AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ

ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾದಲ್ಲಿ ಸಮಸ್ಯೆಗಳು ತಾಂಡವ ಆಡುತ್ತಿವೆ. ಆಸ್ಪತ್ರೆಗೆ ಬರುವ ರೋಗಿಗಳು ಆಸ್ಪತ್ರೆಯ ಅವ್ಯವಸ್ಥೆಗೆ ಛೀಮಾರಿ ಹಾಕುವ ಪರಿಸ್ಥಿತಿ ಎದುರಾಗಿದೆ. ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಐಸಿಯು ಬೆಡ್​ಗಳಿಗೆ ತೀವ್ರ ಕೊರತೆ ಇದೆ. ಎಮರ್ಜೆನ್ಸಿ ಅಂತ ಬಂದರೆ ಬೆಡ್ ಇಲ್ಲದಂತ ಪರಿಸ್ಥಿತಿ ಉಂಟಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ
ವಿಕ್ಟೋರಿಯಾ ಆಸ್ಪತ್ರೆ ಹಾಗೂ ಐಸಿಯು ಬೆಡ್​ಗಳ ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Feb 26, 2026 | 6:32 AM

Share

ಬೆಂಗಳೂರು, ಫೆಬ್ರವರಿ 26: ಅದು ಹೇಳಿಕೊಳ್ಳಲು ಬೆಂಗಳೂರು (Bengaluru) ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ. ಆದರೆ, ಚಿಕಿತ್ಸೆಗೆ ಬಂದರೆ ಜೀವಕ್ಕೆ ಗ್ಯಾರಂಟಿ ಇಲ್ಲ ಎಂಬಂಥ ಸ್ಥಿತಿ ಇದೆ. ಗ್ಯಾರಂಟಿಗಳನ್ನು ಕೊಟ್ಟಿರುವ ಸರ್ಕಾರದಿಂದ ಆರೋಗ್ಯ ಭಾಗ್ಯದ ಗ್ಯಾರಂಟಿಯೇ ಇಲ್ಲದಂತಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಅವ್ಯವಸ್ಥೆಗಳ ಸಂಬಂಧ ಆರೋಪ ಈಗೀಗ ಜೋರಾಗಿಯೇ ಕೇಳಿಬರುತ್ತಿದೆ. ಸಮಸ್ಯೆಗಳು ತಾಂಡವ ಆಡುತ್ತಿದ್ದು, ರೋಗಿಗಳು ಎಮರ್ಜೆನ್ಸಿ ಎಂದು ಬಂದರೆ ಬೆಡ್ ಇಲ್ಲ ಎನ್ನುವ ಸ್ಥಿತಿ ಇದೆ.

ಆಸ್ಪತ್ರೆಗೆ ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ನೂರಾರು ರೋಗಿಗಳು ಆಗಮಿಸುತ್ತಾರೆ. ಆದರೆ ಲಭ್ಯವಿರುವ ಐಸಿಯು ಬೆಡ್‌ಗಳ ಸಂಖ್ಯೆ ಕೇವಲ 60ರಿಂದ 70 ಮಾತ್ರ. ಹೀಗಾಗಿ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಂಬಂಧಿಕರು ದೂರಿದ್ದಾರೆ. ಎಮರ್ಜೆನ್ಸಿ ವಿಭಾಗದಲ್ಲಿಯೂ ಒತ್ತಡ ಹೆಚ್ಚಿದ್ದು, ಕೆಲವು ಸಂದರ್ಭಗಳಲ್ಲಿ ಖಾಲಿ ಬೆಡ್ ಇಲ್ಲ ಎಂಬ ಕಾರಣ ನೀಡಿ ಕಾಯುವಂತೆ ಸೂಚಿಸಲಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ.

ಕೆಲವರು ರೋಗಿಗಳ ಸಂಬಂಧಿಕರು, ಸಮಸ್ಯೆ ತಿಳಿಸಲು ಹೋದಾಗ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ. ಬೆಡ್ ಸಿಗದ ಹಿನ್ನೆಲೆ ಕೆಲವು ಕುಟುಂಬಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎನ್ನಲಾಗಿದೆ. ಲ್ಯಾಬ್ ಪರೀಕ್ಷಾ ವರದಿಗಳು ತಡವಾಗಿ ದೊರಕುವುದು ಸೇರಿದಂತೆ ಇನ್ನೂ ಹಲವು ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆ ಕೂಡ ಅಸಮಾಧಾನ ವ್ಯಕ್ತವಾಗುತ್ತಿದೆ.

ವೈದ್ಯಕೀಯ ಅಧೀಕ್ಷಕರು ಹೇಳಿದ್ದೇನು?

ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸಿದ ವೈದ್ಯಕೀಯ ಅಧೀಕ್ಷಕರು, ‘ವಿಕ್ಟೋರಿಯಾ ಆಸ್ಪತ್ರೆ ದೊಡ್ಡ ಪ್ರಮಾಣದಲ್ಲಿ ರೋಗಿಗಳಿಗೆ ಸೇವೆ ನೀಡುತ್ತಿದೆ. ದಿನನಿತ್ಯ ಬಹಳ ಸಂಖ್ಯೆಯಲ್ಲಿ ತುರ್ತು ಪ್ರಕರಣಗಳು ಬರುತ್ತಿವೆ. ಲಭ್ಯವಿರುವ ಐಸಿಯು ಬೆಡ್‌ಗಳು ಸೀಮಿತವಾಗಿವೆ. ಈ ಕುರಿತು ಸರ್ಕಾರದ ಗಮನಕ್ಕೆ ವಿಷಯವನ್ನು ತರಲಾಗಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ

ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಈ ಆಸ್ಪತ್ರೆಯಲ್ಲಿ ಮೂಲಸೌಕರ್ಯ ವೃದ್ಧಿ ಮತ್ತು ಹೆಚ್ಚುವರಿ ಐಸಿಯು ಬೆಡ್‌ಗಳ ವ್ಯವಸ್ಥೆ ಅಗತ್ಯವಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಆರೋಗ್ಯ ಸೇವೆ ಸುಧಾರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?