AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ: BBMP ವಿಶೇಷ ಆಯುಕ್ತರಿಗೆ ಅಸಂಬದ್ಧ ಸಂದೇಶ, ದೂರು ದಾಖಲು

ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ರಾಕೇಶ್ ಸಿಂಗ್ ತಮ್ಮ ಹೆಸರು, ಫೋಟೋ ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ.

ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ: BBMP ವಿಶೇಷ ಆಯುಕ್ತರಿಗೆ ಅಸಂಬದ್ಧ ಸಂದೇಶ, ದೂರು ದಾಖಲು
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Sep 18, 2022 | 8:46 AM

Share

ಬೆಂಗಳೂರು: ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಸಂಬಂಧ ರಾಕೇಶ್ ಸಿಂಗ್​​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ದೂರು ದಾಖಲಿಸಿದ್ದಾರೆ.

ರಾಕೇಶ್ ಸಿಂಗ್ ಹೆಸರಿನಲ್ಲಿ BBMP ವಿಶೇಷ ಆಯುಕ್ತ ಹರೀಶ್​ಗೆ ಅಸಂಬದ್ಧ ಸಂದೇಶ ರವಾನೆಯಾಗಿದೆ. ಈ ಕುರಿತು ರಾಕೇಶ್ ಸಿಂಗ್​ಗೆ ಹರೀಶ್ ಮಾಹಿತಿ ನೀಡಿದ್ದರು. ಹೀಗಾಗಿ ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ರಾಕೇಶ್ ಸಿಂಗ್ ತಮ್ಮ ಹೆಸರು, ಫೋಟೋ ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ.

ನಕಲಿ ವೆಬ್‌ಸೈಟ್ ತೆರೆದು ಸುಲಿಗೆ

ಇನ್ನು ಮತ್ತೊಂದು ಕಡೆ ಪ್ರತಿಷ್ಟಿತ ಪ್ಯಾಕರ್ಸ್ & ಮೂವರ್ಸ್ ಕಂಪನಿಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮದೇವ್ ಯಾದವ್, ಮುಕೇಶ್ ಕುಮಾರ್ ಯಾದವ್ ಹಾಗೂ ವಿಜಯ್ ಕುಮಾರ್ ಯಾದವ್ ಬಂಧಿತರು. ವ್ಯಕ್ತಿಯೊಬ್ಬರು ಬೆಂಗಳೂರಿನಿಂದ ಸಾಗರಕ್ಕೆ ದ್ವಿಚಕ್ರ ವಾಹನ ಸಾಗಿಸಲು ಪ್ಯಾಕರ್ಸ್ & ಮೂವರ್ಸ್ ಮೊರೆ ಹೋಗಿದ್ರು. ನಕಲಿ ವೆಬ್‌ಸೈಟ್ ನಂಬಿ ಆರೋಪಿಗಳನ್ನ ಸಂಪರ್ಕಿಸಿದ್ದರು. 1 ಸಾವಿರ ಮುಂಗಡ ಹಣ ಪಡೆದು ದ್ವಿಚಕ್ರ ವಾಹನ ಪಿಕ್ ಮಾಡಿದ್ದ ಆರೋಪಿಗಳು, ಮಾರನೇ ದಿನ ಡಿಲೆವರಿ ನೀಡಬೇಕೆಂದರೆ 8 ಸಾವಿರ ಕೊಡುವಂತೆ ಬೇಡಿಕೆಯಿಟ್ಟಿದ್ದರು. ಬಳಿಕ ಬೈಕ್ ಮಾಲೀಕ ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಸಿಇಎನ್ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬಂಧಿತರಿಂದ 1 ದ್ವಿಚಕ್ರ ವಾಹನ, 4 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:39 am, Sun, 18 September 22

ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್