AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಅಧಿಕಾರಿ ದೀಪಾ ಚೋಳನ್ ತಂದೆ, ತಾಯಿ ಕೊವಿಡ್​ಗೆ ಬಲಿ

ದೀಪಾ ಚೋಳನ್ ಮತ್ತು ರಾಜೇಂದ್ರ ಚೋಳನ್ ಕೊರೊನಾ ವಿರುದ್ಧ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಮಹಾಮಾರಿ ಕೊರೊನಾದಿಂದ ದೀಪಾ ಚೋಳನ್ ತನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ. ದೀಪಾ ಮೇ 26 ರಂದು ತಂದೆಯನ್ನು ಕಳೆದುಕೊಂಡಿದ್ದರೆ, ಎರಡು ವಾರದ ಮುಂಚೆ ತಾಯಿ ನಿಧನರಾಗಿದ್ದರು.

ಐಎಎಸ್ ಅಧಿಕಾರಿ ದೀಪಾ ಚೋಳನ್ ತಂದೆ, ತಾಯಿ ಕೊವಿಡ್​ಗೆ ಬಲಿ
ಐಎಎಸ್ ಅಧಿಕಾರಿ ದೀಪಾ ಚೋಳನ್ ಕುಟುಂಬ
sandhya thejappa
|

Updated on: Jun 01, 2021 | 10:40 AM

Share

ಬೆಂಗಳೂರು: ಐಎಎಸ್ ಅಧಿಕಾರಿಯಾದ ದೀಪಾ ಚೋಳನ್ರವರ ತಂದೆ ಮತ್ತು ತಾಯಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ದೀಪಾ ಚೋಳನ್ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ರಾಜೇಂದ್ರ ಚೋಳನ್ ಪತ್ನಿ. ಸದ್ಯ ಚೋಳನ್ ದಂಪತಿ ಕೊವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದಾರೆ. 10 ದಿನದ ಅಂತರದಲ್ಲಿ ದೀಪಾ ಚೋಳನ್ ತಂದೆ ಹಾಗೂ ತಾಯಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್ ನಿರ್ವಹಣೆ ಹೊಣೆ ಹೊತ್ತಿದ್ದ ರಾಜೇಂದ್ರ ಚೋಳನ್ ಅತ್ತೆ, ಮಾವನ ಅಂತ್ಯಸಂಸ್ಕಾರಕ್ಕೂ ಹೋಗಲು ಸಾಧ್ಯವಾಗಲಿಲ್ಲ.

ದೀಪಾ ಚೋಳನ್ ಮತ್ತು ರಾಜೇಂದ್ರ ಚೋಳನ್ ಕೊರೊನಾ ವಿರುದ್ಧ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಮಹಾಮಾರಿ ಕೊರೊನಾದಿಂದ ದೀಪಾ ಚೋಳನ್ ತನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ. ದೀಪಾ ಮೇ 26 ರಂದು ತಂದೆಯನ್ನು ಕಳೆದುಕೊಂಡಿದ್ದರೆ, ಎರಡು ವಾರದ ಮುಂಚೆ ತಾಯಿ ನಿಧನರಾಗಿದ್ದರು. ರಾಜೇಂದ್ರ ಚೋಳನ್ ತಂದೆ ತಾಯಿಗೂ ಇದೀಗ ಕೊವಿಡ್ ಧೃಡಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ತವ್ಯದಲ್ಲಿರುವ ಕಾರಣ ರಾಜೇಂದ್ರ ಚೋಳನ್​ಗೆ ಊರಿಗೆ ಹೋಗಲು ಸಾಧ್ಯವಾಗುತ್ತಿಲ್ಲ.

ಕೊವಿಡ್​ಗೆ ತಾಯಿ, ಮಗ ಬಲಿ ತುಮಕೂರು: ತಾಲೂಕಿನ ಚಿಕ್ಕಕೊರಟಗೆರೆಯಲ್ಲಿ 13 ದಿನಗಳ ಅಂತರದಲ್ಲಿ ಕೊರೊನಾ ಸೋಂಕಿನಿಂದ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ. ಮೇ 18 ರಂದು 65 ವರ್ಷದ ಚಿಕ್ಕಮ್ಮ ಸಾವನ್ನಪ್ಪಿದ್ದಾರೆ. ಇಂದು (ಜೂನ್ 1) 43 ವರ್ಷದ ಮಗ ಕುಮಾರಸ್ವಾಮಿ ಕೂಡಾ ಕೊವಿಡ್​ಗೆ ಬಲಿಯಾಗಿದ್ದಾರೆ. ಕುಮಾರಸ್ವಾಮಿ ಪ್ರಸಿದ್ದ ಕೆಂಪಮ್ಮ ದೇವಿ ಅರ್ಚಕರಾಗಿದ್ದರು. ಸೋಂಕು ತಗುಲಿದ ಕುಮಾರಸ್ವಾಮಿ ಪತ್ನಿ, ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಇದನ್ನೂ ಓದಿ

Coronavirus Cases in India: ದೇಶದಲ್ಲಿ 1.27 ಲಕ್ಷ ಹೊಸ ಕೊವಿಡ್ ಪ್ರಕರಣ, 2795 ಮಂದಿ ಸಾವು

ನಿವೃತ್ತ ಚಾಲಕನನ್ನು ಕೂರಿಸಿಕೊಂಡು ಕಾರು ಚಾಲನೆ; ಹೃದಯಸ್ಪರ್ಶಿ ಕೊಡುಗೆ ನೀಡಿದ ಕೊಪ್ಪಳ ತಹಶೀಲ್ದಾರ್

(IAS officer Deepa Cholan father and mother died due to corona)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ