AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ: BBMP ವಿಶೇಷ ಆಯುಕ್ತರಿಗೆ ಅಸಂಬದ್ಧ ಸಂದೇಶ, ದೂರು ದಾಖಲು

ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ರಾಕೇಶ್ ಸಿಂಗ್ ತಮ್ಮ ಹೆಸರು, ಫೋಟೋ ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ.

ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ: BBMP ವಿಶೇಷ ಆಯುಕ್ತರಿಗೆ ಅಸಂಬದ್ಧ ಸಂದೇಶ, ದೂರು ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 18, 2022 | 8:46 AM

Share

ಬೆಂಗಳೂರು: ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಸಂಬಂಧ ರಾಕೇಶ್ ಸಿಂಗ್​​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ದೂರು ದಾಖಲಿಸಿದ್ದಾರೆ.

ರಾಕೇಶ್ ಸಿಂಗ್ ಹೆಸರಿನಲ್ಲಿ BBMP ವಿಶೇಷ ಆಯುಕ್ತ ಹರೀಶ್​ಗೆ ಅಸಂಬದ್ಧ ಸಂದೇಶ ರವಾನೆಯಾಗಿದೆ. ಈ ಕುರಿತು ರಾಕೇಶ್ ಸಿಂಗ್​ಗೆ ಹರೀಶ್ ಮಾಹಿತಿ ನೀಡಿದ್ದರು. ಹೀಗಾಗಿ ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ರಾಕೇಶ್ ಸಿಂಗ್ ತಮ್ಮ ಹೆಸರು, ಫೋಟೋ ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ.

ನಕಲಿ ವೆಬ್‌ಸೈಟ್ ತೆರೆದು ಸುಲಿಗೆ

ಇನ್ನು ಮತ್ತೊಂದು ಕಡೆ ಪ್ರತಿಷ್ಟಿತ ಪ್ಯಾಕರ್ಸ್ & ಮೂವರ್ಸ್ ಕಂಪನಿಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮದೇವ್ ಯಾದವ್, ಮುಕೇಶ್ ಕುಮಾರ್ ಯಾದವ್ ಹಾಗೂ ವಿಜಯ್ ಕುಮಾರ್ ಯಾದವ್ ಬಂಧಿತರು. ವ್ಯಕ್ತಿಯೊಬ್ಬರು ಬೆಂಗಳೂರಿನಿಂದ ಸಾಗರಕ್ಕೆ ದ್ವಿಚಕ್ರ ವಾಹನ ಸಾಗಿಸಲು ಪ್ಯಾಕರ್ಸ್ & ಮೂವರ್ಸ್ ಮೊರೆ ಹೋಗಿದ್ರು. ನಕಲಿ ವೆಬ್‌ಸೈಟ್ ನಂಬಿ ಆರೋಪಿಗಳನ್ನ ಸಂಪರ್ಕಿಸಿದ್ದರು. 1 ಸಾವಿರ ಮುಂಗಡ ಹಣ ಪಡೆದು ದ್ವಿಚಕ್ರ ವಾಹನ ಪಿಕ್ ಮಾಡಿದ್ದ ಆರೋಪಿಗಳು, ಮಾರನೇ ದಿನ ಡಿಲೆವರಿ ನೀಡಬೇಕೆಂದರೆ 8 ಸಾವಿರ ಕೊಡುವಂತೆ ಬೇಡಿಕೆಯಿಟ್ಟಿದ್ದರು. ಬಳಿಕ ಬೈಕ್ ಮಾಲೀಕ ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಸಿಇಎನ್ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬಂಧಿತರಿಂದ 1 ದ್ವಿಚಕ್ರ ವಾಹನ, 4 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:39 am, Sun, 18 September 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು