AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ ನೇಮಕ

Munish Moudgil: ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್​ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಪೌರಕಾರ್ಮಿಕರ ಆದಾಯವನ್ನು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 

ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ ನೇಮಕ
ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್
ಕಿರಣ್​ ಹನಿಯಡ್ಕ
| Edited By: |

Updated on:Oct 11, 2023 | 6:34 PM

Share

ಬೆಂಗಳೂರು, ಅಕ್ಟೋಬರ್​​​ 11: ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ (Munish Moudgil)​ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್​ ಅವರನ್ನು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಜೊತೆಗೆ ಪೌರಕಾರ್ಮಿಕರ ಆದಾಯವನ್ನು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.

ಮುನೀಶ್ ಮೌದ್ಗಿಲ್​ ಅವರು 1998 ರ ಬ್ಯಾಚ್ ಐಎಎಸ್ ಅಧಿಕಾರಿ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿದ್ದರು. ಮುನೀಶ್​ ಮೌದ್ಗಿಲ್ ಅವರು ಈ ಹಿಂದೆ ಸರ್ವೆ, ಸೆಟ್ಲ್‌ಮೆಂಟ್ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವನ್ನು ಹೊಂದಿದ್ದಾರೆ. ಜೂನ್ 2008 ರಿಂದ ಜೂನ್ 2009 ರವರೆಗೆ ರಾಮನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹುದ್ದೆ ಹೊಂದಿದ್ದರು.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ

ಮುನೀಶ್ ಮೌದ್ಗಿಲ್​ ಅವರ ಕಾರ್ಯ ಮತ್ತು ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇ-ಆಡಳಿತಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ; ಸಂಸದೆ ಸುಮಲತಾ ಅಂಬರೀಶ್​ ಹೇಳಿದ್ದಿಷ್ಟು

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿಯ ವಿಶೇಷ ಆಯುಕ್ತರನ್ನಾಗಿ ನೇಮಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆ ಮೂಲಕ ಪೌರಕಾರ್ಮಿಕರ ಆದಾಯವನ್ನು ಸುಧಾರಿಸುವತ್ತ ಗಮನಹರಿಸಿದ್ದಾರೆ ಎನ್ನಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮನಗರ ವಾರ್ಡ್‌ನಲ್ಲಿ ಮುನೀಶ್ ಮೌದ್ಗಿಲ್ ಅವರು ಯುಪಿಒಆರ್ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದರು.

6 ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ

  • ಮುನೀಶ್ ಮೌದ್ಗಿಲ್-ಬಿಬಿಎಂಪಿ ವಿಶೇಷ ಆಯುಕ್ತ(ಕಂದಾಯ)
  • ವಿನೋತ್ ಪ್ರಿಯಾ-ಬಿಬಿಎಂಪಿ ದಕ್ಷಿಣ ವಲಯ ಆಯುಕ್ತೆ
  • ಕರೀಗೌಡ-ಬಿಬಿಎಂಪಿ ಯಲಹಂಕ ವಲಯ ಆಯುಕ್ತ
  • ಆರ್​.ಸ್ನೇಹಲ್-ಬಿಬಿಎಂಪಿ ಪೂರ್ವ ವಲಯ ಆಯುಕ್ತೆ
  • ಪ್ರೀತಿ ಗೆಹ್ಲೋಟ್-ಬಿಬಿಎಂಪಿ ದಾಸರಹಳ್ಳಿ ವಲಯ ಆಯುಕ್ತೆ
  • ಇಬ್ರಾಹಿಂ ಮೈಗೂರ್-ಬಿಬಿಎಂಪಿ ಮಹದೇವಪುರ ವಲಯ ಆಯುಕ್ತ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Wed, 11 October 23

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು