AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಪಾಪರ್ ಬಿದ್ದಿದ್ದರೆ ನಾನೇ ಟೀಚರ್​​ಗೆ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ

ಖಾಸಗಿ ಕಾಲೇಜಿಗೆ ಅನುಮತಿ ಕೊಡಲು ಸಚಿವರಿಗೆ ಆಗುತ್ತದೆ. ಆದರೆ ಸರ್ಕಾರಿ ಕಾಲೇಜಿಗೆ ಅಲ್ಲ. ಕೆಲವರಿಗೆ 300-400 ಕೋಟಿ ರೂ. ನಿಯಮ ಮೀರಿ ಕೊಟ್ಟಿದ್ದಾರೆ. ಕಾನೂನು ಬಾಹಿರವಾಗಿ ಹಣ ಎಲ್ಲಿ ಕೊಟ್ಟಿದ್ದಾರೆ ಅಂತ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಆರೋಪ ಮಾಡಿದ್ದಾರೆ.

ಸರ್ಕಾರ ಪಾಪರ್ ಬಿದ್ದಿದ್ದರೆ ನಾನೇ ಟೀಚರ್​​ಗೆ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ
ಜೆಡಿಎಸ್ ಶಾಸಕ ಎಚ್​. ಡಿ. ರೇವಣ್ಣ
TV9 Web
| Edited By: |

Updated on:Jan 18, 2022 | 4:54 PM

Share

ಬೆಂಗಳೂರು: ಹೊಳೆನರಸೀಪುರ ಕಾಲೇಜಿಗೆ 2 ಸ್ನಾತಕೋತ್ತರ ಕೋರ್ಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ (HD Revanna) ಪ್ರತಿಕ್ರಿಯೆ ನೀಡಿದ್ದಾರೆ. ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ನೀಡಿದ್ದನ್ನು ಅಶ್ವತ್ಥ್ ನಾರಾಯಣ ರದ್ದು ಮಾಡಿದ್ದಾರೆ. ಅಂದರೆ ನಮಗೆ ಕೊಟ್ಟ ಎಲ್ಲ ಅನುದಾನ ಬಿಜೆಪಿ ಸರ್ಕಾರ ತಡೆ ಹಿಡಿದಿದೆ. ಬಡವರ ಮಕ್ಕಳು ಓದುವ ಕಾಲೇಜಿಗೆ ಯಾಕೆ ರಾಜಕೀಯ? ಉದ್ದೇಶಪೂರ್ವಕವಾಗಿ ಯಾಕೆ ಇದನ್ನು ಸಚಿವರು ತಿರಸ್ಕರಿಸಿದ್ದಾರೆ. ಸರ್ಕಾರ ಪಾಪರ್ ಬಿದ್ದಿದ್ದರೆ ನಾನೇ ಟೀಚರ್​​ಗೆ (Teacher) ಸಂಬಳ ಕೊಡುತ್ತೀನಿ. ಬೇಕಿದ್ದರೆ ಛಾಪಾ ಕಾಗದದ ಮೇಲೆ ಬರೆದುಕೊಡಲು ಸಿದ್ಧ ಎಂದು ತಿಳಿಸಿದ್ದಾರೆ.

ಖಾಸಗಿ ಕಾಲೇಜಿಗೆ ಅನುಮತಿ ಕೊಡಲು ಸಚಿವರಿಗೆ ಆಗುತ್ತದೆ. ಆದರೆ ಸರ್ಕಾರಿ ಕಾಲೇಜಿಗೆ ಅಲ್ಲ. ಕೆಲವರಿಗೆ 300-400 ಕೋಟಿ ರೂ. ನಿಯಮ ಮೀರಿ ಕೊಟ್ಟಿದ್ದಾರೆ. ಕಾನೂನು ಬಾಹಿರವಾಗಿ ಹಣ ಎಲ್ಲಿ ಕೊಟ್ಟಿದ್ದಾರೆ ಅಂತ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಆರೋಪ ಮಾಡಿದ್ದಾರೆ.

ಸಿಎಂ ಸಮಸ್ಯೆ ಪರಿಹಾರ ಮಾಡುತ್ತಾರೆ ಎಂಬ ವಿಶ್ವಾಸ ಇದೆ: ಹೆಚ್​.ಡಿ.ರೇವಣ್ಣ

ನಾನು ಮಾತಾಡಿದರೆ ಎಲ್ಲೋ ಹೋಗುತ್ತದೆ. ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಸಮಸ್ಯೆ ಸರಿ ಮಾಡುವುದಾಗಿ ಹೇಳಿದ್ದಾರೆ. ನಮ್ಮ ಭಾಗಕ್ಕೆ ಕೋರ್ಸ್ಗೆ ಅನುಮತಿ ಕೊಡಬೇಕು ಎಂದು ಹೆಚ್​.ಡಿ.ರೇವಣ್ಣ ಹೇಳಿದ್ದಾರೆ.

ಹೊಳೆನರಸೀಪುರ ಮಹಿಳಾ ಗೃಹ ವಿಜ್ಞಾನ ಕಾಲೇಜಿಗೆ ಸ್ನಾತಕೋತ್ತರ ಕೋರ್ಸ್ ಮಂಜೂರು ವಿಚಾರವಾಗಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಹೊಳೆನರಸೀಪುರ ಶಾಸಕ ಹೆಚ್‌.ಡಿ.ರೇವಣ್ಣ ಪ್ರತಿಭಟನೆಗೆ ಮುಂದಾಗಿದ್ದ ಹಿನ್ನೆಲೆ ರೇವಣ್ಣ ಜೊತೆ ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ‌ ಮಾತುಕತೆ ನಡೆಸಿದ್ದಾರೆ ಶುಕ್ರವಾರ ಸಭೆ ಕರೆಯುವುದಾಗಿ ಸಿಎಂ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕೃಷ್ಣಾದಿಂದ ಶಾಸಕ ಹೆಚ್.ಡಿ.ರೇವಣ್ಣ ವಾಪಸ್​ ಆಗಿದ್ದಾರೆ.

ಶಿರಾಡಿ ಘಾಟ್ ಬಂದ್ ವಿಚಾರ

ನಾನು ಮಂತ್ರಿ ಇದ್ದಾಗ ಈ ಬಗ್ಗೆ ಕ್ರಮ ವಹಿಸಿದ್ದೆ. 15 ವರ್ಷ ಬೇಕಾ ಇದನ್ನು ಸರಿ ಮಾಡೋಕೆ? ಬಿಜೆಪಿ ಅಧ್ಯಕ್ಷರೇ ಓಡಾಡುವ ಜಾಗ ಅದು. ಅವರು ಹೆಲಿಕಾಪ್ಟರ್​ನಲ್ಲಿ ಓಡಾಡುತ್ತಾರೆ ಅಷ್ಟೇ ಎಂದು ಶಿರಾಡಿ ಘಾಟ್ ಬಂದ್ ವಿಚಾರವಾಗಿ ಹೆಚ್​.ಡಿ.ರೇವಣ್ಣ ಮಾತನಾಡಿದ್ದಾರೆ.

ಹಾಸನ ಡಿಸಿಸಿ ಬ್ಯಾಂಕ್ ರಿಸಲ್ಟ್ ತಡೆ ಹಿಡಿದಿರುವ ವಿಚಾರ

ಹಾಸನ ಡಿಸಿಸಿ ಬ್ಯಾಂಕ್ ರಿಸಲ್ಟ್ ಅನ್ನು ಬಿಜೆಪಿಯವರು ತಡೆ ಹಿಡಿದ್ದಾರೆ. ಯಡಿಯೂರಪ್ಪ ಕಾಲದಲ್ಲಿ ಇದನ್ನು ತಡೆ ಹಿಡಿದಿದ್ದರು. ಯಾರೋ ಅರ್ಜಿ ಹಾಕಿದ್ದಾರೆ ಎಂದು ತಡೆ ಹಿಡಿದಿದ್ದಾರೆ ಎಂದು ಹೆಚ್​.ಡಿ.ರೇವಣ್ಣ ತಿಳಿಸಿದ್ದಾರೆ.

ಇದನ್ನೂ ಓದಿ:

Suraj Revanna: ಎಂಎಲ್​ಸಿ ಅಭ್ಯರ್ಥಿ ಸೂರಜ್ ರೇವಣ್ಣಗೆ ಹೊಸ ಸಂಕಷ್ಟ; ನಾಮಪತ್ರ ತಿರಸ್ಕರಿಸಲು ಕೋರಿ ರಿಟ್ ಅರ್ಜಿ ಸಲ್ಲಿಕೆ

College Admission: 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ

Published On - 4:22 pm, Tue, 18 January 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ