AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಾದ್ರೂ ನನ್ನ ಪರ ಮಾತಾಡಿದ್ರೆ ನೋಟಿಸ್ ಕೊಡ್ತೀನಿ, ನನಗೆ ಯಾರ ಬೆಂಬಲವೂ ಬೇಡ -ಇಕ್ಬಾಲ್ ಹುಸೇನ್ ವಿರುದ್ಧ ಡಿಕೆ ಶಿವಕುಮಾರ್ ಗರಂ

ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದರು. ಈ ಸಂಬಂಧ ಈಗ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ ಎಂದು ಶಾಸಕರ ವಿರುದ್ಧ ಗರಂ ಆಗಿದ್ದಾರೆ.

ಯಾರಾದ್ರೂ ನನ್ನ ಪರ ಮಾತಾಡಿದ್ರೆ ನೋಟಿಸ್ ಕೊಡ್ತೀನಿ, ನನಗೆ ಯಾರ ಬೆಂಬಲವೂ ಬೇಡ -ಇಕ್ಬಾಲ್ ಹುಸೇನ್ ವಿರುದ್ಧ ಡಿಕೆ ಶಿವಕುಮಾರ್ ಗರಂ
ಡಿಕೆ ಶಿವಕುಮಾರ್
Anil Kalkere
| Edited By: |

Updated on: Nov 05, 2023 | 9:18 AM

Share

ಬೆಂಗಳೂರು, ನ.05: ನಾನೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ನಡುವೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಅವರು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಪರ ಬ್ಯಾಟ್ ಬೀಸಿದ್ದರು. ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಈಗ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ ಎಂದು ಶಾಸಕರ ವಿರುದ್ಧ ಗರಂ ಆಗಿದ್ದಾರೆ.

ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಡಿಕೆಶಿ

ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ. ಪಕ್ಷದಲ್ಲಿ ಒಂದು ಶಿಸ್ತು ಇರಬೇಕು. ನನಗೆ ಯಾವ ಶಾಸಕರ ಬೆಂಬಲನೂ ಬೇಡ, ಯಾವ ಶಾಸಕರೂ ಬೇಡ. ರಾಮನಗರ MLA ಇಕ್ಬಾಲ್ ಹುಸೇನ್​ಗೆ ನೋಟಿಸ್ ಕೊಡಬೇಕು ಎಂದು ಕೊಂಡಿದ್ದೀನಿ. ನನಗೆ ಯಾರ ರೆಕಮೆಂಡೇಶನ್ ಕೂಡ ಬೇಡ. ಐ ಡೋಂಟ್ ವಾಂಟ್ ಏನೀ ರೆಕಮೆಂಡೇಶನ್ ಎಂದು ಡಿಕೆ ಶಿವಕುಮಾರ್ ಗುಡುಗಿದ್ದಾರೆ.

ಇದನ್ನೂ ಓದಿ: ವರಿಷ್ಠರ ಸೂಚನೆಗೂ ಬಗ್ಗದ ಕಾಂಗ್ರೆಸ್ಸಿಗರು: ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಇಕ್ಬಾಲ್ ಹುಸೇನ್

ಆಪರೇಷನ್ ಹಸ್ತಕ್ಕೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಡಿ.ಕೆ. ಶಿವಕುಮಾರ್‌‌‌ ನಾಳೆ ಬೆಳಗ್ಗೆಯೇ ಮುಖ್ಯಮಂತ್ರಿಯಾದರೆ ನಮ್ಮ 19 ಶಾಸಕರ ಬೆಂಬಲ ನೀಡುತ್ತೇನೆಂದು ಹೆಚ್​ಡಿ ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದರು. ಸದ್ಯ ಡಿಕೆ ಶಿವಕುಮಾರ್​ಗೆ ಸಿಎಂ ಆಗಲು ಬೆಂಬಲ ಕೊಡುವ ಮೂಲಕ ಒಕ್ಕಲಿಗ ಅಸ್ತ್ರ ಪ್ರಯೋಗ ಮಾಡಲು ಹೆಚ್​ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಒಕ್ಕಲಿಗ ಅಸ್ತ್ರ ಪ್ರಯೋಗದ ಮೂಲಕ ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡಲಿದ್ದಾರೆ. ಡಿಕೆ ಶಿವಕುಮಾರ್ ಜೆಡಿಎಸ್ ಶಾಸಕರನ್ನ ಸೆಳೆಯಲು ಮುಂದಾಗಿದ್ದರು. ಹೀಗಾಗಿ ಡಿಕೆ ಬ್ರದರ್ಸ್ ಓಟಕ್ಕೆ ಬ್ರೇಕ್ ಹಾಕಲು ಹೆಚ್​ಡಿ ಕುಮಾರಸ್ವಾಮಿ ಒಕ್ಕಲಿಗಸ್ತ್ರ ಪ್ರಯೋಗ ಮಾಡಿದ್ದಾರೆ.

ಡಿಕೆ ಶಿವಕುಮಾರ್ ನಾಳೆ ಸಿಎಂ ಆಗೋದಾದ್ರೆ 19 ಜನ ಶಾಸಕರ ಬೆಂಬಲ ಘೋಷಣೆ ಮೂಲಕ ನಾನು ಸಮುದಾಯದ ನಾಯಕನ ಪರ ಅನ್ನೋ ಸಂದೇಶವನ್ನು ಹೆಚ್​ಡಿ ಕುಮಾರಸ್ವಾಮಿ ಕೊಟ್ಟಿದ್ದಾರೆ. ಮತ್ತೊಂದೆಡೆ ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ್ರಾ ಎಂಬ ಅಂಶ ವ್ಯಕ್ತವಾಗುತ್ತಿದೆ. ಒಂದು ಕಡೆ ಡಿಕೆ ಬ್ರದರ್ಸ್ ಆಪರೇಷನ್ ಹಸ್ತಕ್ಕೆ ಕೌಂಟರ್ ಕೊಟ್ಟರೆ ಮತ್ತೊಂದೆಡೆ ತಾಖತ್ ಇದ್ರೆ ಡಿಕೆಶಿ ಸಿಎಂ ಮಾಡಿ ಎಂದು ಕಾಂಗ್ರೆಸ್ ಗೆ ಒತ್ತಡ ಹಾಕೋ ಪ್ಲಾನ್ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ