AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಮ್ಮದಿ, ಶಾಂತಿ ಕೆಡಿಸಿದ್ರೆ ಆರ್​ಎಸ್​ಎಸ್​, ಭಜರಂಗದಳ ಯಾವ ಸಂಘಟನೆಯೆಂದು ನೋಡದೇ ಕ್ರಮ ಕೈಗೊಳ್ಳುತ್ತೇವೆ -ಪ್ರಿಯಾಂಕ್ ಖರ್ಗೆ

ಯಾವುದೇ ಸಂಘಟನೆ ಅಥವಾ ಸಮುದಾಯಕ್ಕೆ ಸೇರಿದವರಿರಲಿ. ಕೋಮು ದ್ವೇಷಕ್ಕೆ ಪ್ರೇರೇಪಿಸುವ ಕೆಲಸ ಮಾಡಿದರೆ ನಮ್ಮ ಸರ್ಕಾರ ಕಡಿವಾಣ ಹಾಕಲಿದೆ. ಕಾನೂನು ಕೈಗೆತ್ತಿಕೊಳ್ಳುವ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ನೆಮ್ಮದಿ, ಶಾಂತಿ ಕೆಡಿಸಿದ್ರೆ ಆರ್​ಎಸ್​ಎಸ್​, ಭಜರಂಗದಳ ಯಾವ ಸಂಘಟನೆಯೆಂದು ನೋಡದೇ ಕ್ರಮ ಕೈಗೊಳ್ಳುತ್ತೇವೆ -ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Follow us
ಆಯೇಷಾ ಬಾನು
|

Updated on: May 25, 2023 | 1:40 PM

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿತ್ತು(Congress Manifesto). ಪ್ರಣಾಳಿಕೆಯಲ್ಲಿ ಪಿಎಫ್‌ಐ(PFI), ಭಜರಂಗದಳ(Bajrang Dal) ಸೇರಿದಂತೆ ಮತೀಯ ಸಂಘಟನೆಗಳ ನಿಷೇಧಿಸುವುದಾಗಿ ಹೇಳಿತ್ತು. ಭಜರಂಗದಳವನ್ನು ಪಿಎಫ್​ಐಗೆ ಹೋಲಿಸಿದ್ದು ಹಾಗೂ ನಿಷೇಧಿಸುವುದಾಗಿ ಹೇಳಿದಕ್ಕೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಸದ್ಯ ಪ್ರಣಾಳಿಕೆಯಲ್ಲಿ ಹೇಳಿದಂತೆ ಕಾನೂನು ಕೈಗೆತ್ತಿಕೊಳ್ಳುವ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ವಿಧಾನಸೌಧದಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ತಿಳಿಸಿದ್ದಾರೆ.

ಯಾವುದೇ ಸಂಘಟನೆ ಅಥವಾ ಸಮುದಾಯಕ್ಕೆ ಸೇರಿದವರಿರಲಿ. ಕೋಮು ದ್ವೇಷಕ್ಕೆ ಪ್ರೇರೇಪಿಸುವ ಕೆಲಸ ಮಾಡಿದರೆ ನಮ್ಮ ಸರ್ಕಾರ ಕಡಿವಾಣ ಹಾಕಲಿದೆ. ಕಾನೂನು ಕೈಗೆತ್ತಿಕೊಳ್ಳುವ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಸರ್ಕಾರ ಸ್ಪಷ್ಟವಾದ ನಿಲುವುನ್ನ ತೆಗೆದುಕೊಂಡಿದೆ. ಯಾವುದೇ ಸಂಘಟನೆ ಇರಬಹುದು ರಾಜಕೀಯ, ಸಾಮಾಜಿಕ, ನಮ್ಮ ರಾಜ್ಯದ ನೆಮ್ಮದಿಯನ್ನ ಶಾಂತಿ ಕೆಡಿಸಿದ್ರೆ ಕಟ್ಟಿ ಹಾಕ್ತೀವಿ. ಕಾನೂನು ಚೌಕಟ್ಟಿನಲ್ಲಿ, ಸಂವಿಧಾನಾತ್ಮಕವಾಗಿ ಕಟ್ಟಿ ಹಾಕ್ತೀವಿ. ಬಜರಂಗದಳ, ಪಿಎಫ್​ಐ, ಆರ್​ಎಸ್​ಎಸ್ ಇರಬಹುದು ನಿಷೇಧ ಮಾಡೋದಕ್ಕೂ ನಾವು ಹಿಂದೇಟು ಹಾಕೋದಿಲ್ಲ. ಅಸಂವಿಧಾನಿಕ ಚಟುವಟಿಕೆ, ಕಾನೂನು ಬಾಹಿರ ಚಟುವಟಿಕೆ, ಕೋಮು ವಿಷ ಬೀಜ ಬಿತ್ತಿ ರಾಜಕೀಯ ಬೇಳೆ ಬೇಯಿಸಕೊಂಡ್ರೆ ಕಾನೂನು ಮೂಲಕ ಏನ್ ಕ್ರಮ ಕೈಗೊಳ್ಳಬೇಕು ತಗೋತೀವಿ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ; ಸೋನಿಯಾ ಗಾಂಧಿ ವಿರುದ್ಧ ವಿಎಚ್​​​ಪಿ ವಾಗ್ದಾಳಿ

ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಬಗ್ಗೆ ಚಿಂತಿಸುತ್ತಿದ್ದೇವೆ

ಇನ್ನು ಮತ್ತೊಂದೆಡೆ ಖಾತೆ ಹಂಚಿಕೆ ಸಂಬಂಧ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆಗೆ ಸಂಧಾನ ಸೂತ್ರ ಎಂಬುದಿಲ್ಲ. ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಬಗ್ಗೆ ಚಿಂತಿಸುತ್ತಿದ್ದೇವೆ. ಕೆಲವೊಂದು ಸಿಕ್ಕುಗಳಿವೆ, ಸಿಕ್ಕು ಗಂಟು ಬಿಡಿಸುವ ಕೆಲಸವಾಗುತ್ತಿದೆ. ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದರಿಂದ ಒಂದಷ್ಟು ಸಿಕ್ಕು. ಒಂದಷ್ಟು ದಂಡು, ಸಿಕ್ಕುಗಳಾಗುವುದು ಸಹಜ. ಎಲ್ಲವನ್ನೂ ಚಿಂತಿಸಿಯೇ ಸುಸೂತ್ರವಾಗಿ ಬಗೆಹರಿಸುವ ಕೆಲಸವಾಗುತ್ತಿದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ