AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಪಘಾತ ಮಾಹಿತಿ ನೀಡದ ರೂಪಾ ಮೌದ್ಗಿಲ್; ಪರಿಣಾಮ‌ ನಿಗಮವೇ ಕಾರಿನ ರಿಪೇರಿಗೆ ಹಣ ಖರ್ಚು ಮಾಡಬೇಕಿದೆ- ರೂಪಾ ವಿರುದ್ಧ ಮುಗಿಬಿದ್ದ ಬೇಳೂರು ರಾಘವೇಂದ್ರ ಶೆಟ್ಟಿ

Belur Raghavendra Shetty: ರೂಪಾ ಮೌದ್ಗಿಲ್ ಎರಡು ದಿನಕ್ಕೊಮ್ಮೆ ಆಫೀಸ್ ಗೆ ಬರುತ್ತಾರೆ. ಮನೆಗೆ ಫೈಲ್ ತರಿಸಿಕೊಂಡು ಮನೆಯಲ್ಲೇ‌ ಕೆಲಸ‌ ಮಾಡ್ತಾರೆ. ರೂಪಾ ಮೌದ್ಗಿಲ್ ನಿಗಮಕ್ಕೆ ಹೊರೆ ತಂದಿದ್ದಾರೆ. ಒಂದು‌ ಮನೆಯ ಬಳಕೆಗೆ, ಮತ್ತೊಂದು ಅವರ ವೈಯಕ್ತಿಕ ಬಳಕೆಗೆ ವಾಹನಗಳ ಬಳಕೆ ಮಾಡುತ್ತಿದ್ದಾರೆ. ನಿಗಮದ ಅಧ್ಯಕ್ಷರಾದ ನನಗೇ‌ ಕಚೇರಿಯ ದಾಖಲೆಗಳನ್ನು ಕೊಡುವುದಿಲ್ಲ.

ಕಾರು ಅಪಘಾತ ಮಾಹಿತಿ ನೀಡದ  ರೂಪಾ ಮೌದ್ಗಿಲ್; ಪರಿಣಾಮ‌ ನಿಗಮವೇ ಕಾರಿನ ರಿಪೇರಿಗೆ ಹಣ ಖರ್ಚು ಮಾಡಬೇಕಿದೆ- ರೂಪಾ ವಿರುದ್ಧ ಮುಗಿಬಿದ್ದ ಬೇಳೂರು ರಾಘವೇಂದ್ರ ಶೆಟ್ಟಿ
ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ
TV9 Web
| Edited By: |

Updated on:Jun 02, 2022 | 7:30 PM

Share

ಬೆಂಗಳೂರು: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಎಂಡಿ ಮತ್ತು ನಿಗಮದ ಅಧ್ಯಕ್ಷ ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು, ಎಂಡಿ ರೂಪಾ ಮೌದ್ಗಿಲ್ (IPS D Roopa Moudgil) ಮತ್ತು ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ (Belur Raghavendra Shetty) ನಡುವಣ ಜಟಾಪಟಿ ಮುಂದುವರಿದಿದೆ. ನಿಗಮದ ಆಯಕಟ್ಟಿನ ಜಾಗದಲ್ಲಿ ಕುಳಿತು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿರುವ ಇಬ್ಬರೂ ತೂ ತೂ ಮೈ ಮೈ ಅನ್ನುತ್ತಿದ್ದಾರೆ (Misappropriation). IPS ರೂಪಾ ಮೌದ್ಗಿಲ್ ಮತ್ತು ಜನಪ್ರತಿನಿಧಿ ಬೇಳೂರು ರಾಘವೇಂದ್ರ ಶೆಟ್ಟಿ ಇಬ್ಬರೂ ಪ್ರತಿಷ್ಠೆಯ ವಿಷಯವಾಗಿಸಿಕೊಂಡಿದ್ದಾರೆ (Karnataka Handicrafts Development Corporation – Cauvery Handicrafts -KSHDCL).

ರೂಪಾ ಮೌದ್ಗಿಲ್ ಆರೋಪಕ್ಕೆ ಬೇಳೂರು ರಾಘವೇಂದ್ರ ಶೆಟ್ಟಿ ಪ್ರತ್ಯುತ್ತರ ನೀಡಿದ್ದು, ಅದರ ಪೂರ್ಣ ಪಾಠ ಇಲ್ಲಿದೆ:

ಐಪಿಎಸ್​ ಅಧಿಕಾರಿ ಡಿ.ರೂಪಾ 2 ದಿನಕ್ಕೊಮ್ಮೆ ಕಚೇರಿ​ಗೆ ಬರ್ತಾರೆ. ಫೈಲ್​​ಗಳನ್ನು ತರಿಸಿಕೊಂಡು ಮನೆಯಲ್ಲೇ‌ ಕೆಲಸ‌ ಮಾಡ್ತಾರೆ ಎಂದು ವಿಧಾನಸೌಧದಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ ಆರೋಪ ಮಾಡಿದ್ದಾರೆ. ನಿಗಮದ ಅಧ್ಯಕ್ಷರಾದ ನನಗೆ ಕಚೇರಿ ದಾಖಲೆಗಳನ್ನು ಕೊಡುವುದಿಲ್ಲ. ನನ್ನ ಕಚೇರಿಯಲ್ಲಿ ಸಿಸಿ ಕ್ಯಾಮರಾ ಕನೆಕ್ಷನ್ ಕಡಿತಗೊಳಿಸಿದ್ದಾರೆ. 5 ಕೋಟಿ ರೂಪಾಯಿ ಅವ್ಯವಹಾರ‌ ನನ್ನ ಅವಧಿಯಲ್ಲಿ ಆಗಿಲ್ಲ. ಇದರಿಂದ ರೂಪಾ ಅವರ ಮುಖವಾಡ ಈಗ ಕಳಚಿ ಬಿದ್ದಿದೆ ಎಂದು ಬೇಳೂರು ರಾಘವೇಂದ್ರ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

Also Read:

‘ಎತ್ತಿಕೊಂಡು ಹೋದ’ ಕಲಾಕೃತಿಗಳ ವೆಚ್ಚ ಭರಿಸುವಂತೆ ಬೇಳೂರು ರಾಘವೇಂದ್ರ ಶೆಟ್ಟಿಗೆ ನೋಟಿಸ್ ಕಳಿಸಿದ ರೂಪಾ ಮೌದ್ಗಿಲ್

ರೂಪಾ ಮೌದ್ಗಿಲ್ ಎರಡು ದಿನಕ್ಕೊಮ್ಮೆ ಆಫೀಸ್ ಗೆ ಬರುತ್ತಾರೆ. ಮನೆಗೆ ಫೈಲ್ ತರಿಸಿಕೊಂಡು ಮನೆಯಲ್ಲೇ‌ ಕೆಲಸ‌ ಮಾಡ್ತಾರೆ. ರೂಪಾ ಮೌದ್ಗಿಲ್ ನಿಗಮಕ್ಕೆ ಹೊರೆ ತಂದಿದ್ದಾರೆ. ಒಂದು‌ ಮನೆಯ ಬಳಕೆಗೆ, ಮತ್ತೊಂದು ಅವರ ವೈಯಕ್ತಿಕ ಬಳಕೆಗೆ ವಾಹನಗಳ ಬಳಕೆ ಮಾಡುತ್ತಿದ್ದಾರೆ. ನಿಗಮದ ಅಧ್ಯಕ್ಷರಾದ ನನಗೇ‌ ಕಚೇರಿಯ ದಾಖಲೆಗಳನ್ನು ಕೊಡುವುದಿಲ್ಲ. ಈ ಬಗ್ಗೆ ‌ನಾನು ಮಾಧ್ಯಮಗಳ ಮುಂದೆ ಹೋಗ್ತೇನೆ ಅನ್ನೋ‌ ಭಯ‌ ಅವರಿಗಿದೆ. ಹೀಗಾಗಿ ನನ್ನ ವಿರುದ್ಧ ಅವರೇ ಮೊದಲು ಮಾಧ್ಯಮದ ಮುಂದೆ ಹೋಗಿದ್ದಾರೆ. ಐಪಿಎಸ್ ಅಧಿಕಾರಿಯಾಗಿ ಸಣ್ಣ ಮಟ್ಟಕ್ಕೆ ಇಳಿದಿದ್ದಾರೆ. ನಾನು ರೂಪಾ‌ ಅವರಿಗೆ‌ ಚಾಲೆಂಜ್ ಮಾಡುತ್ತೇನೆ… ಆರೋಪ ಕೇಳಿ ಬಂದಿರುವ ಕಿಶೋರ್ ನನ್ನ‌ ಸಂಪರ್ಕದಲ್ಲಿ ಇಲ್ಲ. ರೂಪಾ‌ ಮೌದ್ಗಿಲ್‌ ವಿರುದ್ಧ ನಾನು 75 ನೋಟಿಸ್ ನೀಡಿದ್ದೇನೆ. ದುರುದ್ದೇಶದಿಂದ ನಿಗಮಕ್ಕೆ 10.7 ಲಕ್ಷ ರೂಪಾಯಿ ಹೊರೆ ಮಾಡಿದ್ದಾರೆ. ಕಾರು ಅಪಘಾತವಾದ‌ ನಂತರ‌ ಇನ್ ಶ್ಯೂರೆನ್ಸ್ ಕಂಪನಿಗೆ ಮಾಹಿತಿ ನೀಡಿಲ್ಲ. ಪರಿಣಾಮ‌ ನಿಗಮವೇ ಕಾರಿನ ರಿಪೇರಿಗೆ ಹಣ ಖರ್ಚು ಮಾಡಬೇಕಿದೆ.

ಇನ್ನು, ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ ಡಿ.ರೂಪಾ ಆರೋಪ ವಿಚಾರ ಪ್ರಸ್ತಾಪಿಸಿದ ಬೇಳೂರು ರಾಘವೇಂದ್ರ ಶೆಟ್ಟಿ, ಶ್ರೀಕಾಂತ್ ಎಂಬ ಪಿಎ ನನ್ನ ಬಳಿ ಇದ್ದಿದ್ದು ನಿಜ. ಆತನ ಮೇಲೆ ಆರೋಪ ಬಂದ ಹಿನ್ನೆಲೆಯಲ್ಲಿ ವಜಾ ಮಾಡಿದ್ದೇನೆ. ತನಿಖೆಗೆ ಒಳಪಡಿಸಿದಾಗ ಆತ ಭಾಗಿಯಾಗಿಲ್ಲ ಅಂತಾ ಗೊತ್ತಾಗಿದೆ. ಆದರೆ ಈಗ ರೂಪಾ ನನ್ನ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಈ ರೀತಿಯ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲಎಂದು ಸ್ಪಷ್ಟನೆ ನೀಡಿದ್ದಾರೆ.

ನನ್ನ ವಿರುದ್ಧ 5 ಕೋಟಿ ರೂ. ಅವ್ಯವಹಾರ ಆರೋಪ ಮಾಡಿದ್ದಾರೆ. ಡಿ.ರೂಪಾ ಬಳಿ ಒಂದೇ ಒಂದು ದಾಖಲೆಯಿದ್ರೆ ಬಿಡುಗಡೆ ಮಾಡಲಿ. ಮಹಿಳಾ ಸಿಬ್ಬಂದಿ ನೇಮಿಸಲು ಕೇಳಿದ್ದೇನೆ ಅಂತ ಆರೋಪಿಸಿದ್ದಾರೆ. ಕಚೇರಿಗೆ ಟೈಪಿಸ್ಟ್ ನೇಮಕ‌ ಮಾಡುವಂತೆ ಕೇಳಿದ್ದು ತಪ್ಪಾ? ಇದರ‌ ಬಗ್ಗೆಯೂ ಇಷ್ಟು ಕೀಳಾಗಿ ಮಾತಾಡಿರೋದು ಎಷ್ಟು ಸರಿ? ಬೆಲೆಬಾಳುವ ವಸ್ತುಗಳನ್ನು ನಾನು ತೆಗೆದುಕೊಂಡು ಹೋಗಿಲ್ಲ. ಬದಲಿಗೆ ನಾನೇ ನಿಗಮಕ್ಕೆ ಒಂದಷ್ಟು ವಸ್ತುಗಳನ್ನು ಕೊಟ್ಟಿದ್ದೇನೆ. ಅದಕ್ಕೆ ಬೇಕಾದ ಸ್ಲಿಪ್ ಗಳೂ ನನ್ನ ಬಳಿ ಇವೆ ಎಂದು ಬೇಳೂರು ರಾಘವೇಂದ್ರ ಶೆಟ್ಟಿ ಹೇಳಿದ್ದಾರೆ.

Published On - 4:12 pm, Thu, 2 June 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ