯಲಿ, ಉತ್ತರ ಕೊಡುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲೋಕೋಪಯೋಗಿ ಇಲಾಖೆಯ ಅಕ್ರಮ, ಲಂಚ ಸಂಗ್ರಹ ದಾಖಲೆ ಪತ್ತೆ: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಇಡಿ

‘ಹೂಡಿಕೆ‌ ಮಾಡಿಲ್ಲ ಅಂತಾ ಇಡಿ ಅಧಿಕಾರಿಗಳಿಗೆ ಹೇಳಿದ್ದೇನೆ. ಇನ್ನೂ ಬಹಳ ಪ್ರಕ್ರಿಯೆ ಇದೆ, 3-6 ತಿಂಗಳ ಅವಕಾಶ ಇದೆ. ಅನುಮಾನಾಸ್ಪದ ಅಂತಾ ಹೇಳಿದ್ದಾರೆ, ಇದೇ ಫೈನಲ್ ಅಲ್ಲ. ಇನ್ನೂ ಪ್ರಗತಿ ಹಂತದಲ್ಲಿದೆ ಅಂತಾ ಪ್ರೆಸ್​ನೋಟ್​ನಲ್ಲೇ ಇದೆ. ಮೇಲ್ನೋಟಕ್ಕೆ ಹೂಡಿಕೆ ಇದೆ ಅಂತಿದ್ದಾರೆ’ ಎಂದರು.

ನಮ್ಮ ಸೇಫ್ಟಿಯಲ್ಲಿ ನಾವು ಇರಬೇಕು ಎಂದ ಸತೀಶ್​ ಜಾರಕಿಹೊಳಿ

‘ಇನ್ನೂ 4-5 ಜನರ ಮೇಲೆ ಇಡಿ ದಾಳಿ ಆಗಬಹುದು ಅಂತ ಸಿಎಂ ಹೇಳಿದ್ದಾರೆ. ಇಡಿ ಹೆಚ್ಚಿನ ವಿಚಾರಣೆ ನಡೆಸಲಿ, ಆರೋಪ ಸಾಬೀತಾಗಲಿ. ಈ ಆರೋಪದ ಬಗ್ಗೆ ಯಾವುದೇ ನಿರ್ಧಾರಕ್ಕೆ ಬರಲ್ಲ. ಇಡಿ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹೋಗುತ್ತೇವೆ. ನಮ್ಮ ಸೇಫ್ಟಿಯಲ್ಲಿ ನಾವು ಇರಬೇಕು. ರಾಜಕಾರಣದಲ್ಲಿ ಇದೆಲ್ಲಾ ಸಾಮಾನ್ಯ, ಅವರಿಗೆ ಕೇಳೋ ಅಧಿಕಾರ ಇದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:41 pm, Sat, 12 September 26

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ