AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ ನೇಮಕ

Munish Moudgil: ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್​ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಪೌರಕಾರ್ಮಿಕರ ಆದಾಯವನ್ನು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 

ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ ನೇಮಕ
ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್
ಕಿರಣ್​ ಹನಿಯಡ್ಕ
| Edited By: |

Updated on:Oct 11, 2023 | 6:34 PM

Share

ಬೆಂಗಳೂರು, ಅಕ್ಟೋಬರ್​​​ 11: ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ (Munish Moudgil)​ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್​ ಅವರನ್ನು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಜೊತೆಗೆ ಪೌರಕಾರ್ಮಿಕರ ಆದಾಯವನ್ನು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.

ಮುನೀಶ್ ಮೌದ್ಗಿಲ್​ ಅವರು 1998 ರ ಬ್ಯಾಚ್ ಐಎಎಸ್ ಅಧಿಕಾರಿ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿದ್ದರು. ಮುನೀಶ್​ ಮೌದ್ಗಿಲ್ ಅವರು ಈ ಹಿಂದೆ ಸರ್ವೆ, ಸೆಟ್ಲ್‌ಮೆಂಟ್ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವನ್ನು ಹೊಂದಿದ್ದಾರೆ. ಜೂನ್ 2008 ರಿಂದ ಜೂನ್ 2009 ರವರೆಗೆ ರಾಮನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹುದ್ದೆ ಹೊಂದಿದ್ದರು.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ

ಮುನೀಶ್ ಮೌದ್ಗಿಲ್​ ಅವರ ಕಾರ್ಯ ಮತ್ತು ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇ-ಆಡಳಿತಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ; ಸಂಸದೆ ಸುಮಲತಾ ಅಂಬರೀಶ್​ ಹೇಳಿದ್ದಿಷ್ಟು

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿಯ ವಿಶೇಷ ಆಯುಕ್ತರನ್ನಾಗಿ ನೇಮಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆ ಮೂಲಕ ಪೌರಕಾರ್ಮಿಕರ ಆದಾಯವನ್ನು ಸುಧಾರಿಸುವತ್ತ ಗಮನಹರಿಸಿದ್ದಾರೆ ಎನ್ನಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮನಗರ ವಾರ್ಡ್‌ನಲ್ಲಿ ಮುನೀಶ್ ಮೌದ್ಗಿಲ್ ಅವರು ಯುಪಿಒಆರ್ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದರು.

6 ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ

  • ಮುನೀಶ್ ಮೌದ್ಗಿಲ್-ಬಿಬಿಎಂಪಿ ವಿಶೇಷ ಆಯುಕ್ತ(ಕಂದಾಯ)
  • ವಿನೋತ್ ಪ್ರಿಯಾ-ಬಿಬಿಎಂಪಿ ದಕ್ಷಿಣ ವಲಯ ಆಯುಕ್ತೆ
  • ಕರೀಗೌಡ-ಬಿಬಿಎಂಪಿ ಯಲಹಂಕ ವಲಯ ಆಯುಕ್ತ
  • ಆರ್​.ಸ್ನೇಹಲ್-ಬಿಬಿಎಂಪಿ ಪೂರ್ವ ವಲಯ ಆಯುಕ್ತೆ
  • ಪ್ರೀತಿ ಗೆಹ್ಲೋಟ್-ಬಿಬಿಎಂಪಿ ದಾಸರಹಳ್ಳಿ ವಲಯ ಆಯುಕ್ತೆ
  • ಇಬ್ರಾಹಿಂ ಮೈಗೂರ್-ಬಿಬಿಎಂಪಿ ಮಹದೇವಪುರ ವಲಯ ಆಯುಕ್ತ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Wed, 11 October 23

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್