AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.6 ರಿಂದ ಐಕಾನಿಕ್​ ಬೆಂಗಳೂರು ರೆಸ್ಟೋರೆಂಟ್​ ನ್ಯೂ ಕೃಷ್ಣ ಭವನ ಕ್ಲೋಸ್​; ಇಲ್ಲಿದೆ ವಿವರ

ಸಸ್ಯಹಾರಿ ಊಟಕ್ಕೆ ಹೆಸರುವಾಸಿಯಾಗಿರುವ ಬೆಂಗಳೂರಿನ ಹಳೆಯ ಹೋಟೆಲ್​ಗಳಲ್ಲಿ ಒಂದಾದ ನ್ಯೂ ಕೃಷ್ಣ ಭವನವು ಡಿಸೆಂಬರ್​ 6 ರಿಂದ ಬಂದ್​ ಆಗಲಿದೆ. ಗ್ರಾಹಕರ ನೆಚ್ಚಿನ ಹೋಟೆಲ್​ ಆಗಿದ್ದ NKB, ಕ್ಲೋಸ್​ ಆಗಲಿದೆ.

ಡಿ.6 ರಿಂದ ಐಕಾನಿಕ್​ ಬೆಂಗಳೂರು ರೆಸ್ಟೋರೆಂಟ್​ ನ್ಯೂ ಕೃಷ್ಣ ಭವನ ಕ್ಲೋಸ್​; ಇಲ್ಲಿದೆ ವಿವರ
ಡಿ.6 ರಂದು ಐಕಾನಿಕ್​ ಬೆಂಗಳೂರು ರೆಸ್ಟೋರೆಂಟ್​ ನ್ಯೂ ಕೃಷ್ಣ ಭವನ ಕ್ಲೋಸ್​
ಕಿರಣ್ ಹನುಮಂತ್​ ಮಾದಾರ್
|

Updated on:Nov 28, 2023 | 10:16 PM

Share

ಬೆಂಗಳೂರು, ನ.28: ಬೆಂಗಳೂರಿನ ಅತ್ಯಂತ ಹಳೆಯ ರೆಸ್ಟೋರೆಂಟ್​ಗಳಲ್ಲಿ ಒಂದಾದ ನ್ಯೂ ಕೃಷ್ಣ ಭವನ(NKB)ವು ಡಿಸೆಂಬರ್​ 6 ರಿಂದ ಬಂದ್​ ಆಗಲಿದೆ. ಮಲ್ಲೇಶ್ವರಂ(Malleshwaram)ನ ಹೃದಯ ಭಾಗದ ಸಂಪಿಗೆ ಥಿಯೇಟರ್​ ಎದುರಿರುವ ನ್ಯೂ ಕೃಷ್ಣ ಭವನ, ಸಸ್ಯಹಾರಿ ಊಟ, ಗ್ರೀನ್​ ಮಸಾಲೆ ಇಡ್ಲಿಗಳು, ಮಂಡ್ಯ ಶೈಲಿಯ ರಾಗಿ ದೋಸೆಗಳು ಮತ್ತು ಇನ್ನಿತರ ಸಸ್ಯಹಾರಿ ಅಡುಗೆಗಳಿಗೆ ಹೆಸರುವಾಸಿಯಾಗಿದೆ. ಆದರೆ, ಇದೀಗ ಬಂದ್​ ಆಗಲಿದೆ ಎಂದು ​ರೆಸ್ಟೋರೆಂಟ್ ಮುಂಭಾಗದಲ್ಲಿ ಬ್ಯಾನ್​ರ್​ ಹಾಕಲಾಗಿದೆ. ಇದರಿಂದ ಗ್ರಾಹಕರಿಗೆ ಶಾಕ್​ ನೀಡಿದಂತಾಗಿದೆ.

1954 ರಲ್ಲಿ ಪ್ರಾರಂಭವಾಗಿದ್ದ ಹೋಟೆಲ್​

ಹಳೆಯ ಕಾಲದ ಆಕರ್ಷಣೆಯೊಂದಿಗೆ 1954 ರಲ್ಲಿ ನ್ಯೂ ಕೃಷ್ಣ ಭವನವು ಪ್ರಾರಂಭವಾಯಿತು. ಸಾಂಪ್ರದಾಯಿಕ ಉಡುಪಿ ಭಕ್ಷ್ಯಗಳ ಜೊತೆಗೆ ನ್ಯೂ ಕೃಷ್ಣ ಭವನವು ಕಾಫಿ ಮತ್ತು ಉತ್ತರ ಭಾರತದ ಅಡುಗೆಗೆ ಹೆಚ್ಚು ಹೆಸರುವಾಸಿಯಾಗಿದೆ. ‘ಒಂದು ಕಾಲದಲ್ಲಿ ಈ ರೆಸ್ಟೋರೆಂಟ್​ ದಿನಕ್ಕೆ 2500 ಕ್ಕೂ ಹೆಚ್ಚು ಊಟವನ್ನು ನೀಡುತ್ತಿತ್ತು ಎಂದು ಹಿರಿಯರು ಹೇಳುತ್ತಾರೆ. ಇನ್ನು ಪ್ರತಿ ದಿನವೂ ಪ್ರತ್ಯೇಕವಾದ ಕಸವನ್ನು ಹಂದಿ ಸಾಕಾಣಿಕೆ ಮಾಡುವವರಿಗೆ ಕಳುಹಿಸುವ ಮೂಲಕ ಶೂನ್ಯ ತ್ಯಾಜ್ಯ ನೀತಿಯನ್ನು ಅಳವಡಿಸಿಕೊಂಡ ಹಳೆಯ  ರೆಸ್ಟೋರೆಂಟ್​ಗಳಲ್ಲಿ ಇದು ಕೂಡ ಒಂದಾಗಿದೆ.

ಇದನ್ನೂ ಓದಿ:1985ರ ರೆಸ್ಟೋರೆಂಟ್​ ಬಿಲ್​ ನೋಡಿ ಹೌಹಾರುತ್ತಿರುವ ನೆಟ್ಟಿಗರು

ಸಿಬ್ಬಂದಿಗಳಿಗೆ ಬಹುದೊಡ್ದ ಹೊಡೆತ

ಗ್ರಾಹಕರಿಗೆಯೇ ಹೋಟೆಲ್​ ಮುಚ್ಚುವಿಕೆಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಇನ್ನೂ ಇಲ್ಲಿಯೇ ಕೆಲಸ ಮಾಡಿಕೊಂಡಿರುವ ಸಿಬ್ಬಂದಿಗಳ ಮುಂದಿನ ಜೀವನ ಹೇಗೆ ಎಂಬ ಪ್ರಶ್ನೆ ಮೂಡಿದೆ. ಇಲ್ಲಿ ಸುಮಾರು 100 ಜನ ಕೆಲಸವನ್ನು ಮಾಡುತ್ತಾರೆ. ಈ ವಯಸ್ಸಿನಲ್ಲಿ ಹೊಸ ಉದ್ಯೋಗವನ್ನು ಹುಡುಕುವುದು ಅಸಾಧ್ಯವಾಗಿದೆ ಎಂದು ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿರುವ ಸಿಬ್ಬಂದಿಯೊಬ್ಬರು ಕಣ್ಣೀರು ಹಾಕುತ್ತ ನೋವುವನ್ನು ಹಂಚಿಕೊಂಡಿದ್ದಾರೆ.

ಹೊಸ ಹೋಟೆಲ್​ ನಿರ್ಮಾಣ

ಇನ್ನು ಭೀಮಾ ಜ್ಯುವೆಲರ್ಸ್​ಗೆ ಆಸ್ತಿಯನ್ನು ಮಾರಾಟ ಮಾಡಲಾಗಿದೆ. ಶೀಘ್ರದಲ್ಲೇ ಅದು ಈಗಿರುವುದಕ್ಕಿಂತ ಸಂಪೂರ್ಣ ಹೊಸದಾಗಿ ಬರಲಿದೆ ಎಂದು ಮಾಲೀಕರ ಆಪ್ತ ಮೂಲಗಳು ತಿಳಿಸಿವೆ. ಈ ಕುರಿತು ಮಾತನಾಡಿದ ಹೋಟೆಲ್​ ಮಾಲೀಕರ ಸಂಘದ ಅಧ್ಯಕ್ಷ ‘ಕಳೆದೊಂದು ವರ್ಷದಿಂದ ಮಾತುಕತೆ ನಡೆದಿದ್ದು, ಮಾಲೀಕರು ಆಸ್ತಿಯನ್ನು ಮಾರಾಟ ಮಾಡಲು ನಿರ್ಧರಿಸಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Tue, 28 November 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?