AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ: BBMP ವಿಶೇಷ ಆಯುಕ್ತರಿಗೆ ಅಸಂಬದ್ಧ ಸಂದೇಶ, ದೂರು ದಾಖಲು

ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ರಾಕೇಶ್ ಸಿಂಗ್ ತಮ್ಮ ಹೆಸರು, ಫೋಟೋ ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ.

ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ: BBMP ವಿಶೇಷ ಆಯುಕ್ತರಿಗೆ ಅಸಂಬದ್ಧ ಸಂದೇಶ, ದೂರು ದಾಖಲು
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Sep 18, 2022 | 8:46 AM

Share

ಬೆಂಗಳೂರು: ಐಎಎಸ್‌ ಅಧಿಕಾರಿ ರಾಕೇಶ್ ಸಿಂಗ್‌ ಹೆಸರು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಸಂಬಂಧ ರಾಕೇಶ್ ಸಿಂಗ್​​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ದೂರು ದಾಖಲಿಸಿದ್ದಾರೆ.

ರಾಕೇಶ್ ಸಿಂಗ್ ಹೆಸರಿನಲ್ಲಿ BBMP ವಿಶೇಷ ಆಯುಕ್ತ ಹರೀಶ್​ಗೆ ಅಸಂಬದ್ಧ ಸಂದೇಶ ರವಾನೆಯಾಗಿದೆ. ಈ ಕುರಿತು ರಾಕೇಶ್ ಸಿಂಗ್​ಗೆ ಹರೀಶ್ ಮಾಹಿತಿ ನೀಡಿದ್ದರು. ಹೀಗಾಗಿ ಕೇಂದ್ರ ವಿಭಾಗದ ಸಿಇಎನ್​​ ಠಾಣೆಯಲ್ಲಿ ರಾಕೇಶ್ ಸಿಂಗ್ ತಮ್ಮ ಹೆಸರು, ಫೋಟೋ ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ.

ನಕಲಿ ವೆಬ್‌ಸೈಟ್ ತೆರೆದು ಸುಲಿಗೆ

ಇನ್ನು ಮತ್ತೊಂದು ಕಡೆ ಪ್ರತಿಷ್ಟಿತ ಪ್ಯಾಕರ್ಸ್ & ಮೂವರ್ಸ್ ಕಂಪನಿಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮದೇವ್ ಯಾದವ್, ಮುಕೇಶ್ ಕುಮಾರ್ ಯಾದವ್ ಹಾಗೂ ವಿಜಯ್ ಕುಮಾರ್ ಯಾದವ್ ಬಂಧಿತರು. ವ್ಯಕ್ತಿಯೊಬ್ಬರು ಬೆಂಗಳೂರಿನಿಂದ ಸಾಗರಕ್ಕೆ ದ್ವಿಚಕ್ರ ವಾಹನ ಸಾಗಿಸಲು ಪ್ಯಾಕರ್ಸ್ & ಮೂವರ್ಸ್ ಮೊರೆ ಹೋಗಿದ್ರು. ನಕಲಿ ವೆಬ್‌ಸೈಟ್ ನಂಬಿ ಆರೋಪಿಗಳನ್ನ ಸಂಪರ್ಕಿಸಿದ್ದರು. 1 ಸಾವಿರ ಮುಂಗಡ ಹಣ ಪಡೆದು ದ್ವಿಚಕ್ರ ವಾಹನ ಪಿಕ್ ಮಾಡಿದ್ದ ಆರೋಪಿಗಳು, ಮಾರನೇ ದಿನ ಡಿಲೆವರಿ ನೀಡಬೇಕೆಂದರೆ 8 ಸಾವಿರ ಕೊಡುವಂತೆ ಬೇಡಿಕೆಯಿಟ್ಟಿದ್ದರು. ಬಳಿಕ ಬೈಕ್ ಮಾಲೀಕ ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಸಿಇಎನ್ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬಂಧಿತರಿಂದ 1 ದ್ವಿಚಕ್ರ ವಾಹನ, 4 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:39 am, Sun, 18 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!