AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನ ವಿವಾದ: ಚಾಮರಾಜಪೇಟೆ ಬಂದ್ ವಿರುದ್ಧ ಭುಗಿಲೆದ್ದ ಆಕ್ರೋಶ, ಬಂದ್​ಗೆ ಬೆಂಬಲ ನಿರಾಕರಿಸಿದ ಮುಸ್ಲಿಂ ವ್ಯಾಪಾರಿಗಳು

ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ಸಂಬಂಧ ಕರೆ ನೀಡಲಾಗಿದ್ದ ಜು.12ರ ಬಂದ್​ಗೆ ಈಗಾಗಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವೇದಿಕೆ ನೀಡಿದ ಬಂದ್​ ಕರೆಗೆ ಮುಸ್ಲಿಂ ವ್ಯಾಪಾರಸ್ಥರು ಆಕ್ರೋಶ ವ್ಯಕ್ತವಾಗಿದ್ದು, ಬಂದ್​ಗೆ ಬೆಂಬಲ ಇಲ್ಲ ಎಂದಿದ್ದಾರೆ.

ಈದ್ಗಾ ಮೈದಾನ ವಿವಾದ: ಚಾಮರಾಜಪೇಟೆ ಬಂದ್ ವಿರುದ್ಧ ಭುಗಿಲೆದ್ದ ಆಕ್ರೋಶ, ಬಂದ್​ಗೆ ಬೆಂಬಲ ನಿರಾಕರಿಸಿದ ಮುಸ್ಲಿಂ ವ್ಯಾಪಾರಿಗಳು
ಚಾಮರಾಜಪೇಟೆ ಈದ್ಗಾ ಮೈದಾನ
TV9 Web
| Edited By: Rakesh Nayak Manchi|

Updated on: Jul 04, 2022 | 9:44 AM

Share

ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನದ (Chamrajpet Idgah Maidan) ಮಾಲೀಕತ್ವ ವಿವಾದ ತಣ್ಣಗಾಗುವಂತೆ ಕಾಣುತ್ತಿಲ್ಲ, ಒಂದಲ್ಲಾ ಒಂದು ರೀತಿಯಲ್ಲಿ ವಿವಾದ ಜೋರಾಗುತ್ತಿದ್ದು, ಇದೀಗ ಜುಲೈ 12ರಂದು ಸಂಜೆ 6ರವರೆಗೆ ಚಾಮರಾಜಪೇಟೆ ಬಂದ್​(Chamarajpet Bandh)ಗೆ ಕರೆ ನೀಡಲಾಗಿದೆ. ಆದರೆ ಈ ಬಂದ್​ಗೆ ಮುಸ್ಲಿಂ ವ್ಯಾಪಾರಿಗಳು ಬೆಂಬಲ ಸೂಚಿಸುವುದಿಲ್ಲ ಎಂದು ಹೇಳಿದ್ದಾರೆ. ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವೇದಿಕೆ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಸಂಘಟನೆಗಳು ಶಾಂತಿಯುತ ಬಂದ್​ಗೆ ಕರೆ ನೀಡಿವೆ. ಅಂದು ಬೃಹತ್ ಪ್ರತಿಭಟನೆ, ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಆದರೆ ಈ ಬಂದ್​ಗೆ ಮುಸ್ಲಿಂ ವ್ಯಾಪಾರಿಗಳು ಖಂಡನೆ ವ್ಯಕ್ತಪಡಿಸಿ ಬಂದ್​ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಬಕ್ರೀದ್ ನಂತರ ನಡೆಯುವ ಈ ಬಂದ್​ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುವ ಲಕ್ಷಣಗಳು ಎದ್ದುಕಾಣುತ್ತಿದೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ

ಚಾಮರಾಜಪೇಟೆ ಬಂದ್​ಗೆ ಕರೆ ನೀಡಿರುವ ವಿಚಾರದಲ್ಲಿ ಆಕ್ರೋಶಕ್ಕೆ ಭುಗಿಲೆದ್ದಿದ್ದು, ಮುಸ್ಲಿಂ ವ್ಯಾಪಾರಿಗಳಿಂದ ಬಂದ್​ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಂದ್ ಮಾಡಿದರೆ ಏನು ಪ್ರಯೋಜನ ಎಂದು ಪ್ರಶ್ನಿಸುತ್ತಿರುವ ಮುಸ್ಲಿಂ ವ್ಯಾಪಾರಿಗಳು, ಬಂದ್​ನಿಂದ ಸರ್ಕಾರಕ್ಕೂ ಲಾಸ್ ಹಾಗೂ ವ್ಯಾಪಾರಿಗಳಿಗೂ ಹೊಡೆತ ಬೀಳುತ್ತದೆ ಎಂದು ಮುಸ್ಲಿಂ ವ್ಯಾಪಾರಿಗಳು ಹೇಳುತ್ತಾರೆ. ಬಂದ್​ನಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ, ಸರ್ಕಾರ ಏನು ಹೇಳುತ್ತದೆಯೋ ಅದನ್ನು ಮಾಡಬೇಕು. ಅದಾಗ್ಯೂ ಮೈದಾನ ಬಿಬಿಎಂಪಿ ಆಸ್ತಿ ಅಲ್ಲ ಎಂದು ಹೇಳುತ್ತಿರುವ ಮುಸ್ಲಿಂ ವರ್ತಕರು, ಮೈದಾನ ವಕ್ಫ್​ ಬೋರ್ಡ್ ಪ್ರಾಪರ್ಟಿಯಾಗಿದೆ ಎಂದು ಹೇಳಿದ್ದಾರೆ.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ. ಮುಸ್ಲಿಂ ಸಮುದಾಯ ಈದ್ಗಾ ಮೈದಾನ ನಮ್ಮದು ಎಂದು ಹೇಳುತ್ತಿದ್ದರೆ, ಬಿಬಿಎಂಪಿ ಇದು ಆಟದ ಮೈದಾನ, ಬಿಬಿಎಂಪಿಗೆ ಸೇರಿದ್ದು ಅಂತ ಹೇಳಿದೆ. ಈ ವಿವಾದ ಹಿನ್ನೆಲೆಯಲ್ಲಿ ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ. ಬಕ್ರೀದ್ ಹಬ್ಬದ ಬಳಿಕ ನಾಗರಿಕರ ಒಕ್ಕೂಟ ಬಂದ್​ಗೆ ಕರೆ ನೀಡಿದೆ.

ಇದನ್ನೂ ಓದಿ: ಎಚ್ಚರ ಪೋಷಕರೇ ಎಚ್ಚರ… ಹೇಳಿಕೊಳ್ಳಲು ಇದೊಂದು ಬುಕ್​ಸ್ಟಾಲ್, ಒಳಗಡೆ ನಡೆಯುತ್ತಿತ್ತು ಸೆಲ್ಯೂಷನ್ ದಂಧೆ!

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್