Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಧ್ವಂಸ: ಪದೇಪದೆ ಇದೇ ದೇಗುಲ ಟಾರ್ಗೆಟ್​​​ ಮಾಡುತ್ತಿರುವ ಪುಂಡರು

ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿ ನಾಗದೇವರ ವಿಗ್ರಹ ಧ್ವಂಸ ಮಾಡಿರುವಂತಹ ಘಟನ ಬೆಂಗಳೂರಿನ ಬಾಪೂಜಿನಗರದ ಮುನೇಶ್ವರ ದೇಗುಲದಲ್ಲಿ ನಡೆದಿದೆ.

ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಧ್ವಂಸ: ಪದೇಪದೆ ಇದೇ ದೇಗುಲ ಟಾರ್ಗೆಟ್​​​ ಮಾಡುತ್ತಿರುವ ಪುಂಡರು
ಬಾಪೂಜಿನಗರದ ಮುನೇಶ್ವರ ದೇಗುಲದಲ್ಲಿ ನಾಗದೇವರ ವಿಗ್ರಹ ಧ್ವಂಸ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 26, 2023 | 9:20 PM

ಬೆಂಗಳೂರು: ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿ ನಾಗದೇವರ ವಿಗ್ರಹ ಧ್ವಂಸ (Idol vandalised) ಮಾಡಿರುವಂತಹ ಘಟನ ಬೆಂಗಳೂರಿನ ಬಾಪೂಜಿನಗರದ ಮುನೇಶ್ವರ ದೇಗುಲದಲ್ಲಿ ನಡೆದಿದೆ. ಪದೇಪದೆ ಇದೇ ದೇಗುಲ ಟಾರ್ಗೆಟ್​​​ ಮಾಡುತ್ತಿರುವ ಪುಂಡರು ಕಳೆದೊಂದು ವರ್ಷದಲ್ಲಿ 3 ಬಾರಿ ವಿಗ್ರಹ ನಾಶಪಡಿಸಿದ್ದಾರೆ. ಪೊಲೀಸರಿಗೆ ಈಗಾಗಲೇ ದೇವಸ್ಥಾನ ಆಡಳಿತ ಮಂಡಳಿ ಮತ್ತು ಬಜರಂಗದಳ ಕಾರ್ಯಕರ್ತರಿಂದಲೂ ದೂರು ನೀಡಲಾಗಿದೆ. ದೇವಸ್ಥಾನದ ಸುತ್ತ ಇರುವ ಮುಸ್ಲಿಂ ಯುವಕರಿಂದ ಕೃತ್ಯವೆಸಗಿರಬಹುದು ಎಂದು ಹಿಂದೂ ಜಾಗರಣ ಸಮಿತಿ ಆರೋಪ ಮಾಡಿದೆ. ಪೊಲೀಸರ ಭದ್ರತೆ ನೀಡಿ ದೇವಸ್ಥಾನ ರಕ್ಷಿಸಬೇಕು ಅಂತ ಆಗ್ರಹಿಸಲಾಗಿದೆ. ಸದ್ಯ ಮುನೇಶ್ವರ ದೇಗುಲಕ್ಕೆ ಬ್ಯಾಟರಾಯನಪುರ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಚರ್ಚ್​ಗೆ ನುಗ್ಗಿ ಏಸು ಮೂರ್ತಿ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌ (St. Mary’s Church) ಮೇಲೆ ಇತ್ತೀಚೆಗೆ ದುಷ್ಕರ್ಮಿಗಳು ದಾಳಿ ಮಾಡಿದ್ದರು. ದುಷ್ಕರ್ಮಿಗಳು ಚರ್ಚ್ ಒಳಗೆ ನುಗ್ಗಿ ಬಾಲ ಏಸುವಿನ ಮೂರ್ತಿ ಹಾಗೂ ತೊಟ್ಟಿಲನ್ನು ಒಡೆದು ಹಾಕಿದ್ದರು. ಕ್ರಿಸ್‌ಮಸ್ ಹಬ್ಬಕೆಂದು ಚರ್ಚ್ ಒಳಗಿನ ಟೇಬಲ್ ಮೇಲೆ ಬುಟ್ಟಿಯಲ್ಲಿನ, ತೊಟ್ಟಿಲಲ್ಲಿ ಬಾಲ ಏಸು ಅನ್ನು ಮಲಗಿಸಲಾಗಿತ್ತು.

ಇದನ್ನೂ ಓದಿ: ಮೈಸೂರು: ಜೆಡಿಎಸ್​ ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಹೆಚ್​ಡಿ ಕುಮಾರಸ್ವಾಮಿ ಭರಸವಸೆಗಳ ಸುರಿಮಳೆ

ಚರ್ಚ್​ನಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳಿಂದ ದಾಳಿ ಮಾಡಿ, ಬಾಲ ಏಸುವಿನ‌ ಮೂರ್ತಿಯನ್ನ ಪುಡಿ ಪುಡಿ ಮಾಡಿದ್ದರು. ಹಾಗೇ ಚರ್ಚ್ ಹೊರಗೆ ಇದ್ದ ಹುಂಡಿ ಕೂಡ ಕಳ್ಳತನವಾಗಿತ್ತು. ಚರ್ಚ್​ನ ಫಾದರ್ ಜಾನ್ ಪೌಲ್ ಮೈಸೂರಿಗೆ ತೆರಳಿದ ವೇಳೆಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದರು.

ತಡೆಗೋಡೆ ನಿರ್ಮಾಣದ ವೇಳೆ ಬರೆ ಕುಸಿತ: ಮೂವರು ಕಾರ್ಮಿಕರ ಸಾವು

ಮಂಗಳೂರು: ತಡೆಗೋಡೆ ನಿರ್ಮಾಣದ ಸೆಂಟ್ರಿಂಗ್​ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರದ ಗುರುಂಪು ಬಳಿ ನಡೆದಿದೆ.  ಸೋಮಶೇಖರರೆಡ್ಡಿ(45), ಪತ್ನಿ ಶಾಂತಾ(40), ಮೃತ ಮತ್ತೋರ್ವ ಕಾರ್ಮಿಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಸ್ಥಳೀಯರ ಸಹಾಯದಿಂದ ಶವಗಳನ್ನು ಹೊರತೆಗೆಯಲಾಗಿದೆ.

ಇದನ್ನೂ ಓದಿ: Amit Shah: ವಿಧಾನಸೌಧ ಎದುರು ಬಸವೇಶ್ವರ, ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಿದ ಅಮಿತ್​ ಶಾ

ಮೃತಪಟ್ಟ ಕಾರ್ಮಿಕರು ಗದಗ ಜಿಲ್ಲೆ ಮುಂಡರಗಿ ಮೂಲದವರು ಎಂದು ಗುರುತಿಸಲಾಗುತ್ತಿದೆ. 7 ಕಾರ್ಮಿಕರು ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ಗುಡ್ಡ ಕುಸಿತ ಉಂಟಾಗಿದೆ. ಮೂವರ ಮೃತದೇಹ ಸುಳ್ಯ ಆಸ್ಪತ್ರೆಗೆ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಸ್ಥಳಕ್ಕೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 pm, Sun, 26 March 23

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ